ಸುಳ್ಯ: ಪೈಂಬೆಚ್ಚಾಲು ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಪ್ರತಿ ತಿಂಗಳು ನಡೆಸಿಕೊಂಡು ಬರುತ್ತಿರುವ ಸ್ವಲಾತ್ ಮಜ್ಲಿಸ್ ನ ವಾರ್ಷಿಕ ಹಾಗೂ ನೂತನವಾಗಿ ನಿರ್ಮಾಣಗೊಳ್ಳಲಿರುವ ಮದ್ರಸಾ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯವು ಜಮಾಅತ್ ಅಧ್ಯಕ್ಷರಾದ ಟಿ.ಎಂ.ಖಾದರ್ ರವರ ಅಧ್ಯಕ್ಷತೆಯಲ್ಲಿ ಮಸೀದಿ ವಠಾರದಲ್ಲಿ ನಡೆಯಿತು.
ಸ್ವಲಾತ್ ಮಜ್ಲಿಸ್ ನ ನೇತೃತ್ವ ಹಾಗು ನೂತನವಾಗಿ ನಿರ್ಮಾಣಗೊಳ್ಳಲಿರುವ ಮದ್ರಸ ಕಟ್ಟಡದ ಶಿಲನ್ಯಾಸವನ್ನು ದ.ಕ.ಜಿಲ್ಲಾ ಖಾಝಿ ಸಯ್ಯಿದ್ ಕೂರತ್ ತಙಳ್ ರವರು ನಿರ್ವಹಿಸಿದರು.
ಕಾರ್ಯಕ್ರಮದಲ್ಲಿ ಖತೀಬ್ ಉಸ್ತಾದ್ ನಾಸಿರ್ ಸುಖೈಫಿ, ಫಾರೂಖ್ ಮದನಿ,ಜಮಾಅತ್ ನಾಯಕರಾದ ಟಿ.ಎಂ.ಅಬ್ದುಲ್ ರಹಿಮಾನ್, ಪಿ.ಎಂ.ಮೂಸ ಹಾಜಿ ಎಸ್ ವೈಎಸ್ ನಾಯಕರಾದ ಪಿ.ಬಿ.ಮೂಸಾನ್ ಹಾಜಿ, ಪಿ.ಎಚ್.ಅಬ್ಬಾಸ್, ಪಿ.ಎಂ.ರಫೀಖ್, ಹಾಗು ಎಸ್ಸೆಸ್ಸೆಫ್, ಎಮ್ ವೈಎಸ್ ನಾಯಕರೂ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಹಜ್ಜ್ ಯಾತ್ರೆ ಕೈಗೊಳ್ಳುತ್ತಿರುವ ಜಮಾಅತ್ ಪ್ರಧಾನ ಕಾರ್ಯದರ್ಶಿ ಬಿ.ಎಂ.ಇಸ್ಮಾಯಿಲ್ ಸಖಾಫಿ ಯವರಿಗೆ ಜಮಾಅತ್ ವತಿಯಿಂದ ಶಾಲು ಹೊದಿಸಿ ಬೀಳ್ಕೊಡುಗೆ ಮಾಡಲಾಯಿತು. ಬಿ.ಯಂ.ಇಸ್ಮಾಯಿಲ್ ಸಖಾಫಿ ಸ್ವಾಗತಿಸಿ, ವಂದಿಸಿದರು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…