Advertisement

ಪ್ರಕೃತಿ ವಿಕೋಪ ರಕ್ಷಣಾ ಕಾರ್ಯಕ್ಕೆ ಕೈ ಜೋಡಿಸಲು ಕರೆ

Share

ಸುಳ್ಯ:  ಅತಿವೃಷ್ಠಿ, ಪ್ರಕೃತಿ ವಿಕೋಪ ಉಂಟಾದಲ್ಲಿ ಅದನ್ನು ಎದುರಿಸಲು ತಾಲೂಕು ಆಡಳಿತ ಎಲ್ಲಾ ರೀತಿಯಲ್ಲೂ ಸನ್ನದ್ಧವಾಗಿದೆ.

ಅಂತಹಾ ಸಂದರ್ಭದಲ್ಲಿ ಯುವಕರು, ವಿವಿಧ ಸಂಘಟನೆಗಳ ಸದಸ್ಯರು, ಸಾರ್ವಜನಿಕರು ಕೈ ಜೋಡಿಸಬೇಕು ಎಂದು ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಹೇಳಿದ್ದಾರೆ.

ಪ್ರಕೃತಿ ವಿಕೋಪ ರಕ್ಷಣೆ ಕುರಿತು ಚರ್ಚಿಸಲು ಸುಳ್ಯ ತಾಲೂಕು ಕಚೇರಿಯಲ್ಲಿ ನಡೆದ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ರಕ್ಷಣಾ ಕಾರ್ಯದಲ್ಲಿ ಪರಿಣತಿ ಹೊಂದಿರುವ ಯುವಕರು ರಕ್ಷಣಾ ತಂಡದೊಂದಿಗೆ ಸೇರಿ ಕಾರ್ಯನಿರ್ವಹಿಸಬೇಕು. ಪ್ರತಿ ಗ್ರಾಮ ಮಟ್ಟದಲ್ಲಿ ರಕ್ಷಣಾ ತಂಡಗಳನ್ನು ರಚಿಸಲಾಗಿದ್ದು ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಎಲ್ಲೆಡೆ ತೀವ್ರ ಕಟ್ಟೆಚ್ಚರ ವಹಿಲಾಗುತ್ತಿದ್ದು ಸಾರ್ವಜನಿಕರು ಸಹಕಾರ ನೀಡಬೇಕು ಎಂದರು. ಮುಂಜಾಗ್ರತಾ  ಕ್ರಮವಾಗಿ ಕಲ್ಲುಗುಂಡಿ ಮತ್ತು ಕೊಲ್ಲಮೊಗ್ರ ದಲ್ಲಿ ನಿರಾಶ್ರಿತರ ಪರಿಹಾರ ಕೇಂದ್ರ ತೆರೆಯಲಾಗಿದೆ. ಯಾವುದಾದರು ಕುಟುಂಬಗಳಿಗೆ ತೊಂದರೆ ಉಂಟಾದರೆ ಅವರನ್ನು ಅಲ್ಲಿಗೆ ಸ್ಥಳಾಂತರಿಸಲಾಗುವುದು. ವಿಪತ್ತು ನಿರ್ವಹಣೆಗೆ ಅಗತ್ಯ ಸಲಕರಣೆಗಳನ್ನು ಒದಗಿಸಲಾಗಿದೆ ಎಂದು ಮಾಹಿತಿ ನೀಡಿದರು.

ಯಾವುದೇ ರೀತಿಯ ಸಮಸ್ಯೆಗಳು ಉಂಟಾದರೆ ಕೂಡಲೇ ಮಾಹಿತಿ ನೀಡಬೇಕು ಮತ್ತು ಮಳೆಗಾಲ ಕಳೆಯುವ ತನಕ ಜಾಗೃತರಾಗಿರುವಂತೆ ಎಂದು ಎಸ್‌ ಐ ಎಂ.ಆರ್.ಹರೀಶ್ ಸೂಚಿಸಿದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ,
ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್, ಮೆಸ್ಕಾಂ ಇಂಜಿನಿಯರ್ ಸುಪ್ರೀತ್, ಗೃಹರಕ್ಷಕ ದಳದ ಕಮಾಂಡೆಂಟ್ ಜಯಂತ್ ಶೆಟ್ಟಿ, ವರ್ತಕರ ಸಂಘದ ಅಧ್ಯಕ್ಷ ಪಿ.ಬಿ‌.ಸುಧಾಕರ ರೈ, ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಡಾ.ಅನುರಾಧಾ ಕುರುಂಜಿ, ನಗರ ಪಂಚಾಯತ್ ಸದಸ್ಯ ಬಾಲಕೃಷ್ಣ ಭಟ್, ವಕೀಲ ಕೆ
ಎಲ್.ಪ್ರದೀಪ್ ಕುಮಾರ್ ಮತ್ತಿತರರು ಮಾತನಾಡಿದರು.

ನಗರ ಪಂಚಾಯತ್ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

3 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

12 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

12 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

13 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

1 day ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 day ago