Advertisement
ಸುದ್ದಿಗಳು

ಪ್ರತಿಭಟನಾ ಸಭೆಯಲ್ಲಿ ಸೈನಿಕರಿಗೆ ಅವಮಾನ ಎಂಬ ಸುದ್ದಿ ಸತ್ಯಕ್ಕೆ ದೂರವಾದದ್ದು – ಎಸ್ ಡಿ ಪಿ ಐ

Share

ಪುತ್ತೂರು: ಕೇಂದ್ರ ಸರಕಾರದ ಜನವಿರೋಧಿ ಮತ್ತು ರಾಜ್ಯ ಸರಕಾರದ ನಿಷ್ಕ್ರಿಯತೆಯ ಬಗ್ಗೆ ಎಸ್ ಡಿ ಪಿ ಐ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಪುತ್ತೂರಿನಲ್ಲಿ ಪ್ರತಿಭಟನಾ ಸಭೆ ನಡೆಸಲಾಗಿದ್ದು ಈ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುವಾಗ ಸೈನಿಕರನ್ನು ಅವಮಾನಿಸಲಾಗಿದೆ ಎಂದು ಸತ್ಯಕ್ಕೆ ದೂರವಾದದ್ದು ಎಂದು ಎಸ್ ಡಿ ಪಿ ಐ ಸ್ಪಷ್ಟನೆ ನೀಡಿದೆ.

ಕೇಂದ್ರ ಸರಕಾರ ಕಾಶ್ಮೀರದ ವಿಶೇಷ  ಸ್ಥಾನಮಾನವನ್ನು ಕಸಿದುಕೊಂಡ ನಂತರ ಕಾಶ್ಮೀರದಲ್ಲಿ ಉಂಟಾದ ಭಯದ ವಾತಾವರಣವನ್ನು ಮತ್ತು ದೇಶದ ಪ್ರಸಕ್ತ ಸನ್ನಿವೇಶವನ್ನು ವಿವರಿಸಲಾಗಿದೆಯೇ ಹೊರತು ಸೈನಿಕರಿಗೆ ಅವಮಾನ ಮಾಡುವಂತಹ ಯಾವುದೇ ವಿಚಾರಗಳನ್ನು ಉಲ್ಲೇಖಿಸಲಾಗಿಲ್ಲ. ಅದಲ್ಲದೇ ಪ್ರತಿಭಟನೆಯ ಮರುದಿನದ ಬಹುತೇಕ ಮಾಧ್ಯಮ ಗಳಲ್ಲಿಯು ಸ್ಪಷ್ಟವಾದ ವರದಿಗಳೇ ಪ್ರಕಟವಾಗಿದೆ. ಎಸ್ ಡಿ ಪಿ ಐ ಯಾವತ್ತೂ ಕೂಡ ಸಂಘಪರಿವಾರದ ರೀತಿಯಲ್ಲಿ ಸೈನಿಕರನ್ನು ಎಳೆದು ತಂದು ಆ ಮೂಲಕ ರಾಜಕೀಯ ಮಾಡುವ ಪಕ್ಷವಲ್ಲ. ನಮ್ಮ ವಿರುದ್ಧ ಸುಳ್ಳು ದೂರು ದಾಖಲಿಸಿಕೊಂಡು ಜನವಿರೋಧಿ ನೀತಿಯ ಬಗ್ಗೆ ಮಾತನಾಡುವ ಧ್ವನಿಯನ್ನು ಅಡಗಿಸಲು ಖಂಡಿತವಾಗಿಯು ಸಾಧ್ಯವಿಲ್ಲ ಹಾಗೂ ಸುಳ್ಳು ವರದಿಯನ್ನು ಪ್ರಕಟಿಸಿದವರ ವಿರುದ್ಧ  ಮುಂದಿನ ದಿನಗಳಲ್ಲಿ ಕಾನೂನು ಹೋರಾಟವನ್ನು ನಡೆಸಲಿದ್ದೇವೆ ಎಂದು ಎಸ್ ಡಿ ಪಿ ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ಸಿದ್ದೀಕ್ ಕೆ ಎ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

24 hours ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

1 day ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

1 day ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago