ಪುತ್ತೂರು: ಆರ್ಯಾಪು ಗ್ರಾಮದ ಸಂಟ್ಯಾರ್ ಬಳಿಯ ನಿವಾಸಿ ಪ್ರಗತಿಪರ ಕೃಷಿಕ, ಸಾಮಾಜಿಕ ಮುಂದಾಳು ಮರಿಕೆ ಎ.ಪಿ ರಮಾನಾಥ ರಾವ್ (82) ಗುರುವಾರ ಸಂಜೆ ಸ್ವಗೃಹದಲ್ಲಿ ನಿಧನರಾದರು.
ಸಂಟ್ಯಾರ್ ಬಳಿ ಕೃಷಿ, ಹೈನುಗಾರಿಕೆ ಯಲ್ಲಿ ವಿಶೇಷ ಸಾಧನೆಗೈದ ಇವರು ಪುತ್ತೂರು ಏಳ್ಮುಡಿಯ ಹಾಲು ಉತ್ಪಾದಕರ ಸಂಘದ ಸ್ಥಾಪನೆಗೆ ಕಾರಣಕರ್ತರಾಗಿದ್ದರು. ಶತಮಾನ ಕಂಡ ದ.ಕ ಜಿ.ಪಂ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕಳೆದ ಶತಮಾನೋತ್ಸವದಲ್ಲೂ ಸಕ್ರಿಯವಾಗಿ ಪಾಲ್ಗೊಂಡ ಇವರು, ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾಗಿ, ಸಂಟ್ಯಾರ್ ಸಾರ್ವಜನಿಕ ಗಣೇಶೋತ್ಸವದಲ್ಲಿ ಗೌರವಾಧ್ಯಕ್ಷರಾಗಿ, ಸಾರ್ವಜನಿಕ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷರಾಗಿ, ಹಂಟ್ಯಾರ್ ಶಾಲಾ ಹಳೆವಿದ್ಯಾರ್ಥಿ ಸಂಘದ ಪ್ರಮುಖರಾಗಿ ಗುರುತಿಸಿಕೊಂಡಿದ್ದರು. ಕಾರ್ಪಾಡಿ ದೇವಳದ ಜಾತ್ರೆಯ ಸಾರ್ವಜನಿಕ ಅನ್ನಸಂತರ್ಪಣೆಯ ಸೇವಾಕರ್ತರಾಗಿ, ಹಂಟ್ಯಾರ್ ಶಾಲಾ ಅಭಿವೃದ್ಧಿ ಸಮಿತಿಯ ದಾನಿಗಳಾಗಿ ಗುರುತಿಸಿಕೊಂಡಿದ್ದರು.
ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಮೃತರ ಅಂತ್ಯ ಸಂಸ್ಕಾರ ನಡೆಯಲಿದೆ .
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…