ಉಡುಪಿ: ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಅವರಿಗೆ ದೀರ್ಘಕಾಲದ ಚಿಕಿತ್ಸೆ ಅಗತ್ಯವಿದೆ ಎಂದು ಮಣಿಪಾಲ ಕೆಎಂಸಿ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀಗಳಿಗೆ ಎಲ್ಲ ರೀತಿಯ ಅಗತ್ಯ ಪರೀಕ್ಷೆಗಳನ್ನೂ ಮಾಡಲಾಗಿದೆ. ಎಲ್ಲವೂ ನಾರ್ಮಲ್ ಆಗಿದೆ. ಅವರಿಗೆ ನ್ಯುಮೋನಿಯಾ ಹೊರತುಪಡಿಸಿ ಬೇರೆ ಯಾವುದೇ ತೊಂದರೆ ಇಲ್ಲ. ಶ್ರೀಗಳಿಗೆ ದೀರ್ಘಕಾಲದ ಚಿಕಿತ್ಸೆ ಅಗತ್ಯವಿದೆ ಎಂದರು. ಬೆಂಗಳೂರಿನ ಇಬ್ಬರು ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ದೆಹಲಿ ಆಸ್ಪತ್ರೆ ವೈದ್ಯರೊಂದಿಗೆ ನಿರಂತರ ಸಂಪರ್ಕ ಇಟ್ಟುಕೊಳ್ಳಲಾಗಿದೆ ಎಂದು ತಿಳಿಸಿದರು.
ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ಆರೋಗ್ಯ ಸಚಿವಾಲಯ ನಮ್ಮ ಸಂಪರ್ಕದಲ್ಲಿದ್ದು, ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ ಎಂದು ಅವಿನಾಶ್ ವಿವರಿಸಿದರು. ಶ್ರೀಗಳಿಗೆ ಕೆಎಂಸಿಯಲ್ಲೆ ಚಿಕಿತ್ಸೆ ಮುಂದುವರಿಯಲಿದೆ ಎಂದರು.
ಬೆಂಗಳೂರಿನ ಮಣಿಪಾಲ ಸಮೂಹ ಆಸ್ಪತ್ರೆ ತುರ್ತು ಚಿಕಿತ್ಸೆ ವಿಭಾಗ, ಶ್ವಾಸಕೋಶ ತಜ್ಞ ವೈದ್ಯರಾದ ಡಾ.ರಾಜೇಶ್ ಶೆಟ್ಟಿ, ಡಾ.ಸತ್ಯನಾರಾಯಣ ಮಾತನಾಡಿ, ಪೇಜಾವರ ಶ್ರೀಗಳಿಗೆ ನಿಧಾನವಾಗಿ ಪ್ರಜ್ಞೆ ಮರುಕಳಿಸುತ್ತಿದೆ, ವಯಸ್ಸಾಗಿದ್ದರಿಂದ ಆರೋಗ್ಯ ಸುಧಾರಣೆಗೆ ಇನ್ನಷ್ಟು ಸಮಯ ಬೇಕು. ದೇಹದ ಎಲ್ಲ ಅಂಗಾಂಗಗಳೂ ಚೆನ್ನಾಗಿವೆ. ಆದರೆ ಶ್ವಾಸಕೋಶದಲ್ಲಿ ಮಾತ್ರ ಸೋಂಕು ಇದೆ. ನಿಧಾನವಾಗಿ ಸೊಂಕು ನಿವಾರಣೆ ಆಗಬೇಕಿದೆ. ವೆಂಟಿಲೇಟರ್ ನಲ್ಲೆ ಚಿಕಿತ್ಸೆ ನಡೆಯುತ್ತಿದೆ ಎಂದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…