ಉಡುಪಿ: ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಸುಧಾರಣೆಯಾಗಿಲ್ಲ ಎಂದು ಮಣಿಪಾಲ ಕೆಎಂಸಿ ಆಸ್ಪತ್ರೆಯಿಂದ ಬಿಡುಗಡೆಯಾದ ಹೆಲ್ತ್ ಬುಲೆಟಿನ್ ನಲ್ಲಿ ವೈದ್ಯರು ತಿಳಿಸಿದ್ದಾರೆ.
ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ನಲ್ಲಿ ಶ್ರೀಗಳ ಆರೋಗ್ಯ ಗಂಭೀರ ಸ್ಥಿತಿಯಲ್ಲಿಯೇ ಇದೆ ಎಂದು ವೈದ್ಯರು ಉಲ್ಲೇಖಿಸಿದ್ದಾರೆ. ಶ್ರೀಗಳು ಇನ್ನೂ ಕೂಡ ಜೀವ ರಕ್ಷಕ ಸಾಧನಗಳ ಅಳವಡಿಕೆಯಲ್ಲಿ ಇದ್ದಾರೆ. ಪ್ರಜ್ಞಾ ಸ್ಥಿತಿಯಲ್ಲಿ ಹೆಚ್ಚೇನೂ ಸುಧಾರಣೆ ಕಂಡುಬಂದಿಲ್ಲ. ಗಂಭೀರ ಸ್ಥಿತಿಯಲ್ಲೇ ಕೃತಕ ಉಸಿರಾಟ ವ್ಯವಸ್ಥೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಅಧೀಕ್ಷಕರು ತಿಳಿಸಿದರು.
ಬೆಂಗಳೂರಿನ ಮಣಿಪಾಲ ಆಸ್ಪತ್ರೆಯ ತಜ್ಞರ ನೆರವಿನ ಜತೆಗೆ ದೆಹಲಿಯ ಏಮ್ಸ್ ವೈದ್ಯ ತಜ್ಞರ ಸಲಹೆ-ಸೂಚನೆಗಳ ಮೇರೆಗೆ ಚಿಕಿತ್ಸೆ ಮುಂದುವರೆದಿದೆ. ಡಿ.20ರಂದು ಪೇಜಾವರ ಶ್ರೀಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…