ನವದೆಹಲಿ: ವಿವಾದಿತ ಪೌರತ್ವ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲೂ ಅಂಗೀಕಾರವಾಗಿದೆ. 209 ಸದಸ್ಯರ ಬಲವಿದ್ದ ರಾಜ್ಯಸಭೆಯಲ್ಲಿ ಮಸೂದೆ ಪರವಾಗಿ 117 ಸಂಸದರು, ವಿರೋಧವಾಗಿ 92 ಸಂಸದರು ಮತ ಚಲಾಯಿಸಿದರು.
ರಾಜ್ಯಸಭೆಯಲ್ಲಿ ಸತತ ಏಳುಗಂಟೆ ಚರ್ಚೆ ನಡೆದ ಬಳಿಕ ಬಿಲ್ ಪಾಸ್ ಆಗಿದೆ. ಮುಂದಿನ ಹಂತದಲ್ಲಿ ರಾಷ್ಟ್ರಪತಿಯಿಂದ ಮಸೂದೆಗೆ ಅಂಕಿತ ದೊರೆತ ಕೂಡಲೇ ಕಾಯ್ದೆಯಾಗಿ ಪರಿವರ್ತನೆಯಾಗಲಿದೆ. ಪೌರತ್ವ ತಿದ್ದುಪಡಿ ಮಸೂದೆಯ ಪರಿಶೀಲನೆಗೆ ಆಯ್ಕೆ ಸಮಿತಿಗೆ ಕಳಿಸಲು ವಿರೋಧಿಸಿ 124 ಎಂಪಿಗಳು ಹಾಗೂ ಕಳಿಸಬೇಕು ಎಂದು ಪರವಾಗಿ 99 ಎಂಪಿಗಳು ಮತ ಚಲಾಯಿಸಿದರು. ಹಾಗಾಗಿ ಮಸೂದೆ ಆಯ್ಕೆ ಸಮಿತಿಗೆ ಕಳಿಸುವುದನ್ನು ರಾಜ್ಯಸಭೆಯಲ್ಲಿ ತಿರಸ್ಕರಿಸಲಾಯಿತು.
ಇಂದು ರಾಜ್ಯಸಭೆಯಲ್ಲಿ ಗೃಹಸಚಿವ ಅಮಿತ್ ಷಾ ಅವರು ಮಸೂದೆ ಮಂಡನೆ ಮಾಡಿದರು. ಮಂಡನೆಯಾಗುತ್ತಿದ್ದಂತೆ ಪ್ರತಿಪಕ್ಷಗಳು ವಿರೋಧಿಸಿದವು. ಬಿಲ್ ಮಂಡನೆಗೂ ಮೊದಲಿನಿಂದಲೇ ಈಶಾನ್ಯ ಭಾರತದಲ್ಲಿ ಭಾರೀ ಪ್ರತಿಭಟನೆಗಳು ನಡೆಯುತ್ತಿವೆ. ಸೋಮವಾರ ಲೋಕಸಭೆಯಲ್ಲಿ ಬಿಲ್ ಮಂಡನೆಯಾದ ಬಳಿಕ 12 ತಾಸು ಚರ್ಚೆ ನಡೆದಿತ್ತು. ಕೊನೆಗೂ ಬಿಲ್ ಪರವಾಗಿ 311 ಸಂಸದರು, ವಿರೋಧವಾಗಿ 80 ಮಂದಿ ಮತ ಹಾಕುವ ಮೂಲಕ ಮಸೂದೆ ಅಂಗೀಕಾರವಾಗಿತ್ತು.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…