ಕಡಬ: ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಬ-ಸುಬ್ರಹ್ಮಣ್ಯ ರಾಜ್ಯಹೆದ್ದಾರಿಯ ಪಕ್ಕದಲ್ಲಿರುವ ಹಳೆಸ್ಟೇಶನ್ನ ಪೊಟ್ಟುಕೆರೆಯ ಪರಂಬೋಕು ಪ್ರದೇಶವನ್ನು ಪಹಣಿ ಪತ್ರಿಕೆಯಲ್ಲಿ ತಿದ್ದುಪಡಿ ಮಾಡಿ ಸರಕಾರಿ ಜಮೀನು ಎಂದು ನಮೂದಿಸಿ ಅತಿಕ್ರಮಣ ಮಾಡಲು ಹುನ್ನಾರ ನಡೆಯುತ್ತಿದೆ ಎಂದು ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ವತಿಯಿಂದ ಕಂದಾಯ ಇಲಾಖೆಗೆ ದೂರು ಸಲ್ಲಿಸಿದ ದೂರಿನ ಸ್ಪಂದಿಸಿರುವ ಕಂದಾಯ ಅಧಿಕಾರಿಗಳು ಕೊನೆಗೂ ಪಹಣಿ ಪತ್ರದಲ್ಲಿನ ತಪ್ಪನ್ನು ಸರಿಪಡಿಸಿದ್ದಾರೆ.
ಕುಟ್ರುಪ್ಪಾಡಿ ಗ್ರಾಮದ ಸರ್ವೆ ನಂ. 40ರಲ್ಲಿ ಇರುವ ಹಳೆಸ್ಟೇಶನ್ನ ಪೊಟ್ಟುಕೆರೆಯನ್ನು ಉದ್ಯೋಗ ಖಾತರಿ ಯೋಜನೆಯಡಿ ಹೂಳೆತ್ತಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಮಾಹಿತಿ ಪಡೆದಾಗ ಈ ಹಿಂದೆ ಕೈಬರಹದ ಪಹಣಿ ಪತ್ರದಲ್ಲಿ ಕೆರೆ ಪರಂಬೋಕು ಎಂದು ಇರುವ ಜಾಗವನ್ನು ಇದೀಗ ಸರಕಾರಿ ಜಾಗ ಎಂದು ದಾಖಲಿಸಲಾಗಿರುವ ವಿಚಾರ ಬೆಳಕಿಗೆ ಬಂದಿತ್ತು. ಈ ಅಕ್ರಮ ತಿದ್ದುಪಡಿಯ ಹಿಂದೆ ಕೆರೆಯನ್ನು ಆತಿಕ್ರಮಣಗೊಳಿಸುವ ಹುನ್ನಾರ ಇರುವುದನ್ನು ಮನಗಂಡು ಅಕ್ರಮ ತಿದ್ದುಪಡಿಯನ್ನು ಸರಿಪಡಿಸಿ ಸದ್ರಿ ಪ್ರದೇಶವನ್ನು ಮತ್ತೆ ಕೆರೆ ಪರಂಬೋಕು ಎಂದು ಪಹಣಿಯಲ್ಲಿ ದಾಖಲಿಸಬೇಕು ಎಂದು ಪಂಚಾಯತ್ ವತಿಯಿಂದ ಒಂದೂವರೆ ವರ್ಷದ ಹಿಂದೆಯೇ ಜಿಲ್ಲಾಧಿಕಾರಿ, ಸಹಾಯಕ ಕಮೀಶನರ್ ಹಾಗೂ ಕಡಬ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಗಿತ್ತು. ಇದೀಗ ಕಂದಾಯ ಇಲಾಖೆ ಪಹಣಿ ಪತ್ರದಲ್ಲಿನ ತಪ್ಪನ್ನು ಸರಿಪಡಿಸಿದೆ.
ಹಳೆಯ ಕಡತಗಳಲ್ಲಿ ಹಾಗೂ ಪಹಣಿಪತ್ರಗಳಲ್ಲಿ ಕೆರೆ ಪರಂಬೋಕು ಎಂದೇ ದಾಖಲಿಸಲ್ಪಟ್ಟಿರುವ ಸದ್ರಿ ಭೂಮಿಯನ್ನು ಕೆಲವು ವರ್ಷಗಳ ಹಿಂದೆ ಏಕಾಏಕಿ ಸರಕಾರಿ ಜಮೀನು ಎಂದು ಪಹಣಿಯಲ್ಲಿ ದಾಖಲಿಸಿರುವುದರ ಹಿಂದೆ ಕೆರೆಯನ್ನು ಕಬಳಿಸುವ ಉದ್ದೇಶ ಇದೆ ಎನ್ನುವುದು ಸ್ಥಳೀಯರ ಆರೋಪಿಸಿದ್ದರು. ಯಾರಿಗೋ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಕೆರೆಯ ಜಮೀನನ್ನು ಸರಕಾರಿ ಎಂದು ನಮೂದಿಸಲಾಗಿದೆ. ಈಗಾಗಲೇ ಕರೆಯ ಒಂದು ಭಾಗದಲ್ಲಿ ಕಲ್ಲು ಮಣ್ಣು ತುಂಬಿರುವುದರಿಂದ ಕೆರೆಯ ಗಾತ್ರ ಸಾಕಷ್ಟು ಕಿರಿದಾಗಿದೆ. ಕೆರೆಗಳನ್ನು ಉಳಿಸಿ ಅಭಿವೃದ್ಧಿಪಡಿಸಬೇಕೆಂದು ಆದೇಶ ಹೊರಡಿಸಿರುವ ಸರಕಾರ ಸದ್ರಿ ಕೆರೆಯ ಅತಿಕ್ರಮಣದ ಸಂಚನ್ನು ವಿಫಲಗೊಳಿಸಿ ಗ್ರಾಮಸ್ಥರಿಗೆ ಕೆರೆಯನ್ನು ಉಳಿಸಿಕೊಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದರು.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…
ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದು ರಾಜ್ಯದಾದ್ಯಂತ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ…