Advertisement
ಸುದ್ದಿಗಳು

ಪ್ರಕೃತಿ ವಿಕೋಪ ಹಾನಿ ಅಧ್ಯಯನಕ್ಕೆ ಕೆಪಿಸಿಸಿ ಸಮಿತಿ ಭೇಟಿ : ಸಮಗ್ರ ಪ್ಯಾಕೇಜ್ ಗೆ ರಮಾನಾಥ ರೈ ಆಗ್ರಹ

Share

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಲ್ಲಿ ಉಂಟಾದ ನಷ್ಟಗಳ ಬಗ್ಗೆ ಅಧ್ಯಯನ ನಡೆಸಲು ಕೆ.ಪಿ.ಸಿ.ಸಿ ನೇಮಕ ಮಾಡಿದ ತಂಡ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ಬಾಧಿತ ಪ್ರದೇಶಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಲಾಗುತ್ತಿದೆ‌. ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದ ಸಮಿತಿ ಸೋಮವಾರ ಸುಳ್ಯಕ್ಕೆ ಆಗಮಿಸಿದರು. ತಾಲೂಕಿನ ಕೆಲವೆಡೆ ಆಗಿರುವ ಹಾನಿಯನ್ನು ತಂಡ ವೀಕ್ಷಿಸಿದೆ. ಬಳಿಕ ಸುಳ್ಯ ನಿರೀಕ್ಷಣಾ ಮಂದಿರದಲ್ಲಿ ಪ್ರಮುಖರ ಸಭೆ ನಡೆಸಿ ಮಾಹಿತಿ ಸಂಗ್ರಹಿಸಿದರು.

Advertisement
Advertisement

ದಕ್ಣಿಣ ಕನ್ನಡ ಜಿಲ್ಲೆಯಲ್ಲಿ ಕಂಡು ಕೇಳರಿಯದಷ್ಟು ಭೀಕರವಾದ ಹಾನಿ ಸಂಭವಿಸಿದೆ. ಈ ಕುರಿತು ಅಧ್ಯಯನ ನಡೆಸಿ ವರದಿ ನೀಡುವಂತೆ ಕೆಪಿಸಿಸಿ ನಿರ್ದೇಶನದ ಮೇರೆಗೆ ವಿವಿಧ ಭಾಗಗಳಲ್ಲಿ ಕೂಲಂಕುಷ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲಾಗುವುದು. ಇದರ ಆಧಾರದಲ್ಲಿ ಪರಿಹಾರಕ್ಕೆ ಸರಕಾರವನ್ನು ಒತ್ತಾಯಿಸಲಾಗುವುದು ಎಂದು ರಮಾನಾಥ ರೈ ಹೇಳಿದರು‌.

ಪರಿಹಾರ ಮುಟ್ಟಿಲ್ಲ: ಸರಕಾರ ಘೋಷಣೆ ಮಾಡಿರುವ ತುರ್ತು ಪರಿಹಾರ 10 ಸಾವಿರ ರೂ ತೀರಾ ಕಡಿಮೆಯಾಯಿತು. 50 ಸಾವಿರ ತುರ್ತು ಪರಿಹಾರ ನೀಡಬೇಕು. ಆದರೆ ಜಿಲ್ಲೆಯಲ್ಲಿ ಬಹುತೇಕ ಮಂದಿಗೆ ತುರ್ತು ಪರಿಹಾರ 10 ಸಾವಿರವನ್ನೂ ನೀಡಿಲ್ಲ ಎಂದು ರಮಾನಾಥ ರೈ ಹೇಳಿದರು. ಮನೆ ಸಂಪೂರ್ಣ ಹಾನಿ ಆದವರಿಗೆ 5 ಲಕ್ಷ ನೀಡುವುದಾಗಿ ಮುಖ್ಯಮಂತ್ರಿ ಘೋಷಣೆ ಮಾಡಿರುವುದು ತುಂಬಾ ಕಡಿಮೆಯಾಯಿತು. ಸಂತ್ರಸ್ತರ ಸಹಾಯಕ್ಕಾಗಿ ಕೊಡಗು ಪತಿಹಾರ ಪ್ಯಾಕೇಜ್ ಮಾದರಿಯಲ್ಲಿ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಅವರು ಒತ್ತಾಯಿಸಿದರು. ರಾಜ್ಯದಲ್ಲಿ ಉಂಟಾಗಿರುವ ಪ್ರಾಕೃತಿಕ ವಿಕೋಪದ ಪರಿಹಾರ ಕಾರ್ಯದಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಅವರು ದೂರಿದರು.

ಕೆಪಿಸಿಸಿ ಕಡೆಯಿಂದ ಪರಿಹಾರ:ಕೆಪಿಸಿಸಿ ಕಡೆಯಿಂದಲೂ ಸಂತ್ತಸ್ತರಿಗೆ ಪರಿಹಾರ ನೀಡಲಾಗುವುದು. ಅದೇ ರೀತಿ ದಕ್ಷಿಣ ಕನ್ನಡ ಕಾಂಗ್ರೆಸ್ ವತಿಯಿಂದ  ಅಧ್ಯಕ್ಷ ಕೆ.ಹರೀಶ್ ಕುಮಾರ್ ನೇತೃತ್ವದಲ್ಲಿ ಧನ ಸಂಗ್ರಹ ಕಾರ್ಯ ನಡೆಸಲಾಗುತ್ತಿದ್ದು ಅದನ್ನು ಸಂತ್ರಸ್ತರಿಗೆ ನೀಡಲಾಗುವುದು. ರಾಜೀವ್ ಗಾಂಧಿ ಅವರ 75ನೇ ಜನ್ಮ ದಿನವನ್ನು ಪ್ರವಾಹ ಪೀಡಿತ ಬೆಳ್ತಂಗಡಿಯ ಕಿಲ್ಲೂರು ಮತ್ತು ಚಾರ್ಮಾಡಿಯಲ್ಲಿ ಪ್ರವಾಹ ಪೀಡಿತರ ಜೊತೆಯಲ್ಲಿ  ಆಚರಿಸಲಿದೆ ಎಂದು ಅವರು ಹೇಳಿದರು.

ಮಾಜಿ ಸಚಿವ, ಶಾಸಕ ಯು.ಟಿ.ಖಾದರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್, ಜಿಲ್ಲಾ ಪಂಚಾಯತ್ ಸದಸ್ಯ ಎಂ.ಎಸ್‌.ಮಹಮ್ಮದ್, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ, ಪ್ರಮುಖರಾದ ಎಸ್.ಸಂಶುದ್ದೀನ್, ಧನಂಜಯ ಅಡ್ಪಂಗಾಯ, ಕೃಷ್ಣಪ್ಪ, ದಿವ್ಯಪ್ರಭಾ ಚಿಲ್ತಡ್ಕ, ಗೀತಾ ಕೋಲ್ಚಾರ್, ಕಳಂಜ ವಿಶ್ವನಾಥ ರೈ, ಪಿ.ಸಿ‌.ಜಯರಾಮ, ಪಿ.ಎಸ್.ಗಂಗಾಧರ, ಬೆಟ್ಟ ರಾಜಾರಾಮ ಭಟ್, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್, ಕೆ.ಎಂ.ಮುಸ್ತಫಾ, ಬೆಟ್ಟ ಜಯರಾಂ ಭಟ್, ಧರ್ಮಪಾಲ ಕೊಯಿಂಗಾಜೆ, ಭವಾನಿಶಂಕರ ಕಲ್ಮಡ್ಕ, ಶಾಫಿ ಕುತ್ತಮೊಟ್ಟೆ, ಸುಧೀರ್ ರೈ ಮೇನಾಲ, ಡೇವಿಡ್ ಧೀರಾ ಕ್ರಾಸ್ತಾ, ಸುಜಯಾಕೃಷ್ಣ, ಲಕ್ಷ್ಮಣ ಶೆಣೈ ಮತ್ತಿತರರು ಉಪಸ್ಥಿತರಿದ್ದರು .

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

16 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

17 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

2 days ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

3 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

3 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

3 days ago