ಸುಳ್ಯ: ಪೈಂಬೆಚ್ಚಾಲು ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಪ್ರತಿ ತಿಂಗಳು ನಡೆಸಿಕೊಂಡು ಬರುತ್ತಿರುವ ಸ್ವಲಾತ್ ಮಜ್ಲಿಸ್ ನ ವಾರ್ಷಿಕ ಹಾಗೂ ನೂತನವಾಗಿ ನಿರ್ಮಾಣಗೊಳ್ಳಲಿರುವ ಮದ್ರಸಾ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯವು ಜಮಾಅತ್ ಅಧ್ಯಕ್ಷರಾದ ಟಿ.ಎಂ.ಖಾದರ್ ರವರ ಅಧ್ಯಕ್ಷತೆಯಲ್ಲಿ ಮಸೀದಿ ವಠಾರದಲ್ಲಿ ನಡೆಯಿತು.
ಸ್ವಲಾತ್ ಮಜ್ಲಿಸ್ ನ ನೇತೃತ್ವ ಹಾಗು ನೂತನವಾಗಿ ನಿರ್ಮಾಣಗೊಳ್ಳಲಿರುವ ಮದ್ರಸ ಕಟ್ಟಡದ ಶಿಲನ್ಯಾಸವನ್ನು ದ.ಕ.ಜಿಲ್ಲಾ ಖಾಝಿ ಸಯ್ಯಿದ್ ಕೂರತ್ ತಙಳ್ ರವರು ನಿರ್ವಹಿಸಿದರು.
ಕಾರ್ಯಕ್ರಮದಲ್ಲಿ ಖತೀಬ್ ಉಸ್ತಾದ್ ನಾಸಿರ್ ಸುಖೈಫಿ, ಫಾರೂಖ್ ಮದನಿ,ಜಮಾಅತ್ ನಾಯಕರಾದ ಟಿ.ಎಂ.ಅಬ್ದುಲ್ ರಹಿಮಾನ್, ಪಿ.ಎಂ.ಮೂಸ ಹಾಜಿ ಎಸ್ ವೈಎಸ್ ನಾಯಕರಾದ ಪಿ.ಬಿ.ಮೂಸಾನ್ ಹಾಜಿ, ಪಿ.ಎಚ್.ಅಬ್ಬಾಸ್, ಪಿ.ಎಂ.ರಫೀಖ್, ಹಾಗು ಎಸ್ಸೆಸ್ಸೆಫ್, ಎಮ್ ವೈಎಸ್ ನಾಯಕರೂ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಹಜ್ಜ್ ಯಾತ್ರೆ ಕೈಗೊಳ್ಳುತ್ತಿರುವ ಜಮಾಅತ್ ಪ್ರಧಾನ ಕಾರ್ಯದರ್ಶಿ ಬಿ.ಎಂ.ಇಸ್ಮಾಯಿಲ್ ಸಖಾಫಿ ಯವರಿಗೆ ಜಮಾಅತ್ ವತಿಯಿಂದ ಶಾಲು ಹೊದಿಸಿ ಬೀಳ್ಕೊಡುಗೆ ಮಾಡಲಾಯಿತು. ಬಿ.ಯಂ.ಇಸ್ಮಾಯಿಲ್ ಸಖಾಫಿ ಸ್ವಾಗತಿಸಿ, ವಂದಿಸಿದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…