ಪುತ್ತೂರು: ಕೇಂದ್ರ ಸರಕಾರದ ಜನವಿರೋಧಿ ಮತ್ತು ರಾಜ್ಯ ಸರಕಾರದ ನಿಷ್ಕ್ರಿಯತೆಯ ಬಗ್ಗೆ ಎಸ್ ಡಿ ಪಿ ಐ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಪುತ್ತೂರಿನಲ್ಲಿ ಪ್ರತಿಭಟನಾ ಸಭೆ ನಡೆಸಲಾಗಿದ್ದು ಈ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುವಾಗ ಸೈನಿಕರನ್ನು ಅವಮಾನಿಸಲಾಗಿದೆ ಎಂದು ಸತ್ಯಕ್ಕೆ ದೂರವಾದದ್ದು ಎಂದು ಎಸ್ ಡಿ ಪಿ ಐ ಸ್ಪಷ್ಟನೆ ನೀಡಿದೆ.
ಕೇಂದ್ರ ಸರಕಾರ ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಕಸಿದುಕೊಂಡ ನಂತರ ಕಾಶ್ಮೀರದಲ್ಲಿ ಉಂಟಾದ ಭಯದ ವಾತಾವರಣವನ್ನು ಮತ್ತು ದೇಶದ ಪ್ರಸಕ್ತ ಸನ್ನಿವೇಶವನ್ನು ವಿವರಿಸಲಾಗಿದೆಯೇ ಹೊರತು ಸೈನಿಕರಿಗೆ ಅವಮಾನ ಮಾಡುವಂತಹ ಯಾವುದೇ ವಿಚಾರಗಳನ್ನು ಉಲ್ಲೇಖಿಸಲಾಗಿಲ್ಲ. ಅದಲ್ಲದೇ ಪ್ರತಿಭಟನೆಯ ಮರುದಿನದ ಬಹುತೇಕ ಮಾಧ್ಯಮ ಗಳಲ್ಲಿಯು ಸ್ಪಷ್ಟವಾದ ವರದಿಗಳೇ ಪ್ರಕಟವಾಗಿದೆ. ಎಸ್ ಡಿ ಪಿ ಐ ಯಾವತ್ತೂ ಕೂಡ ಸಂಘಪರಿವಾರದ ರೀತಿಯಲ್ಲಿ ಸೈನಿಕರನ್ನು ಎಳೆದು ತಂದು ಆ ಮೂಲಕ ರಾಜಕೀಯ ಮಾಡುವ ಪಕ್ಷವಲ್ಲ. ನಮ್ಮ ವಿರುದ್ಧ ಸುಳ್ಳು ದೂರು ದಾಖಲಿಸಿಕೊಂಡು ಜನವಿರೋಧಿ ನೀತಿಯ ಬಗ್ಗೆ ಮಾತನಾಡುವ ಧ್ವನಿಯನ್ನು ಅಡಗಿಸಲು ಖಂಡಿತವಾಗಿಯು ಸಾಧ್ಯವಿಲ್ಲ ಹಾಗೂ ಸುಳ್ಳು ವರದಿಯನ್ನು ಪ್ರಕಟಿಸಿದವರ ವಿರುದ್ಧ ಮುಂದಿನ ದಿನಗಳಲ್ಲಿ ಕಾನೂನು ಹೋರಾಟವನ್ನು ನಡೆಸಲಿದ್ದೇವೆ ಎಂದು ಎಸ್ ಡಿ ಪಿ ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ಸಿದ್ದೀಕ್ ಕೆ ಎ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…