Advertisement
ಸುದ್ದಿಗಳು

ಪೌರತ್ವ ತಿದ್ದುಪಡಿ ಮಸೂದೆಯಿಂದ ದಲಿತ ಆದಿವಾಸಿ ಸಮುದಾಯಗಳ ಬದುಕಿಗೆ ಅತಂತ್ರ – ರವಿಚಂದ್ರ ಕೊಂಚಾಡಿ

Share

 

Advertisement
Advertisement

ಮಂಗಳೂರು: ದೇಶವನ್ನು ಆಳುತ್ತಿರುವ ಜನವಿರೋಧಿ ಬಿಜೆಪಿ ನೇತೃತ್ವದ ಸರಕಾರವು ದಲಿತ ಆದಿವಾಸಿ ಸಮುದಾಯದ ಬದುಕಿನ ಮೇಲೆ ನಿರಂತರ ಕುದುರೆ ಸವಾರಿ ಮಾಡುತ್ತಿದ್ದು ಪ್ರಸ್ತುತ ಪೌರತ್ವ ತಿದ್ದುಪಡಿ ಮಸೂದೆಯಿಂದ ಈ ದೇಶದ ಮೂಲನಿವಾಸಿಗಳಾದ ದಲಿತ ಆದಿವಾಸಿ ಬುಡಕಟ್ಟು ಸಮುದಾಯಗಳ ಬದುಕು ಅತಂತ್ರವಾದಂತೆ ಎಂದು ರವಿಚಂದ್ರ ಕೊಪ್ಪಲಕಾಡು ಹೇಳಿದರು. ಅವರು ದಲಿತ ಹಕ್ಕುಗಳ ಸಮಿತಿಯ ಕೊಂಚಾಡಿ ಘಟಕ ಸಮಾವೇಶವನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದರು.

ಸರ್ವ ಜನಾಂಗದ ಶಾಂತಿಯ ತೋಟ ಆಗಿರುವ ಭಾರತವನ್ನು ಮತ ಧರ್ಮಗಳ ಆಧಾರದ ಮೇಲೆ ವಿಘಟನೆ ಮಾಡುವ ಸಂಘ ಪರಿವಾರದ ಕುತಂತ್ರವನ್ನು ಈ ಮಣ್ಣಿನ ಮೂಲನಿವಾಸಿಗಳಾದ ದಲಿತರು ಆದಿವಾಸಿಗಳು ಸೋಲಿಸಬೇಕೆಂದು ಕರೆನೀಡಿದರು. ಬಿಜೆಪಿ ಆಳ್ವಿಕೆ ಪ್ರಾರಂಭವಾದ ಮೇಲೆ ದಲಿತರ ಮೇಲೆ ದೌರ್ಜನ್ಯದ ಘಟನೆಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ದಲಿತ ಹಕ್ಕುಗಳ ಸಮಿತಿಯ ಜಿಲ್ಲಾಧ್ಯಕ್ಷರಾದ ತಿಮ್ಮಯ್ಯ ಕೊಂಚಾಡಿ, ನಗರ ಕಾರ್ಯದರ್ಶಿ ಕೃಷ್ಣ ತಣ್ಣೀರುಬಾವಿ, ಡಿವೈಎಫ್‌ಐ ನಗರಾಧ್ಯಕ್ಷರಾದ ನವೀನ್ ಬೊಲ್ಪುಗುಡ್ಡೆ, ಕಟ್ಟಡ ಕಾರ್ಮಿಕರ ಮುಂದಾಳುಗಳಾದ ಚಂದ್ರಹಾಸ್, ದಯಾನಂದ ಶೆಟ್ಟಿಗಾರ್, ಶಶಿಕುಮಾರ್ ಗುಂಡಳಿಕೆ ಮಾತನಾಡಿದರು.
ಗತ ವರ್ಷದ ವರದಿಯನ್ನು ಡಿಎಚ್‌ಎಸ್ ನಗರ ಸಮಿತಿ ಸದಸ್ಯರಾದ ಪ್ರವೀಣ್ ಕೊಂಚಾಡಿ ಮಂಡಿಸಿದರು. ಸಭೆಯ ಅಧ್ಯಕ್ಷತೆಯನ್ನು ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನ ನಿರ್ದೇಶಕರಾದ ನಾರಾಯಣ ಕೊಂಚಾಡಿ ವಹಿಸಿದರು. ಪ್ರಾರಂಭದಲ್ಲಿ ಪಾಂಡುರಂಗ ಕೆ. ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಕೊನೆಯಲ್ಲಿ ನೂತನ ಕಾರ್ಯದರ್ಶಿ ದೊಂಬಯ್ಯ ಕೆ. ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

11 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

11 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

3 days ago