ಉಡುಪಿ: ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಅವರಿಗೆ ದೀರ್ಘಕಾಲದ ಚಿಕಿತ್ಸೆ ಅಗತ್ಯವಿದೆ ಎಂದು ಮಣಿಪಾಲ ಕೆಎಂಸಿ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀಗಳಿಗೆ ಎಲ್ಲ ರೀತಿಯ ಅಗತ್ಯ ಪರೀಕ್ಷೆಗಳನ್ನೂ ಮಾಡಲಾಗಿದೆ. ಎಲ್ಲವೂ ನಾರ್ಮಲ್ ಆಗಿದೆ. ಅವರಿಗೆ ನ್ಯುಮೋನಿಯಾ ಹೊರತುಪಡಿಸಿ ಬೇರೆ ಯಾವುದೇ ತೊಂದರೆ ಇಲ್ಲ. ಶ್ರೀಗಳಿಗೆ ದೀರ್ಘಕಾಲದ ಚಿಕಿತ್ಸೆ ಅಗತ್ಯವಿದೆ ಎಂದರು. ಬೆಂಗಳೂರಿನ ಇಬ್ಬರು ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ದೆಹಲಿ ಆಸ್ಪತ್ರೆ ವೈದ್ಯರೊಂದಿಗೆ ನಿರಂತರ ಸಂಪರ್ಕ ಇಟ್ಟುಕೊಳ್ಳಲಾಗಿದೆ ಎಂದು ತಿಳಿಸಿದರು.
ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ಆರೋಗ್ಯ ಸಚಿವಾಲಯ ನಮ್ಮ ಸಂಪರ್ಕದಲ್ಲಿದ್ದು, ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ ಎಂದು ಅವಿನಾಶ್ ವಿವರಿಸಿದರು. ಶ್ರೀಗಳಿಗೆ ಕೆಎಂಸಿಯಲ್ಲೆ ಚಿಕಿತ್ಸೆ ಮುಂದುವರಿಯಲಿದೆ ಎಂದರು.
ಬೆಂಗಳೂರಿನ ಮಣಿಪಾಲ ಸಮೂಹ ಆಸ್ಪತ್ರೆ ತುರ್ತು ಚಿಕಿತ್ಸೆ ವಿಭಾಗ, ಶ್ವಾಸಕೋಶ ತಜ್ಞ ವೈದ್ಯರಾದ ಡಾ.ರಾಜೇಶ್ ಶೆಟ್ಟಿ, ಡಾ.ಸತ್ಯನಾರಾಯಣ ಮಾತನಾಡಿ, ಪೇಜಾವರ ಶ್ರೀಗಳಿಗೆ ನಿಧಾನವಾಗಿ ಪ್ರಜ್ಞೆ ಮರುಕಳಿಸುತ್ತಿದೆ, ವಯಸ್ಸಾಗಿದ್ದರಿಂದ ಆರೋಗ್ಯ ಸುಧಾರಣೆಗೆ ಇನ್ನಷ್ಟು ಸಮಯ ಬೇಕು. ದೇಹದ ಎಲ್ಲ ಅಂಗಾಂಗಗಳೂ ಚೆನ್ನಾಗಿವೆ. ಆದರೆ ಶ್ವಾಸಕೋಶದಲ್ಲಿ ಮಾತ್ರ ಸೋಂಕು ಇದೆ. ನಿಧಾನವಾಗಿ ಸೊಂಕು ನಿವಾರಣೆ ಆಗಬೇಕಿದೆ. ವೆಂಟಿಲೇಟರ್ ನಲ್ಲೆ ಚಿಕಿತ್ಸೆ ನಡೆಯುತ್ತಿದೆ ಎಂದರು.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…