ಸುಳ್ಯ : ಪೆರುವಾಜೆ ಗ್ರಾಮದ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಉತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.
ಜ.30 ರಂದು ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ ಮತ್ತು ಶುದ್ಧಿ ಕಲಶ ನಡೆಯಿತು. ಪೂರ್ವಾಹ್ನ ವಿಷ್ಣುಪ್ರಿಯಾ ಮಹಿಳಾ ಭಜನ ಮಂಡಳಿ ಬೆಳಂದೂರು ವಲಯ ಇವರಿಂದ ಭಜನ ಕಾರ್ಯಕ್ರಮ ನಡೆಯಿತು.
ಮಧ್ಯಾಹ್ನ ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಿತು. ಸಂಜೆ ರಂಗಪೂಜೆ, ಮಹೋತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಮಂತ್ರಾಕ್ಷತೆ ನಡೆಯಿತು. ಅನಂತರ ಗುಳಿಗ, ಪಂಜುರ್ಲಿ ನೇಮ, ಜ.31 ರಂದು ಬೆಳಗ್ಗೆ ಶಿರಾಡಿ ದೈವ ನೇಮ ನಡೆಯಿತು.
ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ ಎಂ.ಕೆ.ಬಾಲಚಂದ್ರ ರಾವ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ತಿರುಮಲೇಶ್ವರ ಭಟ್ ಕಾನಾವು, ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶ ಸಮಿತಿಯ ಕಾರ್ಯಾಧ್ಯಕ್ಷ ಸುಧಾಕರ ರೈ ಕುಂಜಾಡಿ, ಉತ್ಸವ ಸಮಿತಿ ಅಧ್ಯಕ್ಷ ಬಿ.ಜಿ.ಭಾಸ್ಕರ ರೈ, ದಯಾನಂದ ಕಾನಾವುಜಾಲು, ಮೊಕ್ತೇಸರರಾದ ಕುಂಬ್ರ ದಯಾಕರ ಆಳ್ವ, ಗೋಪಾಲಕೃಷ್ಣ ಭಟ್ ಕಾನಾವು, ವಸಂತ ಬೈಪಡಿತ್ತಾಯ ಮುಕ್ಕೂರು, ಕುಶಾಲಪ್ಪ ಗೌಡ ಪೆರುವಾಜೆ, ಅರ್ಚಕ ಸುರೇಶ ಉಪಾಧ್ಯಾಯ, ಸುಜಾತ ವಿ.ರಾಜ್.ಕಜೆ, ಪುಷ್ಪಾವತಿ ಎಂ.ಕಂಡಿಪ್ಪಾಡಿ, ರಾಮಚಂದ್ರ ಕೋಡಿಬೈಲು, ಉಮೇಶ್ ಕೆಎಂಬಿ ಮತ್ತು ಸಮಿತಿ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…