ಪುತ್ತೂರು: ಆರ್ಯಾಪು ಗ್ರಾಮದ ಸಂಟ್ಯಾರ್ ಬಳಿಯ ನಿವಾಸಿ ಪ್ರಗತಿಪರ ಕೃಷಿಕ, ಸಾಮಾಜಿಕ ಮುಂದಾಳು ಮರಿಕೆ ಎ.ಪಿ ರಮಾನಾಥ ರಾವ್ (82) ಗುರುವಾರ ಸಂಜೆ ಸ್ವಗೃಹದಲ್ಲಿ ನಿಧನರಾದರು.
ಸಂಟ್ಯಾರ್ ಬಳಿ ಕೃಷಿ, ಹೈನುಗಾರಿಕೆ ಯಲ್ಲಿ ವಿಶೇಷ ಸಾಧನೆಗೈದ ಇವರು ಪುತ್ತೂರು ಏಳ್ಮುಡಿಯ ಹಾಲು ಉತ್ಪಾದಕರ ಸಂಘದ ಸ್ಥಾಪನೆಗೆ ಕಾರಣಕರ್ತರಾಗಿದ್ದರು. ಶತಮಾನ ಕಂಡ ದ.ಕ ಜಿ.ಪಂ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕಳೆದ ಶತಮಾನೋತ್ಸವದಲ್ಲೂ ಸಕ್ರಿಯವಾಗಿ ಪಾಲ್ಗೊಂಡ ಇವರು, ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾಗಿ, ಸಂಟ್ಯಾರ್ ಸಾರ್ವಜನಿಕ ಗಣೇಶೋತ್ಸವದಲ್ಲಿ ಗೌರವಾಧ್ಯಕ್ಷರಾಗಿ, ಸಾರ್ವಜನಿಕ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷರಾಗಿ, ಹಂಟ್ಯಾರ್ ಶಾಲಾ ಹಳೆವಿದ್ಯಾರ್ಥಿ ಸಂಘದ ಪ್ರಮುಖರಾಗಿ ಗುರುತಿಸಿಕೊಂಡಿದ್ದರು. ಕಾರ್ಪಾಡಿ ದೇವಳದ ಜಾತ್ರೆಯ ಸಾರ್ವಜನಿಕ ಅನ್ನಸಂತರ್ಪಣೆಯ ಸೇವಾಕರ್ತರಾಗಿ, ಹಂಟ್ಯಾರ್ ಶಾಲಾ ಅಭಿವೃದ್ಧಿ ಸಮಿತಿಯ ದಾನಿಗಳಾಗಿ ಗುರುತಿಸಿಕೊಂಡಿದ್ದರು.
ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಮೃತರ ಅಂತ್ಯ ಸಂಸ್ಕಾರ ನಡೆಯಲಿದೆ .
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…