ಪೈಂಬೆಚ್ಚಾಲು: ಎರಡು ದಿನಗಳಲ್ಲಿ ಬಹಳ ವಿಜ್ರಂಬಣೆಯಿಂದ ನಡೆಯುವ ಐದನೇ ಅಜ್ಮೀರ್ ಆಂಡ್ ನೇರ್ಚೆ ಹಾಗೂ ದ್ವಿದಿನ ಮೆಹ್ಫಿಲೇ ನಸ್ವೀಹ ಕಾರ್ಯಕ್ರಮಕ್ಕೆ, ಜಮಾಅತ್ ಅಧ್ಯಕ್ಷರಾದ ಟಿ.ಎಂ.ಅಬ್ದುಲ್ ಕಾದರ್ ರವರ ಅಧ್ಯಕ್ಷತೆಯಲ್ಲಿ, ಗೌರವಾಧ್ಯಕ್ಷರಾದ ಪಿ.ಎಂ.ಮೂಸ ಹಾಜಿಯವರು ಧ್ವಜಹಾರೋಹಣದ ಮೂಲಕ ಇಂದು ಬೆಳಿಗ್ಗೆ ಚಾಲನೆ ನೀಡಿದರು.
ಖತೀಬ್ ಉಸ್ತಾದರು ಪ್ರಾರ್ಥನೆ ನಡೆಸಿದರು. ಈ ಸಂದರ್ಭದಲ್ಲಿ ಫಾರೂಖ್ ಮದನಿ ಉಸ್ತಾದ್ ಸೆರ್ಕಳ, ಜಮಾಅತ್ ನಾಯಕರಾದ ಟಿ.ಎಂ.ಅಬ್ದುಲ್ ರಹಿಮಾನ್, ಎಂ.ಪಿ.ಇಬ್ರಾಹಿಂ, ಕೆ.ಎಚ್.ಇಬ್ರಾಹಿಂ ಮುಂತಾದವರು ಉಪಸ್ಥಿತರಿದ್ದರು. ಮಾರ್ಚ್ 3 ಹಾಗು 4 ರಂದು ನಡೆಯುವ ಈ ಕಾರ್ಯಕ್ರಮದಲ್ಲಿ ಇಂದು ರಾತ್ರಿ ಪ್ರಖ್ಯಾತ ಕೆ.ಸಿ.ಎ.ಕುಟ್ಟಿ ಕೊಡುವಳ್ಳಿ ಹಾಗು ಸಂಘಡಿಗರಿಂದ ಕಥಾ ಪ್ರಸಂಗ ನಡೆಯಲಿದೆ. ಸೂಫಿವರ್ಯರಾದ ವಾಲೆಮಂಡೋವು ಉಸ್ತಾದ್ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ.
ಮಾ.4ರಂದು ನಡೆಯುವ ಗ್ರಾಂಡ್ ಅಜ್ಮೀರ್ ಆಂಡ್ ನೆರ್ಚೆಯಲ್ಲಿ ಝೈನುಲ್ ಉಲಮಾ ಮಾಣಿ ಉಸ್ತಾದ್, ಕೂರಿಕ್ಕುಝಿ ತಙಳ್, ಸಯ್ಯಿದ್ ಸಾಲಿಂ ಬುಖಾರಿ ತಙಳ್, ಸಯ್ಯಿದ್ ಜಿಫ್ರಿ ತಙಳ್ , ಖ್ಯಾತ ಭಾಷಣಗಾರ ಹಾಫಿಳ್ ಮಸ್ಊದ್ ಸಖಾಫಿ ಗೂಡಲ್ಲೂರು ಮೊದಲಾದ ಉಲಮಾ ಉಮರಾ ನಾಯಕರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಜಮಾಅತ್ ಪ್ರಧಾನ ಕಾರ್ಯದರ್ಶಿ ಅಲ್ ಹಾಜ್ ಬಿ.ಎಂ.ಇಸ್ಮಾಯಿಲ್ ಸಖಾಫಿ ಸ್ವಾಗತಿಸಿ ಧನ್ಯವಾದವಿತ್ತರು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…