Advertisement
ಜಿಲ್ಲೆ

ಪೊಟ್ಟುಕೆರೆ ಅತಿಕ್ರಮಣ ಹುನ್ನಾರಕ್ಕೆ ತಡೆ : ತಪ್ಪು ಸರಿಪಡಿಸಿದ ಕಂದಾಯ ಅಧಿಕಾರಿಗಳು

Share

ಕಡಬ: ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಬ-ಸುಬ್ರಹ್ಮಣ್ಯ ರಾಜ್ಯಹೆದ್ದಾರಿಯ ಪಕ್ಕದಲ್ಲಿರುವ ಹಳೆಸ್ಟೇಶನ್‍ನ ಪೊಟ್ಟುಕೆರೆಯ ಪರಂಬೋಕು ಪ್ರದೇಶವನ್ನು ಪಹಣಿ ಪತ್ರಿಕೆಯಲ್ಲಿ ತಿದ್ದುಪಡಿ ಮಾಡಿ ಸರಕಾರಿ ಜಮೀನು ಎಂದು ನಮೂದಿಸಿ ಅತಿಕ್ರಮಣ ಮಾಡಲು ಹುನ್ನಾರ ನಡೆಯುತ್ತಿದೆ ಎಂದು ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ವತಿಯಿಂದ ಕಂದಾಯ ಇಲಾಖೆಗೆ ದೂರು ಸಲ್ಲಿಸಿದ ದೂರಿನ ಸ್ಪಂದಿಸಿರುವ ಕಂದಾಯ ಅಧಿಕಾರಿಗಳು ಕೊನೆಗೂ ಪಹಣಿ ಪತ್ರದಲ್ಲಿನ ತಪ್ಪನ್ನು ಸರಿಪಡಿಸಿದ್ದಾರೆ.

ಕುಟ್ರುಪ್ಪಾಡಿ ಗ್ರಾಮದ ಸರ್ವೆ ನಂ. 40ರಲ್ಲಿ ಇರುವ ಹಳೆಸ್ಟೇಶನ್‍ನ ಪೊಟ್ಟುಕೆರೆಯನ್ನು ಉದ್ಯೋಗ ಖಾತರಿ ಯೋಜನೆಯಡಿ ಹೂಳೆತ್ತಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಮಾಹಿತಿ ಪಡೆದಾಗ ಈ ಹಿಂದೆ ಕೈಬರಹದ ಪಹಣಿ ಪತ್ರದಲ್ಲಿ ಕೆರೆ ಪರಂಬೋಕು ಎಂದು ಇರುವ ಜಾಗವನ್ನು ಇದೀಗ ಸರಕಾರಿ ಜಾಗ ಎಂದು ದಾಖಲಿಸಲಾಗಿರುವ ವಿಚಾರ ಬೆಳಕಿಗೆ ಬಂದಿತ್ತು. ಈ ಅಕ್ರಮ ತಿದ್ದುಪಡಿಯ ಹಿಂದೆ ಕೆರೆಯನ್ನು ಆತಿಕ್ರಮಣಗೊಳಿಸುವ ಹುನ್ನಾರ ಇರುವುದನ್ನು ಮನಗಂಡು ಅಕ್ರಮ ತಿದ್ದುಪಡಿಯನ್ನು ಸರಿಪಡಿಸಿ ಸದ್ರಿ ಪ್ರದೇಶವನ್ನು ಮತ್ತೆ ಕೆರೆ ಪರಂಬೋಕು ಎಂದು ಪಹಣಿಯಲ್ಲಿ ದಾಖಲಿಸಬೇಕು ಎಂದು ಪಂಚಾಯತ್ ವತಿಯಿಂದ ಒಂದೂವರೆ ವರ್ಷದ ಹಿಂದೆಯೇ ಜಿಲ್ಲಾಧಿಕಾರಿ, ಸಹಾಯಕ ಕಮೀಶನರ್ ಹಾಗೂ ಕಡಬ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಗಿತ್ತು. ಇದೀಗ ಕಂದಾಯ ಇಲಾಖೆ ಪಹಣಿ ಪತ್ರದಲ್ಲಿನ ತಪ್ಪನ್ನು ಸರಿಪಡಿಸಿದೆ.

ಹಳೆಯ ಕಡತಗಳಲ್ಲಿ ಹಾಗೂ ಪಹಣಿಪತ್ರಗಳಲ್ಲಿ ಕೆರೆ ಪರಂಬೋಕು ಎಂದೇ ದಾಖಲಿಸಲ್ಪಟ್ಟಿರುವ ಸದ್ರಿ ಭೂಮಿಯನ್ನು ಕೆಲವು ವರ್ಷಗಳ ಹಿಂದೆ ಏಕಾಏಕಿ ಸರಕಾರಿ ಜಮೀನು ಎಂದು ಪಹಣಿಯಲ್ಲಿ ದಾಖಲಿಸಿರುವುದರ ಹಿಂದೆ ಕೆರೆಯನ್ನು ಕಬಳಿಸುವ ಉದ್ದೇಶ ಇದೆ ಎನ್ನುವುದು ಸ್ಥಳೀಯರ ಆರೋಪಿಸಿದ್ದರು. ಯಾರಿಗೋ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಕೆರೆಯ ಜಮೀನನ್ನು ಸರಕಾರಿ ಎಂದು ನಮೂದಿಸಲಾಗಿದೆ. ಈಗಾಗಲೇ ಕರೆಯ ಒಂದು ಭಾಗದಲ್ಲಿ ಕಲ್ಲು ಮಣ್ಣು ತುಂಬಿರುವುದರಿಂದ ಕೆರೆಯ ಗಾತ್ರ ಸಾಕಷ್ಟು ಕಿರಿದಾಗಿದೆ. ಕೆರೆಗಳನ್ನು ಉಳಿಸಿ ಅಭಿವೃದ್ಧಿಪಡಿಸಬೇಕೆಂದು ಆದೇಶ ಹೊರಡಿಸಿರುವ ಸರಕಾರ ಸದ್ರಿ ಕೆರೆಯ ಅತಿಕ್ರಮಣದ ಸಂಚನ್ನು ವಿಫಲಗೊಳಿಸಿ ಗ್ರಾಮಸ್ಥರಿಗೆ ಕೆರೆಯನ್ನು ಉಳಿಸಿಕೊಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

9 hours ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

13 hours ago

ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು

ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…

13 hours ago

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…

14 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ | ಮರಗಳು, ವಿದ್ಯುತ್ ಕಂಬಗಳು ನೆಲಸಮ – ಇನ್ನು 4 ದಿನ ಮಳೆ ಮುನ್ಸೂಚನೆ

ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…

14 hours ago

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

1 day ago