ಸುಳ್ಯ: ಮಂಡೆಕೋಲು ಗ್ರಾಮದ ಪೇರಾಲು ಮೈತ್ತಡ್ಕ ಪಯಸ್ವಿನಿ ಕ್ರೀಡಾ ಮತ್ತು ಕಲಾ ಸಂಘದ ರಜತ ಸಂಭ್ರಮ ಡಿ.29, ಜನವರಿ 4 ಮತ್ತು 5 ರಂದು ಪೇರಾಲು ಮೈತ್ತಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಲಿದೆ ಎಂದು ಸಂಘದ ರಜತ ಮಹೋತ್ಸವ ಸಮಿತಿಯ ಅಧ್ಯಕ್ಷ ಮಂಜುನಾಥ ಪೇರಾಲು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಡಿ.29 ರಂದು ಕ್ರೀಡಾಕೂಟ ನಡೆಯಲಿದೆ. ಪೂ10 ರಿಂದ ಮಹಿಳೆಯರ ಮುಕ್ತ ಹಗ್ಗ ಜಗ್ಗಾಟ ಪಂದ್ಯಾಟ ನಡೆಯಲಿದೆ. ಸಂಜೆ 6ರಿಂದ 65 ಕೆ.ಜಿ.ಒಳಗಿನ ಪುರುಷರ ವಿಭಾಗದ ಮುಕ್ತ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ನಡೆಯಲಿದೆ. ಜ.4ರಂದು ಸಾರ್ವಜನಿಕರಿಗೆ ವಿವಿಧ ಸ್ಪರ್ಧಾ ಕಾರ್ಯಕ್ರಮಗಳು, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಜ.5ರಂದು ಬೆಳಿಗ್ಗೆ 9 ರಿಂದ ಲೋಕ ಕಲ್ಯಾಣಾರ್ಥವಾಗಿ ಶ್ರೀ ಶನೀಶ್ವರ ಪೂಜೆ ನಡೆಯಲಿದೆ. ಸಂಜೆ 6ರಿಂದ ಸಾಂಸ್ಕೃತಿಕ ವೈಭವ ನಡೆಯಲಿದೆ. ರಾತ್ರಿ ಎಂಟರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು ಶಾಸಕ ಎಸ್.ಅಂಗಾರ ಉದ್ಘಾಟಿಸುವರು. ಸಮಾರಂಭದಲ್ಲಿ ಸಾಧಕರಿಗೆ ಸನ್ಮಾನ, ನಿವೃತ್ತ ಯೋಧರಿಗೆ ಸನ್ಮಾನ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ರಜತ ಮಹೋತ್ಸವ ಸಮಿತಿಯ ಸಂಚಾಲಕ ಸುಂದರ ಗೌಡ ಕಾಡುಸೊರಂಜ, ಪಯಸ್ವಿನಿ ಕ್ರೀಡಾ ಮತ್ತು ಕಲಾ ಸಂಘದ ಕಾರ್ಯದರ್ಶಿ ದಿವಾಕರ ಶಿರಾಜೆ, ಯಾಹ್ಯಾ ಎಂ.ಬಿ, ಪ್ರಕಾಶ್ ಕಾಡುಸೊರಂಜ ಉಪಸ್ಥಿತರಿದ್ದರು
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…