Advertisement
ವಿಶೇಷ ವರದಿಗಳು

ಪ್ರಕೃತಿ ವಿಕೋಪ ರಕ್ಷಣಾ ಸಮಿತಿ : ಕಳಂಜದಲ್ಲೂ ಪ್ರಕೃತಿ ವಿಕೋಪ ಸಮಿತಿ ರಚನೆ

Share

ಬೆಳ್ಳಾರೆ: ಸುಳ್ಯ ತಾಲೂಕಿನಾದ್ಯಂತ ಪ್ರಕೃತಿ ವಿಕೋಪ ಸಮಿತಿ ರಚನೆ ಆರಂಭವಾಗಿದ್ದು,  ಕಳಂಜ ಗ್ರಾಮ ಪಂಚಾಯತ್ ನಲ್ಲೂ ಪ್ರಕೃತಿ ವಿಕೋಪ ರಚನಾ ಸಮಿತಿಯನ್ನು ರಚನೆ ಮಾಡಿಕೊಂಡಿದೆ. ಉಳಿದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲೂ ರಚನೆಯಾಗುತ್ತಿದೆ.

ಗ್ರಾಮ ಪಂಚಾಯತ್ ಮಟ್ಟದ ಸಮಿತಿಯ ತಾಲೂಕು ವೀಕ್ಷಕರಾಗಿ ನೊಡೇಲ್ ಅಧಿಕಾರಿಗಳಿದ್ದು, ಮೇಲ್ವಿಚಾರಕನಾಗಿ ಒಬ್ಬ ಅಧಿಕಾರಿಯಿರುತ್ತಾರೆ. ಮಳೆಗಾಲದ ಅವಧಿಯ ಸಂದರ್ಭದಲ್ಲಿ ವಾರದ 7 ದಿನ ಹಾಗೂ  ದಿನದ 24 ಗಂಟೆಯೂ ಮಳೆಗಾಲದ ವಿಪತ್ತಿನ ವಿರುದ್ಧ ಸದಾ ಜನರ ರಕ್ಷಣೆಗಾಗಿ ಸನ್ನದ್ದವಾಗಿರುತ್ತದೆ.

ಸಮಿತಿಯ ಕಾರ್ಯವೈಖರಿ ಹೀಗಿರುತ್ತದೆ:

ಸಮಿತಿಯ ವತಿಯಿಂದ ಜೇಸಿಬಿ, ಹಿಟಾಚಿ, ಮೆಸ್ಕಾಂ ಇಲಾಖೆ ಹಾಗು ಆರೋಗ್ಯ ಇಲಾಖೆಯವರ ಸಂಪರ್ಕ ಸಂಖ್ಯೆಯನ್ನು ಸಂಗ್ರಹಿಸಿಡಲಾಗುತ್ತದೆ. ಮಳೆಗಾಲದ ಸಂದರ್ಭದಲ್ಲಿ ಈ ಎಲ್ಲಾ ಇಲಾಖೆಯ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಅಗತ್ಯ ಬಿದ್ದಾಗ ಜನರಿಗೆ ಸುಲಭವಾಗುವಂತೆ ತಕ್ಷಣ ಸ್ಪಂದಿಸುತ್ತದೆ.ಪ್ರಕೃತಿ ವಿಕೋಪ ರಕ್ಷಣಾ ಸಮಿತಿಯು ಸದಾ ಸಂಬಂಧಿಸಿದ ಇಲಾಖೆಯೊಂದಿಗೆ ಸಂಪರ್ಕದಲ್ಲಿಯೇ ಇದ್ದು, ಜನರನ್ನು ವೃಷ್ಠಿಯ ವಿಪತ್ತಿನಿಂದ ರಕ್ಷಿಸಲು ಶ್ರಮಿಸುತ್ತದೆ.
ನೆರೆ ಹಾವಳಿ,ಮಳೇ ಗಾಳಿಯಿಂದ ಹೆಚ್ಚಿನ ಸಮಸ್ಯೆ ಕಂಡು ಬರುವ ಪ್ರದೇಶಗಳಲ್ಲಿ ಗಂಜಿ ಕೇಂದ್ರಗಳನ್ನು ಸ್ಥಾಪಿಸುವ ಕುರಿತು ತ್ವರಿತ ಕ್ರಮಕೈಗೊಳ್ಳುತ್ತದೆ. ಈ ಕುರಿತು ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಸಿಡಿಪಿಒ ಹಾಗು ಪಶು ಇಲಾಖೆಗಳೊಂದಿಗೆ ಸಂಪರ್ಕದಲ್ಲಿದ್ದು ಮಾಹಿತಿಗಳನ್ನು ನೀಡುತ್ತಿರುತ್ತದೆ. ಭಾರಿ ಮಳೆಯಾದ ಸಂದರ್ಭ ಶಾಲೆಗಳಿಗೆ ರಜೆ ನೀಡುವ ಶಿಫಾರಸ್ಸನ್ನು ಸಮಿತಿ ಅಧಿಕಾರಿಗಳಿಗೆ ಮಾಡುತ್ತದೆ.

ಸಮಿತಿಯ ರಚನೆಗೆ ಕಾರಣ

ಕಳೆದ ಬಾರಿ ಕೊಡಗಿನಲ್ಲಿ ನಡೆದ ಪ್ರಾಕೃತಿಕ ವಿಕೋಪದ ಪರಿಣಾಮ ಕೊಡಗು ಹಾಗು ದಕ್ಷಿಣ ಕನ್ನಡದ ಜನತೆಯನ್ನೇ ಬೆಚ್ಚಿಬೀಳಿಸಿತ್ತು. ಸಾಮಾನ್ಯ ಜನರು ಪ್ರಕೃತಿಯ ವೈಪರಿತ್ಯವನ್ನು ಎದುರಿಸಲು ಪೂರ್ವ ತಯಾರಿ ನಡೆಸಿರಲಿಲ್ಲ. ಆದುದರಿಂದ ಈ ಬಾರಿ ಎಲ್ಲಾ ಕಡೆಯೂ ಇನ್ನೇನು ಮಳೆಗಾಲ ಆರಂಭಗೊಳ್ಳುವುದಕ್ಕೂ ಮೊದಲು ಪ್ರಕೃತಿ ವಿಕೋಪ ರಕ್ಷಣಾ ಸಮಿತಿಯನ್ನು ರಚಿಸಲಾಗುತ್ತಿದೆ.

ಈ ಬಗ್ಗೆ ಮಾತನಾಡಿದ ಕಳಂಜ ಗ್ರಾಪಂ ಅಭಿವೃದ್ಧಿ ಅಧಿಕಾರಿ ಶ್ರೀಧರ್ ಕೆ ಆರ್, ” ಜನರಿಗೆ ತೊಂದರೆಯಾಗದಂತೆ ಮುಂಜಾಗೃತಾ ಕ್ರಮವಾಗಿ ಎಲ್ಲಾ ಕಡೆಯೂ ಇಂತಹ ಸಮಿತಿಯನ್ನು ರಚನೆ ಮಾಡಲಾಗುತ್ತಿದೆ. ಸುಳ್ಯ ತಾಲೂಕಿನ ಗ್ರಾಮ ಪಂಚಾಯತ್ ಮಟ್ಟದಲ್ಲಿ ಪ್ರಥಮವಾಗಿ ನಮ್ಮ ಪಂಚಾಯತ್ ಈ ಸಮಿತಿಯನ್ನು ರಚನೆ ಮಾಡಿಕೊಂಡಿದೆ.” ಎಂದು ಹೇಳುತ್ತಾರೆ.

ಗ್ರಾಮಮಟ್ಟದ ಸಮಿತಿ ಬಗ್ಗೆ ಮಾತನಾಡಿದ ತಹಶೀಲ್ದಾರ್ ಕುಂಞ ಅಹಮ್ಮದ್, “ಯಾವುದೇ ಪ್ರಾಕೃತಿಕ ವಿಕೋಪದಿಂದ ಸಾರ್ವಜನಿಕರು ಬಾಧೆಪಡದಂತೆ ಸಹಾಯ ಮಾಡುವ ಮುಖ್ಯ ಉದ್ದೇಶ ಪ್ರಾಕೃತಿಕ ವಿಕೋಪ ರಕ್ಷಣಾ ಸಮಿತಿಯ ಮೊದಲ ಧ್ಯೇಯವಾಗಿದೆ. ಸಹಕಾರಕ್ಕಾಗಿ ಸಮಿತಿಯು ಸರಕಾರದ ಎಲ್ಲಾ ಇಲಾಖೆಯೊಂದಿಗೆ ಸಂಪರ್ಕದಲ್ಲಿರುತ್ತದೆ.” ಎನ್ನುತ್ತಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

19 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

1 day ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago