Advertisement
ಸುದ್ದಿಗಳು

ಪೌರತ್ವ ತಿದ್ದುಪಡಿಯ ಸದುದ್ದೇಶವನ್ನು ಕಟ್ಟಕಡೆಯ ವ್ಯಕ್ತಿಗೂ ತಲುಪಿಸಿ : ಬಿಜೆಪಿ ಕಾರ್ಯಕರ್ತರಿಗೆ ಕೋಟ ಕರೆ

Share

ಸುಳ್ಯ: ಪೌರತ್ವ ತಿದ್ದು ಪಡಿ ಕಾಯ್ದೆಯ ಬಗ್ಗೆ ಇಲ್ಲ ಸಲ್ಲದ ಅಪ ಪ್ರಚಾರ, ಆರೋಪ ಎಲ್ಲೆಡೆ ನಡೆಸಲಾಗುತಿದೆ. ದೇಶದ ಹಿತದೃಷ್ಠಿಯಿಂದ ಪೌರತ್ವ ತಿದ್ದುಪಡಿ ಕಾಯ್ದೆಯ ಸದುದ್ದೇಶವನ್ನು ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

Advertisement
Advertisement
Advertisement
Advertisement

ಸುಳ್ಯದ ಅಂಬೆಟಡ್ಕದ ಶ್ರೀ ವೆಂಕಟ್ರಮಣ ದೇವ ಮಂದಿರದ ಸಭಾಭವನದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಎಲ್ಲಾ ದೇಶದಲ್ಲಿಯೂ ಅದರದ್ದೇ ಆದ ಪೌರತ್ವ ಕಾಯಿದೆ ಇದೆ. ಆದರೆ ನಮ್ಮ ದೇಶದಲ್ಲಿ ಮಾತ್ರ ಪೌರತ್ವದ ಬಗ್ಗೆ ರಾಷ್ಟ್ರೀಯತೆಯ ಬಗ್ಗೆ ನಿರ್ಲಕ್ಷ್ಯ ವಹಿಸಲಾಗಿತ್ತು. ಪೌರತ್ವ ತಿದ್ದುಪಡಿ ಕಾಯ್ದೆ ತಂದ ಕಾರಣ ಎಲ್ಲರಲ್ಲಿಯೂ ರಾಷ್ಟ್ರ ಜಾಗೃತಿ ಮೂಡಿಸಲು, ರಾಷ್ಟ್ರೀಯತೆಯೆಡೆಗೆ ಎಲ್ಲರನ್ನು ಕರೆ ತರಲು ಸಾಧ್ಯವಾಗಿದೆ. ಇದು ಮೊದಲ ಯಶಸ್ಸು ಎಂದು ಅವರು ಹೇಳಿದರು. 370ನೇ ವಿಧಿಯ ರದ್ದು, ಪೌರತ್ವ ತಿದ್ದುಪಡಿ ಕಾಯಿದೆ ನಮ್ಮ ಹಿರಿಯರ ಕನಸಾಗಿತ್ತು. ಪ್ರಧಾನಿ ಮತ್ತು ಗೃಹ ಸಚಿವರು ಇಂದು ಹಿರಿಯರ ಕನಸನ್ನು ನನಸು ಮಾಡಿದ್ದಾರೆ ಎಂದವರು ಹೇಳಿದರು. ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರ ಆದ ಕಾನೂನಿನ ಬಗ್ಗೆ ವ್ಯವಸ್ಥಿತವಾದ ಅಪಪ್ರಚಾರ ನಡೆಸಲಾಗುತಿದೆ. ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನ ನಡೆಸಲಾಗುತಿದೆ ಎಂದ ಅವರು ಧರ್ಮ ನಡೆ ಮತ್ತು ರಾಷ್ಟ್ರ ನಡೆ ಒಂದೇ ಆಗಿರಬೇಕು ಎಂದು ಅಭಿಪ್ರಾಯಪಟ್ಟರು. ದ.ಕ.ಜಿಲ್ಲಾ ಬಿಜೆಪಿ ವತಿಯಿಂದ ಪೌರತ್ವ ತಿದ್ದುಪಡಿ ಕಾಯಿದೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಹಾ ಜನಜಾಗೃತಿ ಸಮಾವೇಶವನ್ನು ಜ.27 ರಂದು ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಕೇಂದ್ರ ರಕ್ಷಣಾ ಸಚಿವ ರಾಜ್‍ನಾಥ್ ಸಿಂಗ್ ಭಾಗವಹಿಸುವ ಸಮಾವೇಶಕ್ಕೆ ಅತೀ ಹೆಚ್ಚು ಮಂದಿ ಭಾಗವಹಿಸಬೇಕು ಎಂದರು. ಪೌರತ್ವ ತಿದ್ದುಪಡಿ ಕಾಯಿದೆಯ ಸತ್ಯಾಸತ್ಯತೆಯ ಬಗ್ಗೆ ಜನರಿಗೆ ತಿಳಿಸಲು ಗ್ರಾಮ ಸಭೆಯ ಮೂಲಕ ಜನರಿಗೆ ಮಾಹಿತಿ ನೀಡುವ ಸಾಧ್ಯತೆಗಳ ಬಗ್ಗೆ ಸರ್ಕಾರ ಚಿಂತೆ ನಡೆಸುತಿದೆ ಎಂದು ಅವರು ಹೇಳಿದರು.

Advertisement

ಶಾಸಕ ಎಸ್.ಅಂಗಾರ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಬಿಜೆಪಿ ಮುಖಂಡ ಎ.ವಿ.ತೀರ್ಥರಾಮ ಮಾತನಾಡಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಪಪ್ಪಾಯ ಹಣ್ಣು ಬರ್ಫಿ

ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…

3 hours ago

ಸೀತೆ ಪುನೀತೆಯೆ ? ಮತ್ತೊಮ್ಮೆ ಅಗ್ನಿ ಪರೀಕ್ಷೆಯೇ?

ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…

6 hours ago

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…

19 hours ago

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…

19 hours ago

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…

19 hours ago

ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ

ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…

20 hours ago