Advertisement
ರಾಜ್ಯ

ಪೇಸ್‌ ಬುಕ್‌ ಗಲಾಟೆ ಬೀದಿಗೆ ಬಂತು | ಹಿಂಸಾಚಾರ – ಕರ್ಫ್ಯೂ | ಎಸ್‌ ಡಿ ಪಿ ಐ ಮುಖಂಡನ ಸಹಿತ 110 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು |

Share

ಬೆಂಗಳೂರು:ಪೇಸ್‌ ಬುಕ್‌ ನಲ್ಲಿ  ಅವಹೇಳನಕಾರಿ ಪೋಸ್ಟ್‌ ಹಾಕಿದ ಹಿನ್ನೆಲೆಯಲ್ಲಿ ಉದ್ರಿಕ್ತ ಗುಂಪು ಮಂಗಳವಾರ ರಾತ್ರಿ ಗಲಭೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಯತ್ನಿಸಿದ   ಪೊಲೀಸರು ಮತ್ತು ಉದ್ರಿಕ್ತರ ನಡುವಿನ ಘರ್ಷಣೆ , ಗೊಲೀಬಾರ್‌ ಗೆ  3 ಮಂದಿ ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂದಿಸಿ 110 ಮಂದಿಯನ್ನು  ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.

ಘಟನೆಗೆ ಸಂಬಂಧಿಸಿದಂತೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಿ ನವೀನ್‌ನನ್ನು ದಸ್ತಗಿರಿ ಮಾಡಲಾಗಿದೆ. ಪೇಸ್‌ ಬುಕ್‌ ಪೋಸ್ಟ್‌ ಗೆ ಸಂಬಂಧಿಸಿ ಗಲಭೆ ನಡೆಸಿದ ಹಾಗೂ  ಬೆಂಕಿ ಹಚ್ಚಿದ, ಕಲ್ಲು ತೂರಾಟ ನಡೆಸಿದ ಹಾಗೂ ಪೊಲೀಸರ ಮೇಲೆ ಹಲ್ಲೆ ನಡೆಸಿದ ಇತರೆ 110 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಕಮಲ್ ಪಂತ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಆರೋಪಿ ನವೀನ್‌ ಎಂಬಾತ ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಧಾರ್ಮಿಕ ಅವಹೇಳನ ಮಾಡಿದ್ದಾರೆ ಎಂದು ಗಲಭೆ ಆರಂಭವಾಗಿತ್ತು. ನವೀನ್‌ ಎಂಬವರು  ಪುಲಕೇಶಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸಂಬಂಧಿ ಎನ್ನುವ  ನೆಪ ಇಟ್ಟು ಅವರ ಮನೆ ಮತ್ತು ಕಚೇರಿ ಮೇಲೆ ಉದ್ರಿಕ್ತ ಗುಂಪೊಂದು ಮಂಗಳವಾರ ರಾತ್ರಿ ದಾಳಿ ನಡೆಸಿ ಬೆಂಕಿ ಹಚ್ಚಿತ್ತು.

ಘಟನೆ ಬಗ್ಗೆ ಮಾಹಿತಿ ಪಡೆದ ತಕ್ಷಣ ಆಗಮಿಸಿದ ಪೊಲೀಸರು  ಪರಿಸ್ಥಿತಿ ನಿಯಂತ್ರಣ ತರಲು ಯತ್ನಿಸಿದರು.  ಪರಿಸ್ಥಿತಿ ನಿಯಂತ್ರಿಸಲು ಗಾಳಿಯಲ್ಲಿ ಗುಂಡು ಹಾರಿಸಿದರು. ಆದರೆ ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಕಾರಣ  ಗೋಲಿಬಾರ್‌ ನಡೆಸಿದರು. ಕಿಡಿಗೇಡಿಗಳು ಸಿಕ್ಕ ಸಿಕ್ಕ ವಾಹನಗಳಿಗೆ ಬೆಂಕಿ ಹಚ್ಚಿದ್ದರಿಂದ ಹಲವಾರು ವಾಹನಗಳು ಸುಟ್ಟು ಭಸ್ಮವಾಗಿದೆ. ಕೆಲವೇ ಕೆಲವು ಸಮಯದಲ್ಲಿ ಪರಿಸ್ಥಿತಿ ಕೈ ಮೀರಿ ಹೋಯಿತು. ಹಲವಾರು ದ್ವಿಚಕ್ರ ವಾಹನಗಳು, ಹಲವಾರು ಮನೆಗಳು ಹಾನಿಗೊಳಗಾಗಿವೆ.

ಗಲಭೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‍ಡಿಪಿಐ ಮುಖಂಡನನ್ನು ಬಂಧಿಸಲಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

5 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

11 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

19 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

22 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago