ಸುಳ್ಯ: ಅಸ್ತ್ರ ಸ್ಪೋರ್ಟ್ಸ್ ಕ್ಲಬ್ (ರಿ) ಪೈಚಾರ್ ಇದರ ಮಹಾಸಭೆ ಭಾನುವಾರ ಸಂಜೆ ಪೈಚಾರಿನ ಬಿ ಎ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು
ರಿಫಾಯಿ ಎಸ್ ಎ ವಹಿಸಿದ್ದರು.
ಮಹಾಸಭೆಯ ಉದ್ಘಾಟನೆಯನ್ನು ಹಿರಿಯ ನ್ಯಾಯವಾದಿಗಳಾದ ಎ ಕುಂಞಪಳ್ಳಿ ಅವರು ನೇರವೇರಿಸಿದರು. ಮುಖ್ಯ ಅತಿಥಿಗಳಾಗಿ ಸತ್ತಾರ್ ಪೈಚಾರ್ ಭಾಗವಹಿಸಿ ಮಾತನಾಡಿದರು.
ವೇದಿಕೆಯಲ್ಲಿ ಉಪಾಧ್ಯಕ್ಷ ಬಶೀರ್ ಆರ್ ಬಿ. ಹಾಗೂ ವಾರ್ಷಿಕ ವರದಿ ಹಾಗೂ ಲೆಕ್ಕ ಪತ್ರ ಮಂಡನೆಯನ್ನು ಪ್ರಧಾನ ಕಾರ್ಯದರ್ಶಿ ಮುಜೀಬ್ ಪೈಚಾರ್ ವಾಚಿಸಿದರು.ನಂತರ
ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.
ನೂತನ ಸಮಿತಿ :
ಗೌರವಾಧ್ಯಕ್ಷರಾಗಿ ಹಿರಿಯ ನ್ಯಾಯವಾದಿ ಎ ಕುಂಞಪಳ್ಳಿ ಇವರನ್ನು ಮಹಾಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಅಬೂಸಾಲಿ ಪೈಚಾರ್ , ಉಪಾಧ್ಯಕ್ಷರಾಗಿ ಅಶ್ರಫ್ ಅಚ್ಚಪ್ಪು, ಪ್ರಧಾನ ಕಾರ್ಯದರ್ಶಿಯಾಗಿ ಮುಜೀಬ್ ಪೈಚಾರ್ ಹಾಗೂ ಜೊತೆ ಕಾರ್ಯದರ್ಶಿಯಾಗಿ ಲತೀಫ್ ಟಿ ಎ ಹಾಗೂ ಆರ್ಷದ್ ಪ್ರಗತಿ ಕೋಶಾಧಿಕಾರಿಯಾಗಿ ಸೆಮೀರ್ ಟಿ ಎ. ಸದಸ್ಯರುಗಳಾಗಿ ಬಶೀರ್ ಆರ್ ಬಿ, ಲತೀಫ್ ಕರಿಕೆ, ರಿಫಾಯಿ ಎಸ್ ಎ , ನಾಸೀರ್ ಕೆ ಪಿ., ಆರ್ಷದ್ , ಸೆಮೀರ್ ಶಾಂತಿನಗರ, ಪಾಝೀಲ್ ಪಳ್ಳು, ಸೆರೀಕ್ ಪೈಚಾರ್ ಇವರನ್ನು ಅಯ್ಕೆ ಮಾಡಲಾಯಿತು.
ಬಶೀರ್ ಆರ್ ಸ್ವಾಗತಿಸಿ ಮುಜೀಬ್ ಪೈಚಾರ್ ವಂದಿಸಿದರು.
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…
ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…
ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…
ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ…