ಕಡಬ: ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಬ-ಸುಬ್ರಹ್ಮಣ್ಯ ರಾಜ್ಯಹೆದ್ದಾರಿಯ ಪಕ್ಕದಲ್ಲಿರುವ ಹಳೆಸ್ಟೇಶನ್ನ ಪೊಟ್ಟುಕೆರೆಯ ಪರಂಬೋಕು ಪ್ರದೇಶವನ್ನು ಪಹಣಿ ಪತ್ರಿಕೆಯಲ್ಲಿ ತಿದ್ದುಪಡಿ ಮಾಡಿ ಸರಕಾರಿ ಜಮೀನು ಎಂದು ನಮೂದಿಸಿ ಅತಿಕ್ರಮಣ ಮಾಡಲು ಹುನ್ನಾರ ನಡೆಯುತ್ತಿದೆ ಎಂದು ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ವತಿಯಿಂದ ಕಂದಾಯ ಇಲಾಖೆಗೆ ದೂರು ಸಲ್ಲಿಸಿದ ದೂರಿನ ಸ್ಪಂದಿಸಿರುವ ಕಂದಾಯ ಅಧಿಕಾರಿಗಳು ಕೊನೆಗೂ ಪಹಣಿ ಪತ್ರದಲ್ಲಿನ ತಪ್ಪನ್ನು ಸರಿಪಡಿಸಿದ್ದಾರೆ.
ಕುಟ್ರುಪ್ಪಾಡಿ ಗ್ರಾಮದ ಸರ್ವೆ ನಂ. 40ರಲ್ಲಿ ಇರುವ ಹಳೆಸ್ಟೇಶನ್ನ ಪೊಟ್ಟುಕೆರೆಯನ್ನು ಉದ್ಯೋಗ ಖಾತರಿ ಯೋಜನೆಯಡಿ ಹೂಳೆತ್ತಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಮಾಹಿತಿ ಪಡೆದಾಗ ಈ ಹಿಂದೆ ಕೈಬರಹದ ಪಹಣಿ ಪತ್ರದಲ್ಲಿ ಕೆರೆ ಪರಂಬೋಕು ಎಂದು ಇರುವ ಜಾಗವನ್ನು ಇದೀಗ ಸರಕಾರಿ ಜಾಗ ಎಂದು ದಾಖಲಿಸಲಾಗಿರುವ ವಿಚಾರ ಬೆಳಕಿಗೆ ಬಂದಿತ್ತು. ಈ ಅಕ್ರಮ ತಿದ್ದುಪಡಿಯ ಹಿಂದೆ ಕೆರೆಯನ್ನು ಆತಿಕ್ರಮಣಗೊಳಿಸುವ ಹುನ್ನಾರ ಇರುವುದನ್ನು ಮನಗಂಡು ಅಕ್ರಮ ತಿದ್ದುಪಡಿಯನ್ನು ಸರಿಪಡಿಸಿ ಸದ್ರಿ ಪ್ರದೇಶವನ್ನು ಮತ್ತೆ ಕೆರೆ ಪರಂಬೋಕು ಎಂದು ಪಹಣಿಯಲ್ಲಿ ದಾಖಲಿಸಬೇಕು ಎಂದು ಪಂಚಾಯತ್ ವತಿಯಿಂದ ಒಂದೂವರೆ ವರ್ಷದ ಹಿಂದೆಯೇ ಜಿಲ್ಲಾಧಿಕಾರಿ, ಸಹಾಯಕ ಕಮೀಶನರ್ ಹಾಗೂ ಕಡಬ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಗಿತ್ತು. ಇದೀಗ ಕಂದಾಯ ಇಲಾಖೆ ಪಹಣಿ ಪತ್ರದಲ್ಲಿನ ತಪ್ಪನ್ನು ಸರಿಪಡಿಸಿದೆ.
ಹಳೆಯ ಕಡತಗಳಲ್ಲಿ ಹಾಗೂ ಪಹಣಿಪತ್ರಗಳಲ್ಲಿ ಕೆರೆ ಪರಂಬೋಕು ಎಂದೇ ದಾಖಲಿಸಲ್ಪಟ್ಟಿರುವ ಸದ್ರಿ ಭೂಮಿಯನ್ನು ಕೆಲವು ವರ್ಷಗಳ ಹಿಂದೆ ಏಕಾಏಕಿ ಸರಕಾರಿ ಜಮೀನು ಎಂದು ಪಹಣಿಯಲ್ಲಿ ದಾಖಲಿಸಿರುವುದರ ಹಿಂದೆ ಕೆರೆಯನ್ನು ಕಬಳಿಸುವ ಉದ್ದೇಶ ಇದೆ ಎನ್ನುವುದು ಸ್ಥಳೀಯರ ಆರೋಪಿಸಿದ್ದರು. ಯಾರಿಗೋ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಕೆರೆಯ ಜಮೀನನ್ನು ಸರಕಾರಿ ಎಂದು ನಮೂದಿಸಲಾಗಿದೆ. ಈಗಾಗಲೇ ಕರೆಯ ಒಂದು ಭಾಗದಲ್ಲಿ ಕಲ್ಲು ಮಣ್ಣು ತುಂಬಿರುವುದರಿಂದ ಕೆರೆಯ ಗಾತ್ರ ಸಾಕಷ್ಟು ಕಿರಿದಾಗಿದೆ. ಕೆರೆಗಳನ್ನು ಉಳಿಸಿ ಅಭಿವೃದ್ಧಿಪಡಿಸಬೇಕೆಂದು ಆದೇಶ ಹೊರಡಿಸಿರುವ ಸರಕಾರ ಸದ್ರಿ ಕೆರೆಯ ಅತಿಕ್ರಮಣದ ಸಂಚನ್ನು ವಿಫಲಗೊಳಿಸಿ ಗ್ರಾಮಸ್ಥರಿಗೆ ಕೆರೆಯನ್ನು ಉಳಿಸಿಕೊಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದರು.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…