ಪ್ರಕೃತಿ ವಿಕೋಪ ರಕ್ಷಣಾ ಸಮಿತಿ : ಕಳಂಜದಲ್ಲೂ ಪ್ರಕೃತಿ ವಿಕೋಪ ಸಮಿತಿ ರಚನೆ

May 20, 2019
2:22 PM

ಬೆಳ್ಳಾರೆ: ಸುಳ್ಯ ತಾಲೂಕಿನಾದ್ಯಂತ ಪ್ರಕೃತಿ ವಿಕೋಪ ಸಮಿತಿ ರಚನೆ ಆರಂಭವಾಗಿದ್ದು,  ಕಳಂಜ ಗ್ರಾಮ ಪಂಚಾಯತ್ ನಲ್ಲೂ ಪ್ರಕೃತಿ ವಿಕೋಪ ರಚನಾ ಸಮಿತಿಯನ್ನು ರಚನೆ ಮಾಡಿಕೊಂಡಿದೆ. ಉಳಿದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲೂ ರಚನೆಯಾಗುತ್ತಿದೆ.

Advertisement
Advertisement

ಗ್ರಾಮ ಪಂಚಾಯತ್ ಮಟ್ಟದ ಸಮಿತಿಯ ತಾಲೂಕು ವೀಕ್ಷಕರಾಗಿ ನೊಡೇಲ್ ಅಧಿಕಾರಿಗಳಿದ್ದು, ಮೇಲ್ವಿಚಾರಕನಾಗಿ ಒಬ್ಬ ಅಧಿಕಾರಿಯಿರುತ್ತಾರೆ. ಮಳೆಗಾಲದ ಅವಧಿಯ ಸಂದರ್ಭದಲ್ಲಿ ವಾರದ 7 ದಿನ ಹಾಗೂ  ದಿನದ 24 ಗಂಟೆಯೂ ಮಳೆಗಾಲದ ವಿಪತ್ತಿನ ವಿರುದ್ಧ ಸದಾ ಜನರ ರಕ್ಷಣೆಗಾಗಿ ಸನ್ನದ್ದವಾಗಿರುತ್ತದೆ.

ಸಮಿತಿಯ ಕಾರ್ಯವೈಖರಿ ಹೀಗಿರುತ್ತದೆ:

ಸಮಿತಿಯ ವತಿಯಿಂದ ಜೇಸಿಬಿ, ಹಿಟಾಚಿ, ಮೆಸ್ಕಾಂ ಇಲಾಖೆ ಹಾಗು ಆರೋಗ್ಯ ಇಲಾಖೆಯವರ ಸಂಪರ್ಕ ಸಂಖ್ಯೆಯನ್ನು ಸಂಗ್ರಹಿಸಿಡಲಾಗುತ್ತದೆ. ಮಳೆಗಾಲದ ಸಂದರ್ಭದಲ್ಲಿ ಈ ಎಲ್ಲಾ ಇಲಾಖೆಯ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಅಗತ್ಯ ಬಿದ್ದಾಗ ಜನರಿಗೆ ಸುಲಭವಾಗುವಂತೆ ತಕ್ಷಣ ಸ್ಪಂದಿಸುತ್ತದೆ.ಪ್ರಕೃತಿ ವಿಕೋಪ ರಕ್ಷಣಾ ಸಮಿತಿಯು ಸದಾ ಸಂಬಂಧಿಸಿದ ಇಲಾಖೆಯೊಂದಿಗೆ ಸಂಪರ್ಕದಲ್ಲಿಯೇ ಇದ್ದು, ಜನರನ್ನು ವೃಷ್ಠಿಯ ವಿಪತ್ತಿನಿಂದ ರಕ್ಷಿಸಲು ಶ್ರಮಿಸುತ್ತದೆ.
ನೆರೆ ಹಾವಳಿ,ಮಳೇ ಗಾಳಿಯಿಂದ ಹೆಚ್ಚಿನ ಸಮಸ್ಯೆ ಕಂಡು ಬರುವ ಪ್ರದೇಶಗಳಲ್ಲಿ ಗಂಜಿ ಕೇಂದ್ರಗಳನ್ನು ಸ್ಥಾಪಿಸುವ ಕುರಿತು ತ್ವರಿತ ಕ್ರಮಕೈಗೊಳ್ಳುತ್ತದೆ. ಈ ಕುರಿತು ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಸಿಡಿಪಿಒ ಹಾಗು ಪಶು ಇಲಾಖೆಗಳೊಂದಿಗೆ ಸಂಪರ್ಕದಲ್ಲಿದ್ದು ಮಾಹಿತಿಗಳನ್ನು ನೀಡುತ್ತಿರುತ್ತದೆ. ಭಾರಿ ಮಳೆಯಾದ ಸಂದರ್ಭ ಶಾಲೆಗಳಿಗೆ ರಜೆ ನೀಡುವ ಶಿಫಾರಸ್ಸನ್ನು ಸಮಿತಿ ಅಧಿಕಾರಿಗಳಿಗೆ ಮಾಡುತ್ತದೆ.

ಸಮಿತಿಯ ರಚನೆಗೆ ಕಾರಣ

Advertisement

ಕಳೆದ ಬಾರಿ ಕೊಡಗಿನಲ್ಲಿ ನಡೆದ ಪ್ರಾಕೃತಿಕ ವಿಕೋಪದ ಪರಿಣಾಮ ಕೊಡಗು ಹಾಗು ದಕ್ಷಿಣ ಕನ್ನಡದ ಜನತೆಯನ್ನೇ ಬೆಚ್ಚಿಬೀಳಿಸಿತ್ತು. ಸಾಮಾನ್ಯ ಜನರು ಪ್ರಕೃತಿಯ ವೈಪರಿತ್ಯವನ್ನು ಎದುರಿಸಲು ಪೂರ್ವ ತಯಾರಿ ನಡೆಸಿರಲಿಲ್ಲ. ಆದುದರಿಂದ ಈ ಬಾರಿ ಎಲ್ಲಾ ಕಡೆಯೂ ಇನ್ನೇನು ಮಳೆಗಾಲ ಆರಂಭಗೊಳ್ಳುವುದಕ್ಕೂ ಮೊದಲು ಪ್ರಕೃತಿ ವಿಕೋಪ ರಕ್ಷಣಾ ಸಮಿತಿಯನ್ನು ರಚಿಸಲಾಗುತ್ತಿದೆ.

ಈ ಬಗ್ಗೆ ಮಾತನಾಡಿದ ಕಳಂಜ ಗ್ರಾಪಂ ಅಭಿವೃದ್ಧಿ ಅಧಿಕಾರಿ ಶ್ರೀಧರ್ ಕೆ ಆರ್, ” ಜನರಿಗೆ ತೊಂದರೆಯಾಗದಂತೆ ಮುಂಜಾಗೃತಾ ಕ್ರಮವಾಗಿ ಎಲ್ಲಾ ಕಡೆಯೂ ಇಂತಹ ಸಮಿತಿಯನ್ನು ರಚನೆ ಮಾಡಲಾಗುತ್ತಿದೆ. ಸುಳ್ಯ ತಾಲೂಕಿನ ಗ್ರಾಮ ಪಂಚಾಯತ್ ಮಟ್ಟದಲ್ಲಿ ಪ್ರಥಮವಾಗಿ ನಮ್ಮ ಪಂಚಾಯತ್ ಈ ಸಮಿತಿಯನ್ನು ರಚನೆ ಮಾಡಿಕೊಂಡಿದೆ.” ಎಂದು ಹೇಳುತ್ತಾರೆ.

ಗ್ರಾಮಮಟ್ಟದ ಸಮಿತಿ ಬಗ್ಗೆ ಮಾತನಾಡಿದ ತಹಶೀಲ್ದಾರ್ ಕುಂಞ ಅಹಮ್ಮದ್, “ಯಾವುದೇ ಪ್ರಾಕೃತಿಕ ವಿಕೋಪದಿಂದ ಸಾರ್ವಜನಿಕರು ಬಾಧೆಪಡದಂತೆ ಸಹಾಯ ಮಾಡುವ ಮುಖ್ಯ ಉದ್ದೇಶ ಪ್ರಾಕೃತಿಕ ವಿಕೋಪ ರಕ್ಷಣಾ ಸಮಿತಿಯ ಮೊದಲ ಧ್ಯೇಯವಾಗಿದೆ. ಸಹಕಾರಕ್ಕಾಗಿ ಸಮಿತಿಯು ಸರಕಾರದ ಎಲ್ಲಾ ಇಲಾಖೆಯೊಂದಿಗೆ ಸಂಪರ್ಕದಲ್ಲಿರುತ್ತದೆ.” ಎನ್ನುತ್ತಾರೆ.

 

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಹಿಳಾ ಗ್ರಾಮಸಭೆ | ರಾಷ್ಟೀಯ ಕೃಷಿ ವಿಕಾಸ ಯೋಜನೆ ಬಗ್ಗೆ ಮಾಹಿತಿ ನೀಡಿದ ವಿಜ್ಞಾನಿ
May 25, 2025
5:57 AM
by: The Rural Mirror ಸುದ್ದಿಜಾಲ
ಮರ್ಕಂಜ ಪ್ರಶಾಂತ್ ಕೆ ಅವರಿಗೆ ಕರ್ನಾಟಕ ಲಲಿತಕಲಾ ಅಕಾಡೆಮಿ 52 ನೇ ವಾರ್ಷಿಕ ಬಹುಮಾನ
May 25, 2025
5:48 AM
by: The Rural Mirror ಸುದ್ದಿಜಾಲ
ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ
May 22, 2025
10:48 PM
by: The Rural Mirror ಸುದ್ದಿಜಾಲ
ಹಾಳೆತಟ್ಟೆಯ ಬಳಿಕ ಈಗ ಮಾವಿನಹಣ್ಣು | ಭಾರತದ 15 ಮಾವಿನ ಹಣ್ಣು ಶಿಪ್‌ಮೆಂಟ್‌ಗಳನ್ನು ತಿರಸ್ಕರಿಸಿದ ಅಮೇರಿಕಾ |
May 21, 2025
7:45 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group