ಸುಳ್ಯ: ಮಂಡೆಕೋಲು ಗ್ರಾಮದ ಪೇರಾಲು ಮೈತ್ತಡ್ಕ ಪಯಸ್ವಿನಿ ಕ್ರೀಡಾ ಮತ್ತು ಕಲಾ ಸಂಘದ ರಜತ ಸಂಭ್ರಮ ಡಿ.29, ಜನವರಿ 4 ಮತ್ತು 5 ರಂದು ಪೇರಾಲು ಮೈತ್ತಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಲಿದೆ ಎಂದು ಸಂಘದ ರಜತ ಮಹೋತ್ಸವ ಸಮಿತಿಯ ಅಧ್ಯಕ್ಷ ಮಂಜುನಾಥ ಪೇರಾಲು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಡಿ.29 ರಂದು ಕ್ರೀಡಾಕೂಟ ನಡೆಯಲಿದೆ. ಪೂ10 ರಿಂದ ಮಹಿಳೆಯರ ಮುಕ್ತ ಹಗ್ಗ ಜಗ್ಗಾಟ ಪಂದ್ಯಾಟ ನಡೆಯಲಿದೆ. ಸಂಜೆ 6ರಿಂದ 65 ಕೆ.ಜಿ.ಒಳಗಿನ ಪುರುಷರ ವಿಭಾಗದ ಮುಕ್ತ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ನಡೆಯಲಿದೆ. ಜ.4ರಂದು ಸಾರ್ವಜನಿಕರಿಗೆ ವಿವಿಧ ಸ್ಪರ್ಧಾ ಕಾರ್ಯಕ್ರಮಗಳು, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಜ.5ರಂದು ಬೆಳಿಗ್ಗೆ 9 ರಿಂದ ಲೋಕ ಕಲ್ಯಾಣಾರ್ಥವಾಗಿ ಶ್ರೀ ಶನೀಶ್ವರ ಪೂಜೆ ನಡೆಯಲಿದೆ. ಸಂಜೆ 6ರಿಂದ ಸಾಂಸ್ಕೃತಿಕ ವೈಭವ ನಡೆಯಲಿದೆ. ರಾತ್ರಿ ಎಂಟರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು ಶಾಸಕ ಎಸ್.ಅಂಗಾರ ಉದ್ಘಾಟಿಸುವರು. ಸಮಾರಂಭದಲ್ಲಿ ಸಾಧಕರಿಗೆ ಸನ್ಮಾನ, ನಿವೃತ್ತ ಯೋಧರಿಗೆ ಸನ್ಮಾನ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ರಜತ ಮಹೋತ್ಸವ ಸಮಿತಿಯ ಸಂಚಾಲಕ ಸುಂದರ ಗೌಡ ಕಾಡುಸೊರಂಜ, ಪಯಸ್ವಿನಿ ಕ್ರೀಡಾ ಮತ್ತು ಕಲಾ ಸಂಘದ ಕಾರ್ಯದರ್ಶಿ ದಿವಾಕರ ಶಿರಾಜೆ, ಯಾಹ್ಯಾ ಎಂ.ಬಿ, ಪ್ರಕಾಶ್ ಕಾಡುಸೊರಂಜ ಉಪಸ್ಥಿತರಿದ್ದರು
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…