ಪುತ್ತೂರು: ಆರ್ಯಾಪು ಗ್ರಾಮದ ಸಂಟ್ಯಾರ್ ಬಳಿಯ ನಿವಾಸಿ ಪ್ರಗತಿಪರ ಕೃಷಿಕ, ಸಾಮಾಜಿಕ ಮುಂದಾಳು ಮರಿಕೆ ಎ.ಪಿ ರಮಾನಾಥ ರಾವ್ (82) ಗುರುವಾರ ಸಂಜೆ ಸ್ವಗೃಹದಲ್ಲಿ ನಿಧನರಾದರು.
ಸಂಟ್ಯಾರ್ ಬಳಿ ಕೃಷಿ, ಹೈನುಗಾರಿಕೆ ಯಲ್ಲಿ ವಿಶೇಷ ಸಾಧನೆಗೈದ ಇವರು ಪುತ್ತೂರು ಏಳ್ಮುಡಿಯ ಹಾಲು ಉತ್ಪಾದಕರ ಸಂಘದ ಸ್ಥಾಪನೆಗೆ ಕಾರಣಕರ್ತರಾಗಿದ್ದರು. ಶತಮಾನ ಕಂಡ ದ.ಕ ಜಿ.ಪಂ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕಳೆದ ಶತಮಾನೋತ್ಸವದಲ್ಲೂ ಸಕ್ರಿಯವಾಗಿ ಪಾಲ್ಗೊಂಡ ಇವರು, ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾಗಿ, ಸಂಟ್ಯಾರ್ ಸಾರ್ವಜನಿಕ ಗಣೇಶೋತ್ಸವದಲ್ಲಿ ಗೌರವಾಧ್ಯಕ್ಷರಾಗಿ, ಸಾರ್ವಜನಿಕ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷರಾಗಿ, ಹಂಟ್ಯಾರ್ ಶಾಲಾ ಹಳೆವಿದ್ಯಾರ್ಥಿ ಸಂಘದ ಪ್ರಮುಖರಾಗಿ ಗುರುತಿಸಿಕೊಂಡಿದ್ದರು. ಕಾರ್ಪಾಡಿ ದೇವಳದ ಜಾತ್ರೆಯ ಸಾರ್ವಜನಿಕ ಅನ್ನಸಂತರ್ಪಣೆಯ ಸೇವಾಕರ್ತರಾಗಿ, ಹಂಟ್ಯಾರ್ ಶಾಲಾ ಅಭಿವೃದ್ಧಿ ಸಮಿತಿಯ ದಾನಿಗಳಾಗಿ ಗುರುತಿಸಿಕೊಂಡಿದ್ದರು.
ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಮೃತರ ಅಂತ್ಯ ಸಂಸ್ಕಾರ ನಡೆಯಲಿದೆ .
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…