Advertisement
ಸುದ್ದಿಗಳು

ಪ್ರಕೃತಿ ವಿಕೋಪ ಹಾನಿ ಅಧ್ಯಯನಕ್ಕೆ ಕೆಪಿಸಿಸಿ ಸಮಿತಿ ಭೇಟಿ : ಸಮಗ್ರ ಪ್ಯಾಕೇಜ್ ಗೆ ರಮಾನಾಥ ರೈ ಆಗ್ರಹ

Share

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಲ್ಲಿ ಉಂಟಾದ ನಷ್ಟಗಳ ಬಗ್ಗೆ ಅಧ್ಯಯನ ನಡೆಸಲು ಕೆ.ಪಿ.ಸಿ.ಸಿ ನೇಮಕ ಮಾಡಿದ ತಂಡ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ಬಾಧಿತ ಪ್ರದೇಶಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಲಾಗುತ್ತಿದೆ‌. ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದ ಸಮಿತಿ ಸೋಮವಾರ ಸುಳ್ಯಕ್ಕೆ ಆಗಮಿಸಿದರು. ತಾಲೂಕಿನ ಕೆಲವೆಡೆ ಆಗಿರುವ ಹಾನಿಯನ್ನು ತಂಡ ವೀಕ್ಷಿಸಿದೆ. ಬಳಿಕ ಸುಳ್ಯ ನಿರೀಕ್ಷಣಾ ಮಂದಿರದಲ್ಲಿ ಪ್ರಮುಖರ ಸಭೆ ನಡೆಸಿ ಮಾಹಿತಿ ಸಂಗ್ರಹಿಸಿದರು.

ದಕ್ಣಿಣ ಕನ್ನಡ ಜಿಲ್ಲೆಯಲ್ಲಿ ಕಂಡು ಕೇಳರಿಯದಷ್ಟು ಭೀಕರವಾದ ಹಾನಿ ಸಂಭವಿಸಿದೆ. ಈ ಕುರಿತು ಅಧ್ಯಯನ ನಡೆಸಿ ವರದಿ ನೀಡುವಂತೆ ಕೆಪಿಸಿಸಿ ನಿರ್ದೇಶನದ ಮೇರೆಗೆ ವಿವಿಧ ಭಾಗಗಳಲ್ಲಿ ಕೂಲಂಕುಷ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲಾಗುವುದು. ಇದರ ಆಧಾರದಲ್ಲಿ ಪರಿಹಾರಕ್ಕೆ ಸರಕಾರವನ್ನು ಒತ್ತಾಯಿಸಲಾಗುವುದು ಎಂದು ರಮಾನಾಥ ರೈ ಹೇಳಿದರು‌.

ಪರಿಹಾರ ಮುಟ್ಟಿಲ್ಲ: ಸರಕಾರ ಘೋಷಣೆ ಮಾಡಿರುವ ತುರ್ತು ಪರಿಹಾರ 10 ಸಾವಿರ ರೂ ತೀರಾ ಕಡಿಮೆಯಾಯಿತು. 50 ಸಾವಿರ ತುರ್ತು ಪರಿಹಾರ ನೀಡಬೇಕು. ಆದರೆ ಜಿಲ್ಲೆಯಲ್ಲಿ ಬಹುತೇಕ ಮಂದಿಗೆ ತುರ್ತು ಪರಿಹಾರ 10 ಸಾವಿರವನ್ನೂ ನೀಡಿಲ್ಲ ಎಂದು ರಮಾನಾಥ ರೈ ಹೇಳಿದರು. ಮನೆ ಸಂಪೂರ್ಣ ಹಾನಿ ಆದವರಿಗೆ 5 ಲಕ್ಷ ನೀಡುವುದಾಗಿ ಮುಖ್ಯಮಂತ್ರಿ ಘೋಷಣೆ ಮಾಡಿರುವುದು ತುಂಬಾ ಕಡಿಮೆಯಾಯಿತು. ಸಂತ್ರಸ್ತರ ಸಹಾಯಕ್ಕಾಗಿ ಕೊಡಗು ಪತಿಹಾರ ಪ್ಯಾಕೇಜ್ ಮಾದರಿಯಲ್ಲಿ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಅವರು ಒತ್ತಾಯಿಸಿದರು. ರಾಜ್ಯದಲ್ಲಿ ಉಂಟಾಗಿರುವ ಪ್ರಾಕೃತಿಕ ವಿಕೋಪದ ಪರಿಹಾರ ಕಾರ್ಯದಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಅವರು ದೂರಿದರು.

ಕೆಪಿಸಿಸಿ ಕಡೆಯಿಂದ ಪರಿಹಾರ:ಕೆಪಿಸಿಸಿ ಕಡೆಯಿಂದಲೂ ಸಂತ್ತಸ್ತರಿಗೆ ಪರಿಹಾರ ನೀಡಲಾಗುವುದು. ಅದೇ ರೀತಿ ದಕ್ಷಿಣ ಕನ್ನಡ ಕಾಂಗ್ರೆಸ್ ವತಿಯಿಂದ  ಅಧ್ಯಕ್ಷ ಕೆ.ಹರೀಶ್ ಕುಮಾರ್ ನೇತೃತ್ವದಲ್ಲಿ ಧನ ಸಂಗ್ರಹ ಕಾರ್ಯ ನಡೆಸಲಾಗುತ್ತಿದ್ದು ಅದನ್ನು ಸಂತ್ರಸ್ತರಿಗೆ ನೀಡಲಾಗುವುದು. ರಾಜೀವ್ ಗಾಂಧಿ ಅವರ 75ನೇ ಜನ್ಮ ದಿನವನ್ನು ಪ್ರವಾಹ ಪೀಡಿತ ಬೆಳ್ತಂಗಡಿಯ ಕಿಲ್ಲೂರು ಮತ್ತು ಚಾರ್ಮಾಡಿಯಲ್ಲಿ ಪ್ರವಾಹ ಪೀಡಿತರ ಜೊತೆಯಲ್ಲಿ  ಆಚರಿಸಲಿದೆ ಎಂದು ಅವರು ಹೇಳಿದರು.

ಮಾಜಿ ಸಚಿವ, ಶಾಸಕ ಯು.ಟಿ.ಖಾದರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್, ಜಿಲ್ಲಾ ಪಂಚಾಯತ್ ಸದಸ್ಯ ಎಂ.ಎಸ್‌.ಮಹಮ್ಮದ್, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡ, ಪ್ರಮುಖರಾದ ಎಸ್.ಸಂಶುದ್ದೀನ್, ಧನಂಜಯ ಅಡ್ಪಂಗಾಯ, ಕೃಷ್ಣಪ್ಪ, ದಿವ್ಯಪ್ರಭಾ ಚಿಲ್ತಡ್ಕ, ಗೀತಾ ಕೋಲ್ಚಾರ್, ಕಳಂಜ ವಿಶ್ವನಾಥ ರೈ, ಪಿ.ಸಿ‌.ಜಯರಾಮ, ಪಿ.ಎಸ್.ಗಂಗಾಧರ, ಬೆಟ್ಟ ರಾಜಾರಾಮ ಭಟ್, ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದಿಕ್, ಕೆ.ಎಂ.ಮುಸ್ತಫಾ, ಬೆಟ್ಟ ಜಯರಾಂ ಭಟ್, ಧರ್ಮಪಾಲ ಕೊಯಿಂಗಾಜೆ, ಭವಾನಿಶಂಕರ ಕಲ್ಮಡ್ಕ, ಶಾಫಿ ಕುತ್ತಮೊಟ್ಟೆ, ಸುಧೀರ್ ರೈ ಮೇನಾಲ, ಡೇವಿಡ್ ಧೀರಾ ಕ್ರಾಸ್ತಾ, ಸುಜಯಾಕೃಷ್ಣ, ಲಕ್ಷ್ಮಣ ಶೆಣೈ ಮತ್ತಿತರರು ಉಪಸ್ಥಿತರಿದ್ದರು .

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ

ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…

2 hours ago

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

11 hours ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

11 hours ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

1 day ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

1 day ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

2 days ago