ನವದೆಹಲಿ: ವಿವಾದಿತ ಪೌರತ್ವ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲೂ ಅಂಗೀಕಾರವಾಗಿದೆ. 209 ಸದಸ್ಯರ ಬಲವಿದ್ದ ರಾಜ್ಯಸಭೆಯಲ್ಲಿ ಮಸೂದೆ ಪರವಾಗಿ 117 ಸಂಸದರು, ವಿರೋಧವಾಗಿ 92 ಸಂಸದರು ಮತ ಚಲಾಯಿಸಿದರು.
ರಾಜ್ಯಸಭೆಯಲ್ಲಿ ಸತತ ಏಳುಗಂಟೆ ಚರ್ಚೆ ನಡೆದ ಬಳಿಕ ಬಿಲ್ ಪಾಸ್ ಆಗಿದೆ. ಮುಂದಿನ ಹಂತದಲ್ಲಿ ರಾಷ್ಟ್ರಪತಿಯಿಂದ ಮಸೂದೆಗೆ ಅಂಕಿತ ದೊರೆತ ಕೂಡಲೇ ಕಾಯ್ದೆಯಾಗಿ ಪರಿವರ್ತನೆಯಾಗಲಿದೆ. ಪೌರತ್ವ ತಿದ್ದುಪಡಿ ಮಸೂದೆಯ ಪರಿಶೀಲನೆಗೆ ಆಯ್ಕೆ ಸಮಿತಿಗೆ ಕಳಿಸಲು ವಿರೋಧಿಸಿ 124 ಎಂಪಿಗಳು ಹಾಗೂ ಕಳಿಸಬೇಕು ಎಂದು ಪರವಾಗಿ 99 ಎಂಪಿಗಳು ಮತ ಚಲಾಯಿಸಿದರು. ಹಾಗಾಗಿ ಮಸೂದೆ ಆಯ್ಕೆ ಸಮಿತಿಗೆ ಕಳಿಸುವುದನ್ನು ರಾಜ್ಯಸಭೆಯಲ್ಲಿ ತಿರಸ್ಕರಿಸಲಾಯಿತು.
ಇಂದು ರಾಜ್ಯಸಭೆಯಲ್ಲಿ ಗೃಹಸಚಿವ ಅಮಿತ್ ಷಾ ಅವರು ಮಸೂದೆ ಮಂಡನೆ ಮಾಡಿದರು. ಮಂಡನೆಯಾಗುತ್ತಿದ್ದಂತೆ ಪ್ರತಿಪಕ್ಷಗಳು ವಿರೋಧಿಸಿದವು. ಬಿಲ್ ಮಂಡನೆಗೂ ಮೊದಲಿನಿಂದಲೇ ಈಶಾನ್ಯ ಭಾರತದಲ್ಲಿ ಭಾರೀ ಪ್ರತಿಭಟನೆಗಳು ನಡೆಯುತ್ತಿವೆ. ಸೋಮವಾರ ಲೋಕಸಭೆಯಲ್ಲಿ ಬಿಲ್ ಮಂಡನೆಯಾದ ಬಳಿಕ 12 ತಾಸು ಚರ್ಚೆ ನಡೆದಿತ್ತು. ಕೊನೆಗೂ ಬಿಲ್ ಪರವಾಗಿ 311 ಸಂಸದರು, ವಿರೋಧವಾಗಿ 80 ಮಂದಿ ಮತ ಹಾಕುವ ಮೂಲಕ ಮಸೂದೆ ಅಂಗೀಕಾರವಾಗಿತ್ತು.
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…