ಪೆರ್ನಾಜೆ: ಪೆರ್ನಾಜೆ ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜಿಗೆ ಕಾರ್ಪೊರೇಷನ್ ಬ್ಯಾಂಕ್ ನೌಕರರ ಸಂಘದ ವತಿಯಿಂದ ರೂ 57000 ಮೌಲ್ಯದ ಕೊಡುಗೆ ಹಸ್ತಾಂತರ ಕಾರ್ಯಕ್ರಮವು ನೆರವೇರಿತು.
ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ವಿನ್ಸೆಂಟ್ ಡಿಸೋಜ, ಉಪಾಧ್ಯಕ್ಷರಾದ ಆರ್ ಕೆ ಬಲ್ಲಾಳ್, ವಲಯ ಕಾರ್ಯದರ್ಶಿಗಳಾದ ಸೋಮಶೇಖರ್ ಮತ್ತು ಸದಸ್ಯರಾದ ಈಶ್ವರ ನಾಯಕ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಉಡುಗೊರೆಗಳನ್ನು ಹಸ್ತಾಂತರಿಸಿದರು. ನೌಕರರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ಬ್ಯಾಂಕ್ ನೌಕರರ ಸಂಘ ಆಯೋಜಿಸುತ್ತಿರುವುದನ್ನು ಪ್ರಧಾನ ಕಾರ್ಯದರ್ಶಿಗಳಾದ ವಿನ್ಸೆಂಟ್ ಡಿಸೋಜಾರವರು ಪ್ರಸ್ತುತಪಡಿಸಿದರು. ಸಂಘದ ಪದಾಧಿಕಾರಿಗಳು ಸಂದರ್ಭೋಚಿತವಾಗಿ ಹಿತ ನುಡಿದರು.
ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಚಾರ್ಯರಾದ ಕೆಆರ್ ಗೋಪಾಲಕೃಷ್ಣ ವಹಿಸಿದ್ದರು. ಮುಖ್ಯಗುರುಗಳಾದ ಪಿ ಶ್ರೀಕೃಷ್ಣರವರು ವಂದಿಸಿದರು. 2000 ಲಿಟರ್ ನ ನೀರಿನ ಟ್ಯಾಂಕ್, ಬಣ್ಣದ ಮುದ್ರಣ ಸಮೇತ ಕಂಪ್ಯೂಟರ್, ಕುಡಿಯುವ ನೀರಿನ ಫಿಲ್ಟರ್ ಗಳನ್ನು ಸಂಸ್ಥೆಯ ಮುಖ್ಯಸ್ಥರು ಅಧ್ಯಾಪಕ ಪ್ರತಿನಿಧಿಗಳು ಮತ್ತು ವಿದ್ಯಾರ್ಥಿ ನಾಯಕರು ಸ್ವೀಕರಿಸಿದರು. ಉಪನ್ಯಾಸಕ ಮಂಟಯ್ಯ ಕಾರ್ಯಕ್ರಮ ನಿರೂಪಿಸಿದರು.
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…