ಸುದ್ದಿಗಳು

ಪ್ರತಿಭಟನಾ ಸಭೆಯಲ್ಲಿ ಸೈನಿಕರಿಗೆ ಅವಮಾನ ಎಂಬ ಸುದ್ದಿ ಸತ್ಯಕ್ಕೆ ದೂರವಾದದ್ದು – ಎಸ್ ಡಿ ಪಿ ಐ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು: ಕೇಂದ್ರ ಸರಕಾರದ ಜನವಿರೋಧಿ ಮತ್ತು ರಾಜ್ಯ ಸರಕಾರದ ನಿಷ್ಕ್ರಿಯತೆಯ ಬಗ್ಗೆ ಎಸ್ ಡಿ ಪಿ ಐ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಪುತ್ತೂರಿನಲ್ಲಿ ಪ್ರತಿಭಟನಾ ಸಭೆ ನಡೆಸಲಾಗಿದ್ದು ಈ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುವಾಗ ಸೈನಿಕರನ್ನು ಅವಮಾನಿಸಲಾಗಿದೆ ಎಂದು ಸತ್ಯಕ್ಕೆ ದೂರವಾದದ್ದು ಎಂದು ಎಸ್ ಡಿ ಪಿ ಐ ಸ್ಪಷ್ಟನೆ ನೀಡಿದೆ.

Advertisement

ಕೇಂದ್ರ ಸರಕಾರ ಕಾಶ್ಮೀರದ ವಿಶೇಷ  ಸ್ಥಾನಮಾನವನ್ನು ಕಸಿದುಕೊಂಡ ನಂತರ ಕಾಶ್ಮೀರದಲ್ಲಿ ಉಂಟಾದ ಭಯದ ವಾತಾವರಣವನ್ನು ಮತ್ತು ದೇಶದ ಪ್ರಸಕ್ತ ಸನ್ನಿವೇಶವನ್ನು ವಿವರಿಸಲಾಗಿದೆಯೇ ಹೊರತು ಸೈನಿಕರಿಗೆ ಅವಮಾನ ಮಾಡುವಂತಹ ಯಾವುದೇ ವಿಚಾರಗಳನ್ನು ಉಲ್ಲೇಖಿಸಲಾಗಿಲ್ಲ. ಅದಲ್ಲದೇ ಪ್ರತಿಭಟನೆಯ ಮರುದಿನದ ಬಹುತೇಕ ಮಾಧ್ಯಮ ಗಳಲ್ಲಿಯು ಸ್ಪಷ್ಟವಾದ ವರದಿಗಳೇ ಪ್ರಕಟವಾಗಿದೆ. ಎಸ್ ಡಿ ಪಿ ಐ ಯಾವತ್ತೂ ಕೂಡ ಸಂಘಪರಿವಾರದ ರೀತಿಯಲ್ಲಿ ಸೈನಿಕರನ್ನು ಎಳೆದು ತಂದು ಆ ಮೂಲಕ ರಾಜಕೀಯ ಮಾಡುವ ಪಕ್ಷವಲ್ಲ. ನಮ್ಮ ವಿರುದ್ಧ ಸುಳ್ಳು ದೂರು ದಾಖಲಿಸಿಕೊಂಡು ಜನವಿರೋಧಿ ನೀತಿಯ ಬಗ್ಗೆ ಮಾತನಾಡುವ ಧ್ವನಿಯನ್ನು ಅಡಗಿಸಲು ಖಂಡಿತವಾಗಿಯು ಸಾಧ್ಯವಿಲ್ಲ ಹಾಗೂ ಸುಳ್ಳು ವರದಿಯನ್ನು ಪ್ರಕಟಿಸಿದವರ ವಿರುದ್ಧ  ಮುಂದಿನ ದಿನಗಳಲ್ಲಿ ಕಾನೂನು ಹೋರಾಟವನ್ನು ನಡೆಸಲಿದ್ದೇವೆ ಎಂದು ಎಸ್ ಡಿ ಪಿ ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ಸಿದ್ದೀಕ್ ಕೆ ಎ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾವೇರಿ ನದಿ ನೀರು ಮಲಿನ ತಡೆಯಲು ಕ್ರಮ | ಅಸ್ತಿ ವಿಸರ್ಜನೆ ಮಾಡದಂತೆ ಸೂಚನೆ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…

5 hours ago

ಸ್ವಾತಂತ್ರ್ಯಕ್ಕಾಗಿ ಮದುವೆ

ಕುಟುಂಬ ಎಂಬುದು ಸಮಾಜದ ಆಧಾರ ಸ್ಥಂಭ. ಮದುವೆ ಎಂಬುದು ಈ ಸ್ಥಂಭದ ತಳಪಾಯ.…

5 hours ago

ಅಡಿಕೆ ಕೊಳೆರೋಗ | ಸಿಎಂ ಜೊತೆ ಶಾಸಕ ಅಶೋಕ್ ಕುಮಾರ್ ರೈ ಚರ್ಚೆ

ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…

11 hours ago

ಹವಾಮಾನ ವರದಿ | 14-08-2025 | ಆ.20 ರವರೆಗೂ ಮಳೆ -ತುಂತುರು ಮಳೆ

15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

11 hours ago

ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!

ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…

18 hours ago

ಬಾಗಿಲು ಇಲ್ಲದ ಮನೆಯಂತಾದ ಕನ್ನಡ ಸ್ಥಿತಿ : ರಾಘವೇಶ್ವರ ಶ್ರೀ

ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…

18 hours ago