Advertisement
ನಮ್ಮೂರ ಸುದ್ದಿ

ಪೈಂಬೆಚ್ಚಾಲು ಮದ್ರಸಾ ವಿದ್ಯಾರ್ಥಿಗಳಿಗೆ ಟ್ಯಾಲೆಂಟ್‌ ಎಕ್ಸಲೆನ್ಸ್ ಅವಾರ್ಡ್

Share

ಸುಳ್ಯ: ಮಂಗಳೂರಿನ ಪ್ರತಿಷ್ಠಿತ ಟ್ಯಾಲೆಂಟ್‌ ರಿಸರ್ಚ್‌ ಫೌಂಡೇಶನ್, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ದ.ಕ. ಜಿಲ್ಲಾ ಮಟ್ಟದಲ್ಲಿ ನೀಡುವ ಟ್ಯಾಲೆಂಟ್‌ ಎಕ್ಸಲೆನ್ಸ್ ಅವಾರ್ಡ್ ಗೆ, ಪೈಂಬೆಚ್ಚಾಲು ಮದ್ರಸಾದ ಮೂವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಮಂಗಳೂರು ಕೇಂದ್ರವಾಗಿರಿಸಿಕೊಂಡು ಸಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ವಿಶಿಷ್ಠವಾದ ಸೇವೆಯನ್ನು ನೀಡುತ್ತಿರುವ, ಟ್ಯಾಲೆಂಟ್‌ ರಿಸರ್ಚ್ ಫೌಂಡೇಶನ್ ಪ್ರತಿವರ್ಷವೂ ದ.ಕ.ಜಿಲ್ಲೆಯಲ್ಲಿ, ಪಬ್ಲಿಕ್ ಪರೀಕ್ಷೆಯಲ್ಲಿ ಉತ್ತಮ ಅಂಕಪ ಪಡೆದ ವಿದ್ಯಾರ್ಥಿಗಳಿಗೆ ನೀಡುವ ಎಕ್ಸಲೆನ್ಸ ಅವಾರ್ಡ್ ಗೆ, ಈ ಸಲ ಪೈಂಬೆಚ್ಚಾಲು ಮದ್ರಸಾದ ಏಳನೇ ತರಗತಿಯ ತಮೀಂ ಟಿ.ಐ., ಶಂಮ್ನ ಎಂ.ಪಿ. ಹಾಗು ಫ್ಲಸ್ಟು ವಿನ ಜವೈರಿಯಾ ಟಿ.ಎ. ಈ ಮೂವರು ವಿದ್ಯಾರ್ಥಿಗಳು ಆಯ್ಕೆಯಾಗಿ, ಇಂದು ಮಂಗಳೂರಿನಲ್ಲಿ ನಡೆದ ಪ್ರತಿಭಾ ಸಂಗಮದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಲಾಯಿತು.
ಐದು, ಏಳು, ಹತ್ತು ಹಾಗು ಫ್ಲಸ್ಟು ತರಗತಿಗಳಲ್ಲಿ ರೇಂಜ್ ಮಟ್ಟದಲ್ಲಿ ಪ್ರಥಮ, ದ್ವಿತೀಯ ಸ್ಥಾನ ಪಡೆದ ಜಿಲ್ಲೆಯ ಸಮಾರು ಇನ್ನೂರ ಅರುವತ್ತು ವಿದ್ಯಾರ್ಥಿಗಳಲ್ಲಿ, ಆಯ್ಕೆಮಾಡಿದ ಮೂವತ್ತು ವಿದ್ಯಾರ್ಥಿಗಳಲ್ಲಿ, ಸುಳ್ಯ ತಾಲೂಕಿನಿಂದ ಆಯ್ಕೆಯಾದ ಮೂರೇ ಮೂರು ವಿದ್ಯಾರ್ಥಿಗಳು ಕೂಡ ಪೈಂಬೆಚ್ಚಾಲು ಮದ್ರಸಾದ ವಿದ್ಯಾರ್ಥಿಗಳಾಗಿದ್ದಾರೆ.
ಬಹು ಫಾರೂಖ್ ಮದನಿ ಸೆರ್ಕಳ, ಇಸ್ಮಾಯಿಲ್ ಸಖಾಫಿ ಬಿ.ಎಂ. ರವರು ಈ ವಿದ್ಯಾರ್ಥಿಗಳಿಗೆ ಪ್ರತ್ಯೇಕ ತರಬೇತಿ ನೀಡಿ ಇದಕ್ಕೆ ಅವರನ್ನು ಅರ್ಹಗೊಳಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

58 minutes ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

2 days ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

2 days ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

2 days ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

2 days ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

3 days ago