ಪೈಂಬೆಚ್ಚಾಲು ಅಜ್ಮೀರ್ ಆಂಡ್ ನೇರ್ಚೆಗೆ ವಿದ್ಯುಕ್ತ ಚಾಲನೆ

March 3, 2020
9:56 AM

ಪೈಂಬೆಚ್ಚಾಲು: ಎರಡು ದಿನಗಳಲ್ಲಿ ಬಹಳ ವಿಜ್ರಂಬಣೆಯಿಂದ ನಡೆಯುವ ಐದನೇ ಅಜ್ಮೀರ್ ಆಂಡ್ ನೇರ್ಚೆ ಹಾಗೂ ದ್ವಿದಿನ ಮೆಹ್ಫಿಲೇ ನಸ್ವೀಹ ಕಾರ್ಯಕ್ರಮಕ್ಕೆ, ಜಮಾಅತ್ ಅಧ್ಯಕ್ಷರಾದ ಟಿ.ಎಂ.ಅಬ್ದುಲ್ ಕಾದರ್ ರವರ ಅಧ್ಯಕ್ಷತೆಯಲ್ಲಿ, ಗೌರವಾಧ್ಯಕ್ಷರಾದ ಪಿ.ಎಂ.ಮೂಸ ಹಾಜಿಯವರು ಧ್ವಜಹಾರೋಹಣದ ಮೂಲಕ ಇಂದು ಬೆಳಿಗ್ಗೆ ಚಾಲನೆ ನೀಡಿದರು.

ಖತೀಬ್ ಉಸ್ತಾದರು ಪ್ರಾರ್ಥನೆ ನಡೆಸಿದರು. ಈ ಸಂದರ್ಭದಲ್ಲಿ ಫಾರೂಖ್ ಮದನಿ ಉಸ್ತಾದ್ ಸೆರ್ಕಳ, ಜಮಾಅತ್ ನಾಯಕರಾದ ಟಿ.ಎಂ.ಅಬ್ದುಲ್ ರಹಿಮಾನ್, ಎಂ.ಪಿ‌.ಇಬ್ರಾಹಿಂ, ಕೆ.ಎಚ್.ಇಬ್ರಾಹಿಂ ಮುಂತಾದವರು ಉಪಸ್ಥಿತರಿದ್ದರು. ಮಾರ್ಚ್ 3 ಹಾಗು 4 ರಂದು ನಡೆಯುವ ಈ ಕಾರ್ಯಕ್ರಮದಲ್ಲಿ ಇಂದು ರಾತ್ರಿ ಪ್ರಖ್ಯಾತ ಕೆ.ಸಿ.ಎ.ಕುಟ್ಟಿ ಕೊಡುವಳ್ಳಿ ಹಾಗು ಸಂಘಡಿಗರಿಂದ ಕಥಾ ಪ್ರಸಂಗ ನಡೆಯಲಿದೆ. ಸೂಫಿವರ್ಯರಾದ ವಾಲೆಮಂಡೋವು ಉಸ್ತಾದ್ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ.

ಮಾ.4ರಂದು ನಡೆಯುವ ಗ್ರಾಂಡ್ ಅಜ್ಮೀರ್ ಆಂಡ್ ನೆರ್ಚೆಯಲ್ಲಿ ಝೈನುಲ್ ಉಲಮಾ ಮಾಣಿ ಉಸ್ತಾದ್, ಕೂರಿಕ್ಕುಝಿ ತಙಳ್, ಸಯ್ಯಿದ್ ಸಾಲಿಂ ಬುಖಾರಿ ತಙಳ್, ಸಯ್ಯಿದ್ ಜಿಫ್ರಿ ತಙಳ್ , ಖ್ಯಾತ ಭಾಷಣಗಾರ ಹಾಫಿಳ್ ಮಸ್ಊದ್ ಸಖಾಫಿ ಗೂಡಲ್ಲೂರು ಮೊದಲಾದ ಉಲಮಾ ಉಮರಾ ನಾಯಕರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಜಮಾಅತ್ ಪ್ರಧಾನ ಕಾರ್ಯದರ್ಶಿ ಅಲ್ ಹಾಜ್ ಬಿ.ಎಂ.ಇಸ್ಮಾಯಿಲ್ ಸಖಾಫಿ ಸ್ವಾಗತಿಸಿ ಧನ್ಯವಾದವಿತ್ತರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ
August 19, 2026
8:42 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ
August 19, 2026
6:48 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?
August 19, 2026
2:02 PM
by: ಸಾಯಿಶೇಖರ್ ಕರಿಕಳ
ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ
August 19, 2026
8:05 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror