Advertisement
ಸುದ್ದಿಗಳು

ಪೌರತ್ವ ತಿದ್ದುಪಡಿಯ ಸದುದ್ದೇಶವನ್ನು ಕಟ್ಟಕಡೆಯ ವ್ಯಕ್ತಿಗೂ ತಲುಪಿಸಿ : ಬಿಜೆಪಿ ಕಾರ್ಯಕರ್ತರಿಗೆ ಕೋಟ ಕರೆ

Share

ಸುಳ್ಯ: ಪೌರತ್ವ ತಿದ್ದು ಪಡಿ ಕಾಯ್ದೆಯ ಬಗ್ಗೆ ಇಲ್ಲ ಸಲ್ಲದ ಅಪ ಪ್ರಚಾರ, ಆರೋಪ ಎಲ್ಲೆಡೆ ನಡೆಸಲಾಗುತಿದೆ. ದೇಶದ ಹಿತದೃಷ್ಠಿಯಿಂದ ಪೌರತ್ವ ತಿದ್ದುಪಡಿ ಕಾಯ್ದೆಯ ಸದುದ್ದೇಶವನ್ನು ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಸುಳ್ಯದ ಅಂಬೆಟಡ್ಕದ ಶ್ರೀ ವೆಂಕಟ್ರಮಣ ದೇವ ಮಂದಿರದ ಸಭಾಭವನದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಎಲ್ಲಾ ದೇಶದಲ್ಲಿಯೂ ಅದರದ್ದೇ ಆದ ಪೌರತ್ವ ಕಾಯಿದೆ ಇದೆ. ಆದರೆ ನಮ್ಮ ದೇಶದಲ್ಲಿ ಮಾತ್ರ ಪೌರತ್ವದ ಬಗ್ಗೆ ರಾಷ್ಟ್ರೀಯತೆಯ ಬಗ್ಗೆ ನಿರ್ಲಕ್ಷ್ಯ ವಹಿಸಲಾಗಿತ್ತು. ಪೌರತ್ವ ತಿದ್ದುಪಡಿ ಕಾಯ್ದೆ ತಂದ ಕಾರಣ ಎಲ್ಲರಲ್ಲಿಯೂ ರಾಷ್ಟ್ರ ಜಾಗೃತಿ ಮೂಡಿಸಲು, ರಾಷ್ಟ್ರೀಯತೆಯೆಡೆಗೆ ಎಲ್ಲರನ್ನು ಕರೆ ತರಲು ಸಾಧ್ಯವಾಗಿದೆ. ಇದು ಮೊದಲ ಯಶಸ್ಸು ಎಂದು ಅವರು ಹೇಳಿದರು. 370ನೇ ವಿಧಿಯ ರದ್ದು, ಪೌರತ್ವ ತಿದ್ದುಪಡಿ ಕಾಯಿದೆ ನಮ್ಮ ಹಿರಿಯರ ಕನಸಾಗಿತ್ತು. ಪ್ರಧಾನಿ ಮತ್ತು ಗೃಹ ಸಚಿವರು ಇಂದು ಹಿರಿಯರ ಕನಸನ್ನು ನನಸು ಮಾಡಿದ್ದಾರೆ ಎಂದವರು ಹೇಳಿದರು. ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರ ಆದ ಕಾನೂನಿನ ಬಗ್ಗೆ ವ್ಯವಸ್ಥಿತವಾದ ಅಪಪ್ರಚಾರ ನಡೆಸಲಾಗುತಿದೆ. ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನ ನಡೆಸಲಾಗುತಿದೆ ಎಂದ ಅವರು ಧರ್ಮ ನಡೆ ಮತ್ತು ರಾಷ್ಟ್ರ ನಡೆ ಒಂದೇ ಆಗಿರಬೇಕು ಎಂದು ಅಭಿಪ್ರಾಯಪಟ್ಟರು. ದ.ಕ.ಜಿಲ್ಲಾ ಬಿಜೆಪಿ ವತಿಯಿಂದ ಪೌರತ್ವ ತಿದ್ದುಪಡಿ ಕಾಯಿದೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಹಾ ಜನಜಾಗೃತಿ ಸಮಾವೇಶವನ್ನು ಜ.27 ರಂದು ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಕೇಂದ್ರ ರಕ್ಷಣಾ ಸಚಿವ ರಾಜ್‍ನಾಥ್ ಸಿಂಗ್ ಭಾಗವಹಿಸುವ ಸಮಾವೇಶಕ್ಕೆ ಅತೀ ಹೆಚ್ಚು ಮಂದಿ ಭಾಗವಹಿಸಬೇಕು ಎಂದರು. ಪೌರತ್ವ ತಿದ್ದುಪಡಿ ಕಾಯಿದೆಯ ಸತ್ಯಾಸತ್ಯತೆಯ ಬಗ್ಗೆ ಜನರಿಗೆ ತಿಳಿಸಲು ಗ್ರಾಮ ಸಭೆಯ ಮೂಲಕ ಜನರಿಗೆ ಮಾಹಿತಿ ನೀಡುವ ಸಾಧ್ಯತೆಗಳ ಬಗ್ಗೆ ಸರ್ಕಾರ ಚಿಂತೆ ನಡೆಸುತಿದೆ ಎಂದು ಅವರು ಹೇಳಿದರು.

ಶಾಸಕ ಎಸ್.ಅಂಗಾರ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಬಿಜೆಪಿ ಮುಖಂಡ ಎ.ವಿ.ತೀರ್ಥರಾಮ ಮಾತನಾಡಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

4 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

6 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

7 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

19 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

22 hours ago