ಪುತ್ತೂರು: ಕೇಂದ್ರ ಸರಕಾರದ ಜನವಿರೋಧಿ ಮತ್ತು ರಾಜ್ಯ ಸರಕಾರದ ನಿಷ್ಕ್ರಿಯತೆಯ ಬಗ್ಗೆ ಎಸ್ ಡಿ ಪಿ ಐ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಪುತ್ತೂರಿನಲ್ಲಿ ಪ್ರತಿಭಟನಾ ಸಭೆ ನಡೆಸಲಾಗಿದ್ದು ಈ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುವಾಗ ಸೈನಿಕರನ್ನು ಅವಮಾನಿಸಲಾಗಿದೆ ಎಂದು ಸತ್ಯಕ್ಕೆ ದೂರವಾದದ್ದು ಎಂದು ಎಸ್ ಡಿ ಪಿ ಐ ಸ್ಪಷ್ಟನೆ ನೀಡಿದೆ.
ಕೇಂದ್ರ ಸರಕಾರ ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಕಸಿದುಕೊಂಡ ನಂತರ ಕಾಶ್ಮೀರದಲ್ಲಿ ಉಂಟಾದ ಭಯದ ವಾತಾವರಣವನ್ನು ಮತ್ತು ದೇಶದ ಪ್ರಸಕ್ತ ಸನ್ನಿವೇಶವನ್ನು ವಿವರಿಸಲಾಗಿದೆಯೇ ಹೊರತು ಸೈನಿಕರಿಗೆ ಅವಮಾನ ಮಾಡುವಂತಹ ಯಾವುದೇ ವಿಚಾರಗಳನ್ನು ಉಲ್ಲೇಖಿಸಲಾಗಿಲ್ಲ. ಅದಲ್ಲದೇ ಪ್ರತಿಭಟನೆಯ ಮರುದಿನದ ಬಹುತೇಕ ಮಾಧ್ಯಮ ಗಳಲ್ಲಿಯು ಸ್ಪಷ್ಟವಾದ ವರದಿಗಳೇ ಪ್ರಕಟವಾಗಿದೆ. ಎಸ್ ಡಿ ಪಿ ಐ ಯಾವತ್ತೂ ಕೂಡ ಸಂಘಪರಿವಾರದ ರೀತಿಯಲ್ಲಿ ಸೈನಿಕರನ್ನು ಎಳೆದು ತಂದು ಆ ಮೂಲಕ ರಾಜಕೀಯ ಮಾಡುವ ಪಕ್ಷವಲ್ಲ. ನಮ್ಮ ವಿರುದ್ಧ ಸುಳ್ಳು ದೂರು ದಾಖಲಿಸಿಕೊಂಡು ಜನವಿರೋಧಿ ನೀತಿಯ ಬಗ್ಗೆ ಮಾತನಾಡುವ ಧ್ವನಿಯನ್ನು ಅಡಗಿಸಲು ಖಂಡಿತವಾಗಿಯು ಸಾಧ್ಯವಿಲ್ಲ ಹಾಗೂ ಸುಳ್ಳು ವರದಿಯನ್ನು ಪ್ರಕಟಿಸಿದವರ ವಿರುದ್ಧ ಮುಂದಿನ ದಿನಗಳಲ್ಲಿ ಕಾನೂನು ಹೋರಾಟವನ್ನು ನಡೆಸಲಿದ್ದೇವೆ ಎಂದು ಎಸ್ ಡಿ ಪಿ ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ಸಿದ್ದೀಕ್ ಕೆ ಎ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…