Advertisement
ಸುದ್ದಿಗಳು

ಪ್ರಕೃತಿ ವಿಕೋಪ ಹಾನಿ ಅಧ್ಯಯನಕ್ಕೆ ಕೆಪಿಸಿಸಿ ಸಮಿತಿ ಭೇಟಿ : ಸಮಗ್ರ ಪ್ಯಾಕೇಜ್ ಗೆ ರಮಾನಾಥ ರೈ ಆಗ್ರಹ

Share

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಲ್ಲಿ ಉಂಟಾದ ನಷ್ಟಗಳ ಬಗ್ಗೆ ಅಧ್ಯಯನ ನಡೆಸಲು ಕೆ.ಪಿ.ಸಿ.ಸಿ ನೇಮಕ ಮಾಡಿದ ತಂಡ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ಬಾಧಿತ ಪ್ರದೇಶಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಲಾಗುತ್ತಿದೆ‌. ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದ ಸಮಿತಿ ಸೋಮವಾರ ಸುಳ್ಯಕ್ಕೆ ಆಗಮಿಸಿದರು. ತಾಲೂಕಿನ ಕೆಲವೆಡೆ ಆಗಿರುವ ಹಾನಿಯನ್ನು ತಂಡ ವೀಕ್ಷಿಸಿದೆ. ಬಳಿಕ ಸುಳ್ಯ ನಿರೀಕ್ಷಣಾ ಮಂದಿರದಲ್ಲಿ ಪ್ರಮುಖರ ಸಭೆ ನಡೆಸಿ ಮಾಹಿತಿ ಸಂಗ್ರಹಿಸಿದರು.

Advertisement
Advertisement
Advertisement
Advertisement

ದಕ್ಣಿಣ ಕನ್ನಡ ಜಿಲ್ಲೆಯಲ್ಲಿ ಕಂಡು ಕೇಳರಿಯದಷ್ಟು ಭೀಕರವಾದ ಹಾನಿ ಸಂಭವಿಸಿದೆ. ಈ ಕುರಿತು ಅಧ್ಯಯನ ನಡೆಸಿ ವರದಿ ನೀಡುವಂತೆ ಕೆಪಿಸಿಸಿ ನಿರ್ದೇಶನದ ಮೇರೆಗೆ ವಿವಿಧ ಭಾಗಗಳಲ್ಲಿ ಕೂಲಂಕುಷ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲಾಗುವುದು. ಇದರ ಆಧಾರದಲ್ಲಿ ಪರಿಹಾರಕ್ಕೆ ಸರಕಾರವನ್ನು ಒತ್ತಾಯಿಸಲಾಗುವುದು ಎಂದು ರಮಾನಾಥ ರೈ ಹೇಳಿದರು‌.

Advertisement

ಪರಿಹಾರ ಮುಟ್ಟಿಲ್ಲ: ಸರಕಾರ ಘೋಷಣೆ ಮಾಡಿರುವ ತುರ್ತು ಪರಿಹಾರ 10 ಸಾವಿರ ರೂ ತೀರಾ ಕಡಿಮೆಯಾಯಿತು. 50 ಸಾವಿರ ತುರ್ತು ಪರಿಹಾರ ನೀಡಬೇಕು. ಆದರೆ ಜಿಲ್ಲೆಯಲ್ಲಿ ಬಹುತೇಕ ಮಂದಿಗೆ ತುರ್ತು ಪರಿಹಾರ 10 ಸಾವಿರವನ್ನೂ ನೀಡಿಲ್ಲ ಎಂದು ರಮಾನಾಥ ರೈ ಹೇಳಿದರು. ಮನೆ ಸಂಪೂರ್ಣ ಹಾನಿ ಆದವರಿಗೆ 5 ಲಕ್ಷ ನೀಡುವುದಾಗಿ ಮುಖ್ಯಮಂತ್ರಿ ಘೋಷಣೆ ಮಾಡಿರುವುದು ತುಂಬಾ ಕಡಿಮೆಯಾಯಿತು. ಸಂತ್ರಸ್ತರ ಸಹಾಯಕ್ಕಾಗಿ ಕೊಡಗು ಪತಿಹಾರ ಪ್ಯಾಕೇಜ್ ಮಾದರಿಯಲ್ಲಿ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಅವರು ಒತ್ತಾಯಿಸಿದರು. ರಾಜ್ಯದಲ್ಲಿ ಉಂಟಾಗಿರುವ ಪ್ರಾಕೃತಿಕ ವಿಕೋಪದ ಪರಿಹಾರ ಕಾರ್ಯದಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಅವರು ದೂರಿದರು.

ಕೆಪಿಸಿಸಿ ಕಡೆಯಿಂದ ಪರಿಹಾರ:ಕೆಪಿಸಿಸಿ ಕಡೆಯಿಂದಲೂ ಸಂತ್ತಸ್ತರಿಗೆ ಪರಿಹಾರ ನೀಡಲಾಗುವುದು. ಅದೇ ರೀತಿ ದಕ್ಷಿಣ ಕನ್ನಡ ಕಾಂಗ್ರೆಸ್ ವತಿಯಿಂದ  ಅಧ್ಯಕ್ಷ ಕೆ.ಹರೀಶ್ ಕುಮಾರ್ ನೇತೃತ್ವದಲ್ಲಿ ಧನ ಸಂಗ್ರಹ ಕಾರ್ಯ ನಡೆಸಲಾಗುತ್ತಿದ್ದು ಅದನ್ನು ಸಂತ್ರಸ್ತರಿಗೆ ನೀಡಲಾಗುವುದು. ರಾಜೀವ್ ಗಾಂಧಿ ಅವರ 75ನೇ ಜನ್ಮ ದಿನವನ್ನು ಪ್ರವಾಹ ಪೀಡಿತ ಬೆಳ್ತಂಗಡಿಯ ಕಿಲ್ಲೂರು ಮತ್ತು ಚಾರ್ಮಾಡಿಯಲ್ಲಿ ಪ್ರವಾಹ ಪೀಡಿತರ ಜೊತೆಯಲ್ಲಿ  ಆಚರಿಸಲಿದೆ ಎಂದು ಅವರು ಹೇಳಿದರು.

Advertisement

ಮಾಜಿ ಸಚಿವ, ಶಾಸಕ ಯು.ಟಿ.ಖಾದರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್, ಜಿಲ್ಲಾ ಪಂಚಾಯತ್ ಸದಸ್ಯ ಎಂ.ಎಸ್‌.ಮಹಮ್ಮದ್, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ, ಪ್ರಮುಖರಾದ ಎಸ್.ಸಂಶುದ್ದೀನ್, ಧನಂಜಯ ಅಡ್ಪಂಗಾಯ, ಕೃಷ್ಣಪ್ಪ, ದಿವ್ಯಪ್ರಭಾ ಚಿಲ್ತಡ್ಕ, ಗೀತಾ ಕೋಲ್ಚಾರ್, ಕಳಂಜ ವಿಶ್ವನಾಥ ರೈ, ಪಿ.ಸಿ‌.ಜಯರಾಮ, ಪಿ.ಎಸ್.ಗಂಗಾಧರ, ಬೆಟ್ಟ ರಾಜಾರಾಮ ಭಟ್, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್, ಕೆ.ಎಂ.ಮುಸ್ತಫಾ, ಬೆಟ್ಟ ಜಯರಾಂ ಭಟ್, ಧರ್ಮಪಾಲ ಕೊಯಿಂಗಾಜೆ, ಭವಾನಿಶಂಕರ ಕಲ್ಮಡ್ಕ, ಶಾಫಿ ಕುತ್ತಮೊಟ್ಟೆ, ಸುಧೀರ್ ರೈ ಮೇನಾಲ, ಡೇವಿಡ್ ಧೀರಾ ಕ್ರಾಸ್ತಾ, ಸುಜಯಾಕೃಷ್ಣ, ಲಕ್ಷ್ಮಣ ಶೆಣೈ ಮತ್ತಿತರರು ಉಪಸ್ಥಿತರಿದ್ದರು .

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯ ಹಳದಿ ಎಲೆ ರೋಗದ ಖಾಯಂ ನಿವಾರಣೆಗಾಗಿ ಯೋಜನೆ ಅನುಷ್ಟಾನಗೊಳ್ಳುತ್ತದೆ ಎಂಬ ಭರವಸೆ ಇರಲಿ

ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…

6 hours ago

ಅಡಿಕೆ ಆಮದು ಮೇಲೆ ನಿಗಾ ವಹಿಸಲು ಸಚಿವರಿಗೆ ಮನವಿ ಮಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…

6 hours ago

ಕೇಂದ್ರ ಬಜೆಟ್‌ | ರೈತರಿಗೆ ಕಿಸಾನ್ ಕಾರ್ಡ್ ನಿಂದ ಪ್ರಯೋಜನ | ಕೃಷಿ ವಲಯಕ್ಕೆ 137757 ಕೋಟಿ ಅನುದಾನ |

ಕೇಂದ್ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…

22 hours ago

ಆನೆಗಳ ಚಲನ ವಲನಗಳ ಬಗ್ಗೆ ಸ್ವದೇಶಿ ನಿರ್ಮಿತ ರೇಡಿಯೊ ಕಾಲರ್ ಅಳವಡಿಕೆ | ಅರಣ್ಯ ಸಚಿವ ಈಶ್ವರ್ ಖಂಡ್ರೆ

ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…

22 hours ago

ಹೊಸರುಚಿ | ಪಪ್ಪಾಯ ಹಣ್ಣು ಬರ್ಫಿ

ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…

1 day ago

ಸೀತೆ ಪುನೀತೆಯೆ ? ಮತ್ತೊಮ್ಮೆ ಅಗ್ನಿ ಪರೀಕ್ಷೆಯೇ?

ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…

1 day ago