Advertisement
ಸುದ್ದಿಗಳು

ಪೈಂಬೆಚ್ಚಾಲು ಗ್ರಾಂಡ್ ಅಜ್ಮೀರ್ ಆಂಡ್ ನೇರ್ಚೆಗೆ ಪ್ರೌಢ ಪರಿಸಮಾಪ್ತಿ

Share

ಪೈಂಬೆಚ್ಚಾಲು: ಹಯಾತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸ ಪೈಂಬೆಚ್ಚಾಲು ಇದರ ವತಿಯಿಂದ ಮಸೀದಿ ವಠಾರದಲ್ಲಿ ನಡೆದ ಗ್ರಾಂಡ್ ಅಜ್ಮೀರ್ ಆಂಡ್ ಹಾಗೂ ದ್ವಿದಿನ ಮೆಹ್ಫಿಲೇ ನಸೀಹಕ್ಕೆ ಪ್ರೌಢ ಪರಿ ಸಮಾಪ್ತಿಯಾಯಿತು.

ಮಾರ್ಚ್ 4ರಂದು ನಡೆದ ಸಮಾರೋಪ ಸಮಾರಂಭದಲ್ಲಿ ಅಸರ್ ನಂತರ ಜರಗಿದ ಮೌಲೀದ್ ಮಜ್ಲಿಸ್ ಗೆ ಕುಂಞಿಕ್ಕೋಯ ತಙಳ್ ಸಅದಿ ಸುಳ್ಯ, ಜಾಫರ್ ಸಅದಿ ಪಳ್ಳತ್ತೂರು, ನಿಸಾರ್ ಸಅದಿ ಉಳ್ಳಾಲ ನೇತೃತ್ವ ನೀಡಿದರು. ಜಮಾಅತ್ ಅಧ್ಯಕ್ಷರಾದ ಟಿ.ಎಂ.ಅಬ್ದುಲ್ ಕಾದರ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಝೈನುಲ್ ಉಲಮಾ ಮಾಣಿ ಉಸ್ತಾದ್ ಉದ್ಘಾಟಿಸಿದರು. ಸಯ್ಯಿದ್ ಉಮರ್ ಜಿಫ್ರಿ ತಙಳ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಹಾಫಿಳ್ ಮಸ್ಊದ್ ಸಖಾಫಿ ಗೂಡಲ್ಲೂರು ಮುಖ್ಯ ಪ್ರಭಾಷಣ ಗೈದರು. ಸಮಾಪನ ಪ್ರಾರ್ಥನಾ ಸಂಗಮಕ್ಕೆ ಸಯ್ಯಿದ್ ಕೂರಿಕ್ಕುಝಿ ತಙಳ್ ನಾಯಕತ್ವ ನೀಡಿದರು.

ಸಮಾರಂಭದಲ್ಲಿ ಸಯ್ಯಿದ್ ಹುಸೈನ್ ಆಟ್ಟಕ್ಕೋಯ ತಙಳ್ ಆದೂರು, ಅಬ್ದುಲ್ ಕಾದರ್ ಫಾಳಿಲಿ ಕೂರತ್, ಸುಲೈಮಾನ್ ಫಾಳಿಲಿ ಕೊಂಡಂಗೇರಿ, ಇಬ್ರಾಹಿಂ ಸಖಾಫಿ ಪುಂಡೂರು, ಶಾಫಿ ಸಖಾಫಿ ಕೊಕ್ಕಡ, ಅಬ್ದುರ್ರಹ್ಮಾನ್ ಸಖಾಫಿ ಉಪ್ಪಿನಂಗಡಿ, ಮುಹಮ್ಮದ್ ಕುಞಿ ಗೂನಡ್ಕ, ಮುನೀರ್ ಸಖಾಫಿ ಮಾಣಿಮೂಲೆ, ಅಡ್ವಕೇಟ್ ಮೂಸ ಪಿ. ಎಂ. ಹಾರಿಸ್ ಮಿಸ್ಬಾಹಿ, ಇಸ್ಮಾಯಿಲ್ ಸಖಾಫಿ ಪೈಂಬೆಚ್ಚಾಲು, ಫಾರೂಖ್ ಮದನಿ ಸೆರ್ಕಳ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಖತೀಬ್ ಉಸ್ತಾದ್ ಅಬ್ದುನ್ನಾಸಿರ್ ಸುಖೈಫಿ ಉಸ್ತಾದ್ ಸ್ವಾಗತಿಸಿ, ಸಿದ್ದೀಖ್ ಹಿಮಮಿ ಸಖಾಫಿ ಧನ್ಯವಾದವಿತ್ತರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

2 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

11 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

11 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

11 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

11 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

21 hours ago