Advertisement
ಸುದ್ದಿಗಳು

ಪೇರಡ್ಕ ಸರ್ವಧರ್ಮ ಸಮ್ಮೇಳನ

Share

ಸಂಪಾಜೆ: ಪೇರಡ್ಕ ಅತ್ಯಂತ ಪವಿತ್ರ ಕ್ಷೇತ್ರ ಸರ್ವಧರ್ಮೀಯರು ಇಂದಿಗೂ ಭಕ್ತಿಯಿಂದ ಕಾಣಿಕೆಯನ್ನು ನೀಡುತ್ತಿದ್ದಾರೆ . ಪ್ರೀತಿ ಮತ್ತು ಸಹೋದರತೆಯಿಂದ ಬಾಳುತ್ತಿದ್ದಾರೆ. ಈ ಕ್ಷೇತ್ರ ಸರ್ವಧರ್ಮೀಯ ಸಂಖೇತವಾಗಿ ಉಳಿದಿದೆ ಎಂದು ಕರ್ನಾಟಕ ರಾಜ್ಯ ಜಾತ್ಯತೀತ ಜನತಾದಳ ಉಪಾಧ್ಯಕ್ಷ ಎಮ್.ಬಿ. ಸದಾಶಿವ ಹೇಳಿದರು.

Advertisement
Advertisement

ಅವರು ಪೇರಡ್ಕ ದರ್ಗಾ ಶರೀಫ್ ಉರೂಸ್ ಕಾರ್ಯಕ್ರಮದಲ್ಲಿ ತೆಕ್ಕಿಲ್ ಮಹಮ್ಮದ್ ಹಾಜಿ ವೇದಿಕೆಯಲ್ಲಿ ನಡೆದ ಸರ್ವಧರ್ಮ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಭಾಷಣವನ್ನು ರಾಜ್ಯ ಎಸ್ ಕೆ ಎಸ್ ಎಸ್ಎಫ್ ರಾಜ್ಯಾಧ್ಯಕ್ಷರಾದ ಮೌಲಾನಾ ಅನೀಸ್ ಕೌಸರಿಯವರು ಮಾತನಾಡಿ ನಮ್ಮ ಭಾಂದವ್ಯಗಳು ಕಲುಶಿತಗೊಂಡಿಲ್ಲ, ಆದರೆ ಈಗಿನ ಮಾಧ್ಯಮದಿಂದ ಬರುವ ಕಲುಷಿತ ವರದಿಗಳಿಂದಾಗಿ ನಮ್ಮ ಸ್ವಸ್ಥ್ಯ ಸಮಾಜ ಕೆಟ್ಟು ಹೋಗಿದೆ. ನಾವು ಸಮಾಜದಲ್ಲಿ ಮಾನವರಾಗಿ ಮನುಷ್ಯರಾಗಿ ಸೌಹಾರ್ದತೆಯಿಂದ ಬದುಕಬೇಕೆಂದರು. ಇನ್ನೋರ್ವ ಮುಖ್ಯ ಆತಿಥಿ ಸಂಪಾಜೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ ಮಾತನಾಡಿ ಹಿರಿಯರು ಹಾಕಿಕೊಟ್ಟ ಮಾರ್ಗದಲ್ಲಿಯೇ ಇಂದಿಗೂ ಈ ಪವಿತ್ರ ಕ್ಷೇತ್ರದಲ್ಲಿ ಎಲ್ಲಾ ಧರ್ಮದವರನ್ನು ಕರೆಸಿ ಸರ್ವಧರ್ಮದಂತಹ ಕಾರ್ಯಕ್ರಮವನ್ನು ಮಾಡುತ್ತಿರುವುದು ಶ್ಲಾಘನೀಯ ಎಂದರು.

Advertisement

ಕಾರ್ಮಿಕ ಸಂಘದ ಮುಖಂಡ ಕೆ.ಪಿ.ಜೋನಿ ಮಾತನಾಡಿ ಸಾಮರಸ್ಯ ಬದುಕಿಗಾಗಿ ಎಲ್ಲಾ ಧರ್ಮದೊಂದಿಗೆ ಬೆರೆತು ಜೀವನ ನಡೆಸಬೇಕೆಂದರು. ರಕ್ತದಾನಿ ಪಿ.ಬಿ.ಸುಧಾಕರ ರೈ ಮಾತನಾಡಿ ನಿಜ ಜೀವನದಲ್ಲಿ ನಾವು ಒಳ್ಳೆಯ ಕೆಲಸ ಮಾಡಿದರೆ ಜನ ನಮ್ಮನ್ನು ಗುರುತಿಸುತ್ತಾರೆ. ಇಲ್ಲಿನ ವಿಖಾಯ ತಂಡದಂತಹ ತಂಡವು ಅಶಕ್ತರಿಗೆ ಸಹಾಯ ಮಾಡುತ್ತಿರುವ ಮೂಲಕ ಸಮಾಜದ ಗೌರವವನ್ನು ಪಡೆದಿದೆ ಎಂದರು. ಕೊಡಗು ಜಿಲ್ಲಾ ವಕ್ಫ್ ಬೋರ್ಡ್ ಚೇರ್ಮನ್ ಯಾಕುಬ್ ಮಾತನಾಡಿ ಇಲ್ಲಿನ ಉರೂಸ್ ಕಾರ್ಯಕ್ರಮದಲ್ಲಿ ಸರ್ವ ಧರ್ಮಿಯರನ್ನು ಕರೆಸಿ ಸೌಹಾರ್ದ ಕೂಟವನ್ನು ನಡೆಸುತ್ತಿರುವುದು ಶ್ಲಾಘನೀಯ ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ಮಹಿಯ್ಯದ್ದೀನ್ ಜುಮ್ಮಾ ಮಸೀದಿ ಗೌರವಧ್ಯಕ್ಷ ರಾದ ಟಿ.ಎಮ್ ಶಹೀದ್ ತೆಕ್ಕಿಲ್ ವಹಿಸಿ ಮಾತನಾಡಿ ನಮ್ಮ ಹಿರಿಯರಾದ ತೆಕ್ಕಿಲ್ ಕುಟುಂಬ ,ಉಳುವಾರು ಕುಟುಂಬ ,ಪೇರಡ್ಕ ಕುಟುಂಬ ,ಮಹಾಬಲ ಭಟ್, ವಿ.ಪಿ.ಕೋಯಿಲೋ ಸಣ್ಣಯ್ಯ ಪಟೇಲ್, ಕುಯಿಂತೋಡು ಪಠೇಲ್ ರಂತಹ ಹಿರಿಯರು ಈ ಪ್ರದೇಶದಲ್ಲಿ ಕೃಷಿಕರಾಗಿ ಪರಸ್ಪರ ಸೌಹಾರ್ದ ಮತ್ತು ಸಾಮರಸ್ಯದಿಂದ ಜೀವನ ನಡೆಸಿದರ ಫಲವಾಗಿ ಸಂಪಾಜೆ ಗ್ರಾಮದಲ್ಲಿ ಪೇರಡ್ಕ ಪ್ರದೇಶವು ಸೌಹಾರ್ದತೆಗೆ ಹೆಸರುವಾಸಿಯಾಗಿದೆ ಎಂದರು.

Advertisement

ಅತಿಥಿಯಾಗಿ ಸಂಪಾಜೆ ವರ್ತಕರ ಸಂಘದ ಅಧ್ಯಕ್ಷ ಯು.ಬಿ.ಚಕ್ರಪಾಣಿ, ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ತೊಡಿಕಾನ ವ್ಯವಸ್ಥಾಪನಾ ಅಧ್ಯಕ್ಷ ಕೇಶವ ಕೊಳಲುಮೂಲೆ, ಡಾ.ಉಮ್ಮರ್ ಬೀಜದಕಟ್ಟೆ, ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎಸ್ .ಸಂಶುದ್ದೀನ್, ಸುಳ್ಯ ನಗರ ಪಂಚಾಯತ್ ಮಾಜಿ ಸದಸ್ಯ ಕೆ.ಎಮ್ .ಮುಸ್ತಫಾ, ಎಸ್ ಕೆ ಎಸ್ ಎಸ್ ಎಫ್ ಟ್ರೆಂಡ್ ಜಿಲ್ಲಾ ನಾಯಕರಾದ ಇಕ್ಬಾಲ್ ಬಾಳಿಲ, ತೀರ್ಥ ರಾಮ ಪರ್ನೋಜಿ, ಸುಳ್ಯ ನಗರ ಪಂಚಾಯತ್ ಸದಸ್ಯ ರಾದ ಕೆ.ಎಸ್ ಉಮ್ಮರ್, ಎಸ್ ಡಿಪಿ ಐ ಸುಳ್ಯ ತಾಲ್ಲೂಕು ಅಧ್ಯಕ್ಷ ಕಲಾಂ, ಸುಳ್ಯ ಯತೀಂಖಾನ ಅಧ್ಯಕ್ಷ ಮಜೀದ್ ಜನತಾ, ಶಾಫಿ ದಾರಿಮಿ ಅಜ್ಜಾವರ, ಜನಾರ್ಧನ ಪೇರಡ್ಕ, ಜ್ಞಾನಶೀಲ ಕಲ್ಲುಗುಂಡಿ, ಸತ್ಯಜಿತ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು .

ದುವಾವನ್ನು ಸ್ಥಳೀಯ ಖತೀಬರಾದ ಅಶ್ರಫ್ ಫೈಝಿ ನೇರವೆರಿಸಿದರು. ವೇದಿಕೆಯಲ್ಲಿ ಜಮಾ ಅತ್ ಅಧ್ಯಕ್ಷ ಟಿ.ಇ.ಆರೀಫ್ ತೆಕ್ಕಿಲ್, ಝಕರಿಯಾ ದಾರಿಮಿ, ಅಲಿ ಹಾಜಿ, ಪಾಂಡಿ ಅಬ್ಬಾಸ್ ,ಬಶೀರ್ ತೆಕ್ಕಿಲ್, ಮೊದಲಾದವರು ಉಪಸ್ಥಿತರಿದ್ದರು . ಜಿ.ಕೆ.ಹಮೀದ್ ಸ್ವಾಗತಿಸಿ ಅಬ್ದುಲ್‌ ಖಾದರ್ ವಂದಿಸಿದರು. ಅಕ್ಬರ್ ಕರಾವಳಿ ನಿರೂಪಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಯಲ್ಲಿ ಯುವ ರೈತನ ಸಾಧನೆ : 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

8 mins ago

ನೀವು ನಿರಂತರವಾಗಿ ಹೆಡ್‌ಫೋನ್ ಬಳಸುತ್ತಿದ್ದರೆ ಜಾಗರೂಕರಾಗಿರಿ..! | ಕಿವಿಯ ಮೇಲೆ ಪರಿಣಾಮಗಳು…..

ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್‌ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್‌ಫೋನ್(Ear Phone)…

20 hours ago

ಸೆಗಣಿಯಲ್ಲಡಗಿದೆ ಬೆಳೆಗೆ ಅವಶ್ಯಕ ಪೋಷಕಾಂಶಗಳು | ನೈಸರ್ಗಿಕ ಕೃಷಿಯಲ್ಲಿ ದೇಸೀ ಗೋವಿನ ಮಹತ್ವ ಬಹಳ ಮುಖ್ಯ |

ಸಸ್ಯಗಳು ಆರೋಗ್ಯಪೂರ್ಣವಾಗಿರಬೇಕಾದರೆ ಸರಿಯಾದ ಪೋಷಕಾಂಶಗಳು ಬೇಕು. ಗೋವಿನ ಸಗಣಿಯಲ್ಲಿ(Cow dung) ಪೂರ್ಣ ಪ್ರಮಾಣದ…

21 hours ago

ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು

ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…

22 hours ago

ಹವಾಮಾನ ಸಂಕಷ್ಟ | ಕಾದ ಭೂಮಿಗೆ ‘ರೆಡ್‌ ಅಲರ್ಟ್‌’ | ಜಗತ್ತಿನ ತಾಪಮಾನ 1.5 ಡಿಗ್ರಿ ಇಳಿಕೆ ಸಾಧ್ಯವಾಗುತ್ತಿಲ್ಲ…!

ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…

22 hours ago

Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |

ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…

23 hours ago