ಸುಳ್ಯ : ಪೆರುವಾಜೆ ಗ್ರಾಮದ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಉತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.
ಜ.30 ರಂದು ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ ಮತ್ತು ಶುದ್ಧಿ ಕಲಶ ನಡೆಯಿತು. ಪೂರ್ವಾಹ್ನ ವಿಷ್ಣುಪ್ರಿಯಾ ಮಹಿಳಾ ಭಜನ ಮಂಡಳಿ ಬೆಳಂದೂರು ವಲಯ ಇವರಿಂದ ಭಜನ ಕಾರ್ಯಕ್ರಮ ನಡೆಯಿತು.
ಮಧ್ಯಾಹ್ನ ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಿತು. ಸಂಜೆ ರಂಗಪೂಜೆ, ಮಹೋತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಮಂತ್ರಾಕ್ಷತೆ ನಡೆಯಿತು. ಅನಂತರ ಗುಳಿಗ, ಪಂಜುರ್ಲಿ ನೇಮ, ಜ.31 ರಂದು ಬೆಳಗ್ಗೆ ಶಿರಾಡಿ ದೈವ ನೇಮ ನಡೆಯಿತು.
ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ ಎಂ.ಕೆ.ಬಾಲಚಂದ್ರ ರಾವ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ತಿರುಮಲೇಶ್ವರ ಭಟ್ ಕಾನಾವು, ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶ ಸಮಿತಿಯ ಕಾರ್ಯಾಧ್ಯಕ್ಷ ಸುಧಾಕರ ರೈ ಕುಂಜಾಡಿ, ಉತ್ಸವ ಸಮಿತಿ ಅಧ್ಯಕ್ಷ ಬಿ.ಜಿ.ಭಾಸ್ಕರ ರೈ, ದಯಾನಂದ ಕಾನಾವುಜಾಲು, ಮೊಕ್ತೇಸರರಾದ ಕುಂಬ್ರ ದಯಾಕರ ಆಳ್ವ, ಗೋಪಾಲಕೃಷ್ಣ ಭಟ್ ಕಾನಾವು, ವಸಂತ ಬೈಪಡಿತ್ತಾಯ ಮುಕ್ಕೂರು, ಕುಶಾಲಪ್ಪ ಗೌಡ ಪೆರುವಾಜೆ, ಅರ್ಚಕ ಸುರೇಶ ಉಪಾಧ್ಯಾಯ, ಸುಜಾತ ವಿ.ರಾಜ್.ಕಜೆ, ಪುಷ್ಪಾವತಿ ಎಂ.ಕಂಡಿಪ್ಪಾಡಿ, ರಾಮಚಂದ್ರ ಕೋಡಿಬೈಲು, ಉಮೇಶ್ ಕೆಎಂಬಿ ಮತ್ತು ಸಮಿತಿ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
18.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ್ದ ಮೊದಲ ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್…
ರಾಜ್ಯದ ನೈಋತ್ಯ ಒಳನಾಡಿನಲ್ಲಿ ಸಕ್ರಿಯವಾಗಿದ್ದು ಕರಾವಳಿಯಲ್ಲಿ ಸಾಮಾನ್ಯವಾಗಿತ್ತು. ಆ.20 ರ ವರೆಗೆ ಭಾರಿ…
ಜೀವಿತದಲ್ಲಿ ಬದುಕಿನ ಸಾರವನ್ನೆಲ್ಲಾ ಅನುಭವಿಸಿದ ಏಕೈಕ ವ್ಯಕ್ತಿ ಶ್ರೀಕೃಷ್ಣ. ಪ್ರೀತಿ ಅಂದರೆ ಒಬ್ಬರನ್ನೊಬ್ಬರು…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಂದ್ರಾ, ಒಡಿಶಾ ಕರಾವಳಿಯಲ್ಲಿ ಇದ್ದು, ಆಗಸ್ಟ್ 20,21ರಂದು ಗುಜರಾತ್…
ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…