ಪುತ್ತೂರು: ಆರ್ಯಾಪು ಗ್ರಾಮದ ಸಂಟ್ಯಾರ್ ಬಳಿಯ ನಿವಾಸಿ ಪ್ರಗತಿಪರ ಕೃಷಿಕ, ಸಾಮಾಜಿಕ ಮುಂದಾಳು ಮರಿಕೆ ಎ.ಪಿ ರಮಾನಾಥ ರಾವ್ (82) ಗುರುವಾರ ಸಂಜೆ ಸ್ವಗೃಹದಲ್ಲಿ ನಿಧನರಾದರು.
ಸಂಟ್ಯಾರ್ ಬಳಿ ಕೃಷಿ, ಹೈನುಗಾರಿಕೆ ಯಲ್ಲಿ ವಿಶೇಷ ಸಾಧನೆಗೈದ ಇವರು ಪುತ್ತೂರು ಏಳ್ಮುಡಿಯ ಹಾಲು ಉತ್ಪಾದಕರ ಸಂಘದ ಸ್ಥಾಪನೆಗೆ ಕಾರಣಕರ್ತರಾಗಿದ್ದರು. ಶತಮಾನ ಕಂಡ ದ.ಕ ಜಿ.ಪಂ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕಳೆದ ಶತಮಾನೋತ್ಸವದಲ್ಲೂ ಸಕ್ರಿಯವಾಗಿ ಪಾಲ್ಗೊಂಡ ಇವರು, ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾಗಿ, ಸಂಟ್ಯಾರ್ ಸಾರ್ವಜನಿಕ ಗಣೇಶೋತ್ಸವದಲ್ಲಿ ಗೌರವಾಧ್ಯಕ್ಷರಾಗಿ, ಸಾರ್ವಜನಿಕ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷರಾಗಿ, ಹಂಟ್ಯಾರ್ ಶಾಲಾ ಹಳೆವಿದ್ಯಾರ್ಥಿ ಸಂಘದ ಪ್ರಮುಖರಾಗಿ ಗುರುತಿಸಿಕೊಂಡಿದ್ದರು. ಕಾರ್ಪಾಡಿ ದೇವಳದ ಜಾತ್ರೆಯ ಸಾರ್ವಜನಿಕ ಅನ್ನಸಂತರ್ಪಣೆಯ ಸೇವಾಕರ್ತರಾಗಿ, ಹಂಟ್ಯಾರ್ ಶಾಲಾ ಅಭಿವೃದ್ಧಿ ಸಮಿತಿಯ ದಾನಿಗಳಾಗಿ ಗುರುತಿಸಿಕೊಂಡಿದ್ದರು.
ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಮೃತರ ಅಂತ್ಯ ಸಂಸ್ಕಾರ ನಡೆಯಲಿದೆ .
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…