ಉಡುಪಿ: ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಸುಧಾರಣೆಯಾಗಿಲ್ಲ ಎಂದು ಮಣಿಪಾಲ ಕೆಎಂಸಿ ಆಸ್ಪತ್ರೆಯಿಂದ ಬಿಡುಗಡೆಯಾದ ಹೆಲ್ತ್ ಬುಲೆಟಿನ್ ನಲ್ಲಿ ವೈದ್ಯರು ತಿಳಿಸಿದ್ದಾರೆ.
ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ನಲ್ಲಿ ಶ್ರೀಗಳ ಆರೋಗ್ಯ ಗಂಭೀರ ಸ್ಥಿತಿಯಲ್ಲಿಯೇ ಇದೆ ಎಂದು ವೈದ್ಯರು ಉಲ್ಲೇಖಿಸಿದ್ದಾರೆ. ಶ್ರೀಗಳು ಇನ್ನೂ ಕೂಡ ಜೀವ ರಕ್ಷಕ ಸಾಧನಗಳ ಅಳವಡಿಕೆಯಲ್ಲಿ ಇದ್ದಾರೆ. ಪ್ರಜ್ಞಾ ಸ್ಥಿತಿಯಲ್ಲಿ ಹೆಚ್ಚೇನೂ ಸುಧಾರಣೆ ಕಂಡುಬಂದಿಲ್ಲ. ಗಂಭೀರ ಸ್ಥಿತಿಯಲ್ಲೇ ಕೃತಕ ಉಸಿರಾಟ ವ್ಯವಸ್ಥೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಅಧೀಕ್ಷಕರು ತಿಳಿಸಿದರು.
ಬೆಂಗಳೂರಿನ ಮಣಿಪಾಲ ಆಸ್ಪತ್ರೆಯ ತಜ್ಞರ ನೆರವಿನ ಜತೆಗೆ ದೆಹಲಿಯ ಏಮ್ಸ್ ವೈದ್ಯ ತಜ್ಞರ ಸಲಹೆ-ಸೂಚನೆಗಳ ಮೇರೆಗೆ ಚಿಕಿತ್ಸೆ ಮುಂದುವರೆದಿದೆ. ಡಿ.20ರಂದು ಪೇಜಾವರ ಶ್ರೀಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…