ಪುತ್ತೂರು: ಆರ್ಯಾಪು ಗ್ರಾಮದ ಸಂಟ್ಯಾರ್ ಬಳಿಯ ನಿವಾಸಿ ಪ್ರಗತಿಪರ ಕೃಷಿಕ, ಸಾಮಾಜಿಕ ಮುಂದಾಳು ಮರಿಕೆ ಎ.ಪಿ ರಮಾನಾಥ ರಾವ್ (82) ಗುರುವಾರ ಸಂಜೆ ಸ್ವಗೃಹದಲ್ಲಿ ನಿಧನರಾದರು.
ಸಂಟ್ಯಾರ್ ಬಳಿ ಕೃಷಿ, ಹೈನುಗಾರಿಕೆ ಯಲ್ಲಿ ವಿಶೇಷ ಸಾಧನೆಗೈದ ಇವರು ಪುತ್ತೂರು ಏಳ್ಮುಡಿಯ ಹಾಲು ಉತ್ಪಾದಕರ ಸಂಘದ ಸ್ಥಾಪನೆಗೆ ಕಾರಣಕರ್ತರಾಗಿದ್ದರು. ಶತಮಾನ ಕಂಡ ದ.ಕ ಜಿ.ಪಂ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕಳೆದ ಶತಮಾನೋತ್ಸವದಲ್ಲೂ ಸಕ್ರಿಯವಾಗಿ ಪಾಲ್ಗೊಂಡ ಇವರು, ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾಗಿ, ಸಂಟ್ಯಾರ್ ಸಾರ್ವಜನಿಕ ಗಣೇಶೋತ್ಸವದಲ್ಲಿ ಗೌರವಾಧ್ಯಕ್ಷರಾಗಿ, ಸಾರ್ವಜನಿಕ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷರಾಗಿ, ಹಂಟ್ಯಾರ್ ಶಾಲಾ ಹಳೆವಿದ್ಯಾರ್ಥಿ ಸಂಘದ ಪ್ರಮುಖರಾಗಿ ಗುರುತಿಸಿಕೊಂಡಿದ್ದರು. ಕಾರ್ಪಾಡಿ ದೇವಳದ ಜಾತ್ರೆಯ ಸಾರ್ವಜನಿಕ ಅನ್ನಸಂತರ್ಪಣೆಯ ಸೇವಾಕರ್ತರಾಗಿ, ಹಂಟ್ಯಾರ್ ಶಾಲಾ ಅಭಿವೃದ್ಧಿ ಸಮಿತಿಯ ದಾನಿಗಳಾಗಿ ಗುರುತಿಸಿಕೊಂಡಿದ್ದರು.
ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಮೃತರ ಅಂತ್ಯ ಸಂಸ್ಕಾರ ನಡೆಯಲಿದೆ .
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…