ಉಡುಪಿ: ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಅವರಿಗೆ ದೀರ್ಘಕಾಲದ ಚಿಕಿತ್ಸೆ ಅಗತ್ಯವಿದೆ ಎಂದು ಮಣಿಪಾಲ ಕೆಎಂಸಿ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀಗಳಿಗೆ ಎಲ್ಲ ರೀತಿಯ ಅಗತ್ಯ ಪರೀಕ್ಷೆಗಳನ್ನೂ ಮಾಡಲಾಗಿದೆ. ಎಲ್ಲವೂ ನಾರ್ಮಲ್ ಆಗಿದೆ. ಅವರಿಗೆ ನ್ಯುಮೋನಿಯಾ ಹೊರತುಪಡಿಸಿ ಬೇರೆ ಯಾವುದೇ ತೊಂದರೆ ಇಲ್ಲ. ಶ್ರೀಗಳಿಗೆ ದೀರ್ಘಕಾಲದ ಚಿಕಿತ್ಸೆ ಅಗತ್ಯವಿದೆ ಎಂದರು. ಬೆಂಗಳೂರಿನ ಇಬ್ಬರು ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ದೆಹಲಿ ಆಸ್ಪತ್ರೆ ವೈದ್ಯರೊಂದಿಗೆ ನಿರಂತರ ಸಂಪರ್ಕ ಇಟ್ಟುಕೊಳ್ಳಲಾಗಿದೆ ಎಂದು ತಿಳಿಸಿದರು.
ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ಆರೋಗ್ಯ ಸಚಿವಾಲಯ ನಮ್ಮ ಸಂಪರ್ಕದಲ್ಲಿದ್ದು, ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ ಎಂದು ಅವಿನಾಶ್ ವಿವರಿಸಿದರು. ಶ್ರೀಗಳಿಗೆ ಕೆಎಂಸಿಯಲ್ಲೆ ಚಿಕಿತ್ಸೆ ಮುಂದುವರಿಯಲಿದೆ ಎಂದರು.
ಬೆಂಗಳೂರಿನ ಮಣಿಪಾಲ ಸಮೂಹ ಆಸ್ಪತ್ರೆ ತುರ್ತು ಚಿಕಿತ್ಸೆ ವಿಭಾಗ, ಶ್ವಾಸಕೋಶ ತಜ್ಞ ವೈದ್ಯರಾದ ಡಾ.ರಾಜೇಶ್ ಶೆಟ್ಟಿ, ಡಾ.ಸತ್ಯನಾರಾಯಣ ಮಾತನಾಡಿ, ಪೇಜಾವರ ಶ್ರೀಗಳಿಗೆ ನಿಧಾನವಾಗಿ ಪ್ರಜ್ಞೆ ಮರುಕಳಿಸುತ್ತಿದೆ, ವಯಸ್ಸಾಗಿದ್ದರಿಂದ ಆರೋಗ್ಯ ಸುಧಾರಣೆಗೆ ಇನ್ನಷ್ಟು ಸಮಯ ಬೇಕು. ದೇಹದ ಎಲ್ಲ ಅಂಗಾಂಗಗಳೂ ಚೆನ್ನಾಗಿವೆ. ಆದರೆ ಶ್ವಾಸಕೋಶದಲ್ಲಿ ಮಾತ್ರ ಸೋಂಕು ಇದೆ. ನಿಧಾನವಾಗಿ ಸೊಂಕು ನಿವಾರಣೆ ಆಗಬೇಕಿದೆ. ವೆಂಟಿಲೇಟರ್ ನಲ್ಲೆ ಚಿಕಿತ್ಸೆ ನಡೆಯುತ್ತಿದೆ ಎಂದರು.
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…