ಪೆರ್ನಾಜೆ ಪ.ಪೂ ಕಾಲೇಜಿಗೆ ಕಾರ್ಪೊರೇಷನ್ ಬ್ಯಾಂಕ್ ನೌಕರರ ಸಂಘದ ಕೊಡುಗೆ.

December 17, 2019
11:20 AM

ಪೆರ್ನಾಜೆ: ಪೆರ್ನಾಜೆ ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜಿಗೆ ಕಾರ್ಪೊರೇಷನ್ ಬ್ಯಾಂಕ್ ನೌಕರರ ಸಂಘದ ವತಿಯಿಂದ ರೂ 57000 ಮೌಲ್ಯದ ಕೊಡುಗೆ ಹಸ್ತಾಂತರ ಕಾರ್ಯಕ್ರಮವು ನೆರವೇರಿತು.

ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ವಿನ್ಸೆಂಟ್ ಡಿಸೋಜ, ಉಪಾಧ್ಯಕ್ಷರಾದ ಆರ್ ಕೆ ಬಲ್ಲಾಳ್, ವಲಯ ಕಾರ್ಯದರ್ಶಿಗಳಾದ ಸೋಮಶೇಖರ್ ಮತ್ತು ಸದಸ್ಯರಾದ ಈಶ್ವರ ನಾಯಕ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಉಡುಗೊರೆಗಳನ್ನು ಹಸ್ತಾಂತರಿಸಿದರು. ನೌಕರರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ಬ್ಯಾಂಕ್ ನೌಕರರ ಸಂಘ ಆಯೋಜಿಸುತ್ತಿರುವುದನ್ನು ಪ್ರಧಾನ ಕಾರ್ಯದರ್ಶಿಗಳಾದ ವಿನ್ಸೆಂಟ್ ಡಿಸೋಜಾರವರು ಪ್ರಸ್ತುತಪಡಿಸಿದರು. ಸಂಘದ ಪದಾಧಿಕಾರಿಗಳು ಸಂದರ್ಭೋಚಿತವಾಗಿ ಹಿತ ನುಡಿದರು.

ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಚಾರ್ಯರಾದ ಕೆಆರ್ ಗೋಪಾಲಕೃಷ್ಣ ವಹಿಸಿದ್ದರು. ಮುಖ್ಯಗುರುಗಳಾದ ಪಿ ಶ್ರೀಕೃಷ್ಣರವರು ವಂದಿಸಿದರು. 2000 ಲಿಟರ್ ನ ನೀರಿನ ಟ್ಯಾಂಕ್, ಬಣ್ಣದ ಮುದ್ರಣ ಸಮೇತ ಕಂಪ್ಯೂಟರ್, ಕುಡಿಯುವ ನೀರಿನ ಫಿಲ್ಟರ್ ಗಳನ್ನು ಸಂಸ್ಥೆಯ ಮುಖ್ಯಸ್ಥರು ಅಧ್ಯಾಪಕ ಪ್ರತಿನಿಧಿಗಳು ಮತ್ತು ವಿದ್ಯಾರ್ಥಿ ನಾಯಕರು ಸ್ವೀಕರಿಸಿದರು. ಉಪನ್ಯಾಸಕ ಮಂಟಯ್ಯ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ
ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror