Advertisement
ಜಿಲ್ಲೆ

ಪೊಟ್ಟುಕೆರೆ ಅತಿಕ್ರಮಣ ಹುನ್ನಾರಕ್ಕೆ ತಡೆ : ತಪ್ಪು ಸರಿಪಡಿಸಿದ ಕಂದಾಯ ಅಧಿಕಾರಿಗಳು

Share

ಕಡಬ: ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಬ-ಸುಬ್ರಹ್ಮಣ್ಯ ರಾಜ್ಯಹೆದ್ದಾರಿಯ ಪಕ್ಕದಲ್ಲಿರುವ ಹಳೆಸ್ಟೇಶನ್‍ನ ಪೊಟ್ಟುಕೆರೆಯ ಪರಂಬೋಕು ಪ್ರದೇಶವನ್ನು ಪಹಣಿ ಪತ್ರಿಕೆಯಲ್ಲಿ ತಿದ್ದುಪಡಿ ಮಾಡಿ ಸರಕಾರಿ ಜಮೀನು ಎಂದು ನಮೂದಿಸಿ ಅತಿಕ್ರಮಣ ಮಾಡಲು ಹುನ್ನಾರ ನಡೆಯುತ್ತಿದೆ ಎಂದು ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ವತಿಯಿಂದ ಕಂದಾಯ ಇಲಾಖೆಗೆ ದೂರು ಸಲ್ಲಿಸಿದ ದೂರಿನ ಸ್ಪಂದಿಸಿರುವ ಕಂದಾಯ ಅಧಿಕಾರಿಗಳು ಕೊನೆಗೂ ಪಹಣಿ ಪತ್ರದಲ್ಲಿನ ತಪ್ಪನ್ನು ಸರಿಪಡಿಸಿದ್ದಾರೆ.

ಕುಟ್ರುಪ್ಪಾಡಿ ಗ್ರಾಮದ ಸರ್ವೆ ನಂ. 40ರಲ್ಲಿ ಇರುವ ಹಳೆಸ್ಟೇಶನ್‍ನ ಪೊಟ್ಟುಕೆರೆಯನ್ನು ಉದ್ಯೋಗ ಖಾತರಿ ಯೋಜನೆಯಡಿ ಹೂಳೆತ್ತಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಮಾಹಿತಿ ಪಡೆದಾಗ ಈ ಹಿಂದೆ ಕೈಬರಹದ ಪಹಣಿ ಪತ್ರದಲ್ಲಿ ಕೆರೆ ಪರಂಬೋಕು ಎಂದು ಇರುವ ಜಾಗವನ್ನು ಇದೀಗ ಸರಕಾರಿ ಜಾಗ ಎಂದು ದಾಖಲಿಸಲಾಗಿರುವ ವಿಚಾರ ಬೆಳಕಿಗೆ ಬಂದಿತ್ತು. ಈ ಅಕ್ರಮ ತಿದ್ದುಪಡಿಯ ಹಿಂದೆ ಕೆರೆಯನ್ನು ಆತಿಕ್ರಮಣಗೊಳಿಸುವ ಹುನ್ನಾರ ಇರುವುದನ್ನು ಮನಗಂಡು ಅಕ್ರಮ ತಿದ್ದುಪಡಿಯನ್ನು ಸರಿಪಡಿಸಿ ಸದ್ರಿ ಪ್ರದೇಶವನ್ನು ಮತ್ತೆ ಕೆರೆ ಪರಂಬೋಕು ಎಂದು ಪಹಣಿಯಲ್ಲಿ ದಾಖಲಿಸಬೇಕು ಎಂದು ಪಂಚಾಯತ್ ವತಿಯಿಂದ ಒಂದೂವರೆ ವರ್ಷದ ಹಿಂದೆಯೇ ಜಿಲ್ಲಾಧಿಕಾರಿ, ಸಹಾಯಕ ಕಮೀಶನರ್ ಹಾಗೂ ಕಡಬ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಗಿತ್ತು. ಇದೀಗ ಕಂದಾಯ ಇಲಾಖೆ ಪಹಣಿ ಪತ್ರದಲ್ಲಿನ ತಪ್ಪನ್ನು ಸರಿಪಡಿಸಿದೆ.

ಹಳೆಯ ಕಡತಗಳಲ್ಲಿ ಹಾಗೂ ಪಹಣಿಪತ್ರಗಳಲ್ಲಿ ಕೆರೆ ಪರಂಬೋಕು ಎಂದೇ ದಾಖಲಿಸಲ್ಪಟ್ಟಿರುವ ಸದ್ರಿ ಭೂಮಿಯನ್ನು ಕೆಲವು ವರ್ಷಗಳ ಹಿಂದೆ ಏಕಾಏಕಿ ಸರಕಾರಿ ಜಮೀನು ಎಂದು ಪಹಣಿಯಲ್ಲಿ ದಾಖಲಿಸಿರುವುದರ ಹಿಂದೆ ಕೆರೆಯನ್ನು ಕಬಳಿಸುವ ಉದ್ದೇಶ ಇದೆ ಎನ್ನುವುದು ಸ್ಥಳೀಯರ ಆರೋಪಿಸಿದ್ದರು. ಯಾರಿಗೋ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಕೆರೆಯ ಜಮೀನನ್ನು ಸರಕಾರಿ ಎಂದು ನಮೂದಿಸಲಾಗಿದೆ. ಈಗಾಗಲೇ ಕರೆಯ ಒಂದು ಭಾಗದಲ್ಲಿ ಕಲ್ಲು ಮಣ್ಣು ತುಂಬಿರುವುದರಿಂದ ಕೆರೆಯ ಗಾತ್ರ ಸಾಕಷ್ಟು ಕಿರಿದಾಗಿದೆ. ಕೆರೆಗಳನ್ನು ಉಳಿಸಿ ಅಭಿವೃದ್ಧಿಪಡಿಸಬೇಕೆಂದು ಆದೇಶ ಹೊರಡಿಸಿರುವ ಸರಕಾರ ಸದ್ರಿ ಕೆರೆಯ ಅತಿಕ್ರಮಣದ ಸಂಚನ್ನು ವಿಫಲಗೊಳಿಸಿ ಗ್ರಾಮಸ್ಥರಿಗೆ ಕೆರೆಯನ್ನು ಉಳಿಸಿಕೊಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

7 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

7 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

23 hours ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

24 hours ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

1 day ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

2 days ago