(ಇಂಟರ್ನೆಟ್ ಚಿತ್ರ )
ಮಂಗಳೂರು: ಪೌರತ್ವ ಕಾಯಿದೆ ಹಾಗೂ ಎನ್ ಸಿ ಆರ್ ವಿರುದ್ಧ ಮಂಗಳೂರಿನಲ್ಲಿ ಸೆಕ್ಷನ್ ಜಾರಿ ನಡುವೆಯೇ ನಡೆದ ಪ್ರತಿಭಟನೆಯಲ್ಲಿ 6 ಮಂದಿ ಗಾಯಗೊಂಡು ಇಬ್ಬರು ಮೃತಪಟ್ಟಿದ್ದಾರೆ.ಮಂಗಳೂರಿನಲ್ಲಿ ನಾಳೆ ಮಧ್ಯ ರಾತ್ರಿವರೆಗೂ ಕರ್ಫ್ಯೂ ಜಾರಿ ಮಾಡಿ ಪೊಲೀಸ್ ಆಯುಕ್ತ ಡಾ. ಪಿ.ಎಸ್. ಹರ್ಷ ಆದೇಶಿಸಿದ್ದಾರೆ.
ಸೆಕ್ಷನ್ ನಡುವೆಯೂ ಪ್ರತಿಭಟನೆ ನಡೆದಿತ್ತು. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತು, ತಕ್ಷಣವೇ ಪೊಲೀಸರು ಹಿಂಸಾಚಾರ ನಿಯಂತ್ರಣ ಮಾಡಲು ಪೊಲೀಸರು ಹರಸಾಹಸ ಪಟ್ಟರು. ಆದರೆ ಮುಖಕ್ಕೆ ಬಟ್ಟೆಕಟ್ಟಿಕೊಂಡು ಹಲವಾರು ಮಂದಿ ಪೊಲೀಸರಿಗೆ ಕಲ್ಲು ಎಸೆದು ಗಾಯವಾಯಿತು. ತಕ್ಷಣವೇ ಪೊಲೀಸರು ಅಶ್ರುವಾಯು ಪ್ರಯೋಗಿಸಿ ಗಲಭೆ ನಿಯಂತ್ರಣಕ್ಕೆ ತರಲು ಪ್ರಯತ್ನಿಸಿದರು.
ಪ್ರತಿಭಟನಾಕಾರರು ರಸ್ತೆಯಲ್ಲಿ ಬೆಂಕಿ ಹಚ್ಚಿ ಪ್ರತಿಭಟಿಸಿದ್ದಾರೆ. ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ್ದರಿಂದ ಗಾಳಿಯಲ್ಲಿ ಗುಂಡು ಸಿಡಿಸಿದ್ದಾರೆ. ಪ್ರತಿಭಟನಾಕಾರರು ಕಟ್ಟಡದಲ್ಲಿ ಸೇರಿಕೊಂಡಿದ್ದು, ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಧರಣಿ ವೇಳೆ 40 ಕ್ಕೂ ಹೆಚ್ಚು ಪೊಲೀಸರಿಗೆ ಹಾಗೂ ಪ್ರತಿಭಟನಾಕಾರರಿಗೆ ಗಾಯಗಳಾಗಿವೆ. ಈ ಸಂದರ್ಭ ಗಾಯಗೊಂಡ ಬೆಂಗ್ರೆ ನಿವಾಸಿ 23 ವರ್ಷದ ನೌಶೀನ್ ಮತ್ತು 49 ವರ್ಷದ ಜಲೀಲ್ ಎಂಬುವರು ಮೃತಪಟ್ಟಿದ್ದಾರೆ.
ಪರಿಸ್ಥಿತಿ ಉದ್ವಿಗ್ನಗೊಂಡಿರುವ ಕಾರಣ ಮಂಗಳೂರಿನಲ್ಲಿ ನಾಳೆ ಮಧ್ಯ ರಾತ್ರಿವರೆಗೂ ಕರ್ಫ್ಯೂ ಜಾರಿ ಮಾಡಿ ಪೊಲೀಸ್ ಆಯುಕ್ತ ಡಾ. ಪಿ.ಎಸ್. ಹರ್ಷ ಆದೇಶಿಸಿದ್ದಾರೆ. ನೂರು ಮಂದಿ ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ.
ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆತಂದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಗುರುವಾರ ರಾಜ್ಯಾದ್ಯಂತ ತೀವ್ರ ಪ್ರತಿಭಟನೆಗಳು ನಡೆಯುತ್ತಿದ್ದು, ಮಂಗಳೂರಿನಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.
ಮುಂಜಾಗ್ರತಾ ಕ್ರಮವಾಗಿ ಇಂದಿನಿಂದ 3 ದಿನಗಳ ಕಾಲ ರಾಜ್ಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಂಗಳೂರಿನಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಘು ಲಾಠಿಚಾರ್ಚ್ ಮಾಡಿದ್ದು, ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…