Advertisement
ಕಾರ್ಯಕ್ರಮಗಳು

ಪೆರ್ನಾಜೆ ಪ.ಪೂ ಕಾಲೇಜಿಗೆ ಕಾರ್ಪೊರೇಷನ್ ಬ್ಯಾಂಕ್ ನೌಕರರ ಸಂಘದ ಕೊಡುಗೆ.

Share

ಪೆರ್ನಾಜೆ: ಪೆರ್ನಾಜೆ ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜಿಗೆ ಕಾರ್ಪೊರೇಷನ್ ಬ್ಯಾಂಕ್ ನೌಕರರ ಸಂಘದ ವತಿಯಿಂದ ರೂ 57000 ಮೌಲ್ಯದ ಕೊಡುಗೆ ಹಸ್ತಾಂತರ ಕಾರ್ಯಕ್ರಮವು ನೆರವೇರಿತು.

ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ವಿನ್ಸೆಂಟ್ ಡಿಸೋಜ, ಉಪಾಧ್ಯಕ್ಷರಾದ ಆರ್ ಕೆ ಬಲ್ಲಾಳ್, ವಲಯ ಕಾರ್ಯದರ್ಶಿಗಳಾದ ಸೋಮಶೇಖರ್ ಮತ್ತು ಸದಸ್ಯರಾದ ಈಶ್ವರ ನಾಯಕ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಉಡುಗೊರೆಗಳನ್ನು ಹಸ್ತಾಂತರಿಸಿದರು. ನೌಕರರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ಬ್ಯಾಂಕ್ ನೌಕರರ ಸಂಘ ಆಯೋಜಿಸುತ್ತಿರುವುದನ್ನು ಪ್ರಧಾನ ಕಾರ್ಯದರ್ಶಿಗಳಾದ ವಿನ್ಸೆಂಟ್ ಡಿಸೋಜಾರವರು ಪ್ರಸ್ತುತಪಡಿಸಿದರು. ಸಂಘದ ಪದಾಧಿಕಾರಿಗಳು ಸಂದರ್ಭೋಚಿತವಾಗಿ ಹಿತ ನುಡಿದರು.

ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಚಾರ್ಯರಾದ ಕೆಆರ್ ಗೋಪಾಲಕೃಷ್ಣ ವಹಿಸಿದ್ದರು. ಮುಖ್ಯಗುರುಗಳಾದ ಪಿ ಶ್ರೀಕೃಷ್ಣರವರು ವಂದಿಸಿದರು. 2000 ಲಿಟರ್ ನ ನೀರಿನ ಟ್ಯಾಂಕ್, ಬಣ್ಣದ ಮುದ್ರಣ ಸಮೇತ ಕಂಪ್ಯೂಟರ್, ಕುಡಿಯುವ ನೀರಿನ ಫಿಲ್ಟರ್ ಗಳನ್ನು ಸಂಸ್ಥೆಯ ಮುಖ್ಯಸ್ಥರು ಅಧ್ಯಾಪಕ ಪ್ರತಿನಿಧಿಗಳು ಮತ್ತು ವಿದ್ಯಾರ್ಥಿ ನಾಯಕರು ಸ್ವೀಕರಿಸಿದರು. ಉಪನ್ಯಾಸಕ ಮಂಟಯ್ಯ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

4 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

8 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago