ನವದೆಹಲಿ: ವಿವಾದಿತ ಪೌರತ್ವ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲೂ ಅಂಗೀಕಾರವಾಗಿದೆ. 209 ಸದಸ್ಯರ ಬಲವಿದ್ದ ರಾಜ್ಯಸಭೆಯಲ್ಲಿ ಮಸೂದೆ ಪರವಾಗಿ 117 ಸಂಸದರು, ವಿರೋಧವಾಗಿ 92 ಸಂಸದರು ಮತ ಚಲಾಯಿಸಿದರು.
ರಾಜ್ಯಸಭೆಯಲ್ಲಿ ಸತತ ಏಳುಗಂಟೆ ಚರ್ಚೆ ನಡೆದ ಬಳಿಕ ಬಿಲ್ ಪಾಸ್ ಆಗಿದೆ. ಮುಂದಿನ ಹಂತದಲ್ಲಿ ರಾಷ್ಟ್ರಪತಿಯಿಂದ ಮಸೂದೆಗೆ ಅಂಕಿತ ದೊರೆತ ಕೂಡಲೇ ಕಾಯ್ದೆಯಾಗಿ ಪರಿವರ್ತನೆಯಾಗಲಿದೆ. ಪೌರತ್ವ ತಿದ್ದುಪಡಿ ಮಸೂದೆಯ ಪರಿಶೀಲನೆಗೆ ಆಯ್ಕೆ ಸಮಿತಿಗೆ ಕಳಿಸಲು ವಿರೋಧಿಸಿ 124 ಎಂಪಿಗಳು ಹಾಗೂ ಕಳಿಸಬೇಕು ಎಂದು ಪರವಾಗಿ 99 ಎಂಪಿಗಳು ಮತ ಚಲಾಯಿಸಿದರು. ಹಾಗಾಗಿ ಮಸೂದೆ ಆಯ್ಕೆ ಸಮಿತಿಗೆ ಕಳಿಸುವುದನ್ನು ರಾಜ್ಯಸಭೆಯಲ್ಲಿ ತಿರಸ್ಕರಿಸಲಾಯಿತು.
ಇಂದು ರಾಜ್ಯಸಭೆಯಲ್ಲಿ ಗೃಹಸಚಿವ ಅಮಿತ್ ಷಾ ಅವರು ಮಸೂದೆ ಮಂಡನೆ ಮಾಡಿದರು. ಮಂಡನೆಯಾಗುತ್ತಿದ್ದಂತೆ ಪ್ರತಿಪಕ್ಷಗಳು ವಿರೋಧಿಸಿದವು. ಬಿಲ್ ಮಂಡನೆಗೂ ಮೊದಲಿನಿಂದಲೇ ಈಶಾನ್ಯ ಭಾರತದಲ್ಲಿ ಭಾರೀ ಪ್ರತಿಭಟನೆಗಳು ನಡೆಯುತ್ತಿವೆ. ಸೋಮವಾರ ಲೋಕಸಭೆಯಲ್ಲಿ ಬಿಲ್ ಮಂಡನೆಯಾದ ಬಳಿಕ 12 ತಾಸು ಚರ್ಚೆ ನಡೆದಿತ್ತು. ಕೊನೆಗೂ ಬಿಲ್ ಪರವಾಗಿ 311 ಸಂಸದರು, ವಿರೋಧವಾಗಿ 80 ಮಂದಿ ಮತ ಹಾಕುವ ಮೂಲಕ ಮಸೂದೆ ಅಂಗೀಕಾರವಾಗಿತ್ತು.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…