ಸುದ್ದಿಗಳು

ಪ್ರಕೃತಿ ವಿಕೋಪ ಹಾನಿ ಅಧ್ಯಯನಕ್ಕೆ ಕೆಪಿಸಿಸಿ ಸಮಿತಿ ಭೇಟಿ : ಸಮಗ್ರ ಪ್ಯಾಕೇಜ್ ಗೆ ರಮಾನಾಥ ರೈ ಆಗ್ರಹ

Share

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಲ್ಲಿ ಉಂಟಾದ ನಷ್ಟಗಳ ಬಗ್ಗೆ ಅಧ್ಯಯನ ನಡೆಸಲು ಕೆ.ಪಿ.ಸಿ.ಸಿ ನೇಮಕ ಮಾಡಿದ ತಂಡ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ಬಾಧಿತ ಪ್ರದೇಶಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಲಾಗುತ್ತಿದೆ‌. ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದ ಸಮಿತಿ ಸೋಮವಾರ ಸುಳ್ಯಕ್ಕೆ ಆಗಮಿಸಿದರು. ತಾಲೂಕಿನ ಕೆಲವೆಡೆ ಆಗಿರುವ ಹಾನಿಯನ್ನು ತಂಡ ವೀಕ್ಷಿಸಿದೆ. ಬಳಿಕ ಸುಳ್ಯ ನಿರೀಕ್ಷಣಾ ಮಂದಿರದಲ್ಲಿ ಪ್ರಮುಖರ ಸಭೆ ನಡೆಸಿ ಮಾಹಿತಿ ಸಂಗ್ರಹಿಸಿದರು.

ದಕ್ಣಿಣ ಕನ್ನಡ ಜಿಲ್ಲೆಯಲ್ಲಿ ಕಂಡು ಕೇಳರಿಯದಷ್ಟು ಭೀಕರವಾದ ಹಾನಿ ಸಂಭವಿಸಿದೆ. ಈ ಕುರಿತು ಅಧ್ಯಯನ ನಡೆಸಿ ವರದಿ ನೀಡುವಂತೆ ಕೆಪಿಸಿಸಿ ನಿರ್ದೇಶನದ ಮೇರೆಗೆ ವಿವಿಧ ಭಾಗಗಳಲ್ಲಿ ಕೂಲಂಕುಷ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲಾಗುವುದು. ಇದರ ಆಧಾರದಲ್ಲಿ ಪರಿಹಾರಕ್ಕೆ ಸರಕಾರವನ್ನು ಒತ್ತಾಯಿಸಲಾಗುವುದು ಎಂದು ರಮಾನಾಥ ರೈ ಹೇಳಿದರು‌.

ಪರಿಹಾರ ಮುಟ್ಟಿಲ್ಲ: ಸರಕಾರ ಘೋಷಣೆ ಮಾಡಿರುವ ತುರ್ತು ಪರಿಹಾರ 10 ಸಾವಿರ ರೂ ತೀರಾ ಕಡಿಮೆಯಾಯಿತು. 50 ಸಾವಿರ ತುರ್ತು ಪರಿಹಾರ ನೀಡಬೇಕು. ಆದರೆ ಜಿಲ್ಲೆಯಲ್ಲಿ ಬಹುತೇಕ ಮಂದಿಗೆ ತುರ್ತು ಪರಿಹಾರ 10 ಸಾವಿರವನ್ನೂ ನೀಡಿಲ್ಲ ಎಂದು ರಮಾನಾಥ ರೈ ಹೇಳಿದರು. ಮನೆ ಸಂಪೂರ್ಣ ಹಾನಿ ಆದವರಿಗೆ 5 ಲಕ್ಷ ನೀಡುವುದಾಗಿ ಮುಖ್ಯಮಂತ್ರಿ ಘೋಷಣೆ ಮಾಡಿರುವುದು ತುಂಬಾ ಕಡಿಮೆಯಾಯಿತು. ಸಂತ್ರಸ್ತರ ಸಹಾಯಕ್ಕಾಗಿ ಕೊಡಗು ಪತಿಹಾರ ಪ್ಯಾಕೇಜ್ ಮಾದರಿಯಲ್ಲಿ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಅವರು ಒತ್ತಾಯಿಸಿದರು. ರಾಜ್ಯದಲ್ಲಿ ಉಂಟಾಗಿರುವ ಪ್ರಾಕೃತಿಕ ವಿಕೋಪದ ಪರಿಹಾರ ಕಾರ್ಯದಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಅವರು ದೂರಿದರು.

ಕೆಪಿಸಿಸಿ ಕಡೆಯಿಂದ ಪರಿಹಾರ:ಕೆಪಿಸಿಸಿ ಕಡೆಯಿಂದಲೂ ಸಂತ್ತಸ್ತರಿಗೆ ಪರಿಹಾರ ನೀಡಲಾಗುವುದು. ಅದೇ ರೀತಿ ದಕ್ಷಿಣ ಕನ್ನಡ ಕಾಂಗ್ರೆಸ್ ವತಿಯಿಂದ  ಅಧ್ಯಕ್ಷ ಕೆ.ಹರೀಶ್ ಕುಮಾರ್ ನೇತೃತ್ವದಲ್ಲಿ ಧನ ಸಂಗ್ರಹ ಕಾರ್ಯ ನಡೆಸಲಾಗುತ್ತಿದ್ದು ಅದನ್ನು ಸಂತ್ರಸ್ತರಿಗೆ ನೀಡಲಾಗುವುದು. ರಾಜೀವ್ ಗಾಂಧಿ ಅವರ 75ನೇ ಜನ್ಮ ದಿನವನ್ನು ಪ್ರವಾಹ ಪೀಡಿತ ಬೆಳ್ತಂಗಡಿಯ ಕಿಲ್ಲೂರು ಮತ್ತು ಚಾರ್ಮಾಡಿಯಲ್ಲಿ ಪ್ರವಾಹ ಪೀಡಿತರ ಜೊತೆಯಲ್ಲಿ  ಆಚರಿಸಲಿದೆ ಎಂದು ಅವರು ಹೇಳಿದರು.

ಮಾಜಿ ಸಚಿವ, ಶಾಸಕ ಯು.ಟಿ.ಖಾದರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್, ಜಿಲ್ಲಾ ಪಂಚಾಯತ್ ಸದಸ್ಯ ಎಂ.ಎಸ್‌.ಮಹಮ್ಮದ್, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ, ಪ್ರಮುಖರಾದ ಎಸ್.ಸಂಶುದ್ದೀನ್, ಧನಂಜಯ ಅಡ್ಪಂಗಾಯ, ಕೃಷ್ಣಪ್ಪ, ದಿವ್ಯಪ್ರಭಾ ಚಿಲ್ತಡ್ಕ, ಗೀತಾ ಕೋಲ್ಚಾರ್, ಕಳಂಜ ವಿಶ್ವನಾಥ ರೈ, ಪಿ.ಸಿ‌.ಜಯರಾಮ, ಪಿ.ಎಸ್.ಗಂಗಾಧರ, ಬೆಟ್ಟ ರಾಜಾರಾಮ ಭಟ್, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್, ಕೆ.ಎಂ.ಮುಸ್ತಫಾ, ಬೆಟ್ಟ ಜಯರಾಂ ಭಟ್, ಧರ್ಮಪಾಲ ಕೊಯಿಂಗಾಜೆ, ಭವಾನಿಶಂಕರ ಕಲ್ಮಡ್ಕ, ಶಾಫಿ ಕುತ್ತಮೊಟ್ಟೆ, ಸುಧೀರ್ ರೈ ಮೇನಾಲ, ಡೇವಿಡ್ ಧೀರಾ ಕ್ರಾಸ್ತಾ, ಸುಜಯಾಕೃಷ್ಣ, ಲಕ್ಷ್ಮಣ ಶೆಣೈ ಮತ್ತಿತರರು ಉಪಸ್ಥಿತರಿದ್ದರು .

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

6 hours ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

6 hours ago

ಹೆಚ್ಚುತ್ತಿರುವ ಸೈಬರ್ ಅಪರಾಧ ಪ್ರಕರಣಗಳು | ಒಂದು ವರ್ಷದಲ್ಲಿ 22 ಸಾವಿರ ಸೈಬರ್ ಪ್ರಕರಣ ದಾಖಲು |

ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…

6 hours ago

ಬೆಳ್ಳಿ ಧರಿಸುವುದು ಎಲ್ಲಾ ರಾಶಿಯವರಿಗೆ ಉತ್ತಮವೇ…? | ಯಾವೆಲ್ಲಾ ರಾಶಿಗಳಿಗಳಿಗೆ ಹಾನಿ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

6 hours ago

ಸಂಬಾರ ಮಂಡಳಿಯ ದರ ಪಟ್ಟಿಯಲ್ಲಿ ಶಿರಸಿಯ ಕಾಳುಮೆಣಸು ನಮೂದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ

ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…

14 hours ago

ಹೆತ್ತವರವನ್ನು ನೋಡಿಕೊಳ್ಳದ ಮಕ್ಕಳ ದಾನಪತ್ರ ರದ್ದುಗೊಳಿಸುವ ಅವಕಾಶ ಕಾನೂನಿನಲ್ಲಿದೆ | ಸಚಿವ ಕೃಷ್ಣಭೈರೇಗೌಡ

ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…

14 hours ago