Advertisement
ಯಕ್ಷಗಾನ : ಮಾತು-ಮಸೆತ

ಪ್ರತಿಯೊಬ್ಬರ ಆತ್ಮದ ಉತ್ಕರ್ಷಕ್ಕೆ ಶಾರೀರಿಕವಾದ ಉಲ್ಲಾಸವೂ ಬೇಕು

Share

ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಬ್ರಹ್ಮ’
ಪ್ರಸಂಗ : ಬ್ರಹ್ಮಕಪಾಲ

Advertisement
Advertisement

 

“… ದೇಹ, ಮನಸ್ಸು, ಬುದ್ಧಿ ಈ ಮೂರೂ ಸಮತೋಲನ ಸ್ಥಿತಿಯಲ್ಲಿದ್ದಾಗ ನನ್ನಂತಹವರು ಆತ್ಮಶಕ್ತಿಯನ್ನು ಹೊರಚೆಲ್ಲುತ್ತಾ ಇದ್ದಾರೆ ಎಂಬುದು ತಾತ್ಪರ್ಯ. ಈ ರೀತಿಯ ಇಚ್ಛಾ, ಕ್ರಿಯಾ, ಜ್ಞಾನ – ಈ ಮುಪ್ಪುರಿ ಶಕ್ತಿಯಿಂದ ನಾನು ಏನನ್ನಾದರೂ ಸೃಜಿಸಿದರೆ ಅದು ಯಜ್ಞದಿಂದ ಸೃಷ್ಟಿಯಾಯಿತು ಎಂದರ್ಥ. ಪ್ರಜಾಕೋಟಿಯನ್ನು ಸೃಷ್ಟಿಮಾಡಿ ಅವರಿಗೆಲ್ಲಾ ಯಜ್ಞವನ್ನೇ ಉಪದೇಶಿಸಿದ್ದೇನೆ. ಮಾತ್ರವಲ್ಲ, ಪುರುಷಸೂಕ್ತ ಮಂತ್ರದಲ್ಲಂತೂ ಅದನ್ನು ಪ್ರತಿಪಾದಿಸಿದ್ದೇನೆ. ವಿಶ್ವವಿರಾಟರೂಪಿಯಾದಂತಹ ಸತ್ಯ ಸ್ವರೂಪಕ್ಕೆ ಮುಖವೇ ಬ್ರಾಹ್ಮಣ ವರ್ಗ, ಕ್ಷತ್ರಿಯರೇ ಭುಜಗಳು, ಊರು ಭಾಗವೇ ವೈಶ್ಯರು, ಆಮೇಲೆ ಉಳಿದ ಜನಾಂಗ ಪಾದಸ್ಥಾನಲ್ಲಿದೆ ಅಂತ ಅರ್ಥ. ಹೀಗೆ ಹೇಳುವಾಗ ನಾಲ್ಕನೇ ವರ್ಣದವರು ಕೀಳು ಎಂದು ಅರ್ಥವಲ್ಲ. ಇಡೀ ದೇಹಕ್ಕೆ ಆಧಾರವಾದದ್ದೇ ಪಾದ ತಾನೆ. ಯಜ್ಞಶಕ್ತಿ ಇದು ಕೃತು ಶಕ್ತಿ. ಯಜ್ಞಮೂಲಕವಾಗಿ ಪಡೆದಿದ್ದೇನೆ ಒಬ್ಬಾಕೆ ಹೆಣ್ಣು ಮಗಳನ್ನು…

ಯಜ್ಞಮೂಲಕವಾಗಿ ಪಡೆದಂತಹ ಮಗಳೆಂದರೆ ದೇಹ ಸಂಬಂಧದಿಂದ ಸಂಸಾರಿಗರು ಪಡೆಯುವಂತಹ ಪುತ್ರಿ ಎಂಬರ್ಥವಲ್ಲ. ಜನ್ಮ ಯಾವುದು? ಜನಕ ಯಾವುದು? ಎಂಬ ಅರ್ಥದಲ್ಲಿ ಯಾವುದು ಕಾರಣವಾಗಿ ಯಾವುದು ಹುಟ್ಟಿತು ಎಂಬಲ್ಲಿ ‘ತಂದೆ, ಮಗಳು’ ಸಂಬಂಧ. ಹೀಗೆ ಯಜ್ಞದಲ್ಲಿ ಹುಟ್ಟಿದ ಈ ಶಿಶುವಿಗೆ ‘ಶಾರದಾ’ ಎಂದು ನಾಮಕರಣ ಮಾಡಿದ್ದೇನೆ. ‘ಶರತ್’ ಎಂದರೆ ಬೆಳಕೂ ಹೌದು, ಉತ್ಸಾಹವೂ ಹೌದು. ಆನಂದವೂ ಹೌದು. ಹೀಗೆ ನಾನಾರ್ಥ ಪ್ರತಿಪಾದ್ಯವಾದಂತಹ ಶರತ್ ಶಬ್ದದ ಸಾಕಾರ ಮೂರ್ತಿಯೇ ಯಜ್ಞಮುಖದಿಂದ ಹುಟ್ಟಿದ ‘ಶಾರದಾ’.

ಅರ್ಥ – ಪ್ರತಿಯೊಬ್ಬರ ಆತ್ಮದ ಉತ್ಕರ್ಷಕ್ಕೆ ಶಾರೀರಿಕವಾದ ಉಲ್ಲಾಸವೂ ಬೇಕು. ಶರೀರದಲ್ಲಿ ಚಟುವಟಿಕೆಯಿಲ್ಲದಿದ್ದರೆ ಮನಸ್ಸು ಚಡಪಡಿಸುತ್ತದೆ. ಶಾರೀರಿಕ ಆರೋಗ್ಯ, ಇದಕ್ಕೆ ಅನುಯೋಜ್ಯವಾಗಿ ಮಾನಸಿಕವಾದಂತಹ ಉಲ್ಲಾಸ. ಈ ಮನೋಲ್ಲಾಸ ದೈಹಿಕವಾದಂತಹ ಶಕ್ತಿ. ಇದನ್ನು ಆಧರಿಸಿಕೊಂಡು ನಮ್ಮ ದೀಃಶಕ್ತಿ ಬೆಳೆಯುತ್ತದೆ. ಆದ್ದರಿಂದಲೇ ವ್ರತ, ಉಪವಾಸ, ನೇಮ, ನಿಷ್ಠೆ.. ಇದೆಲ್ಲಾ ದೇಹಕ್ಕೆ, ಮನಸ್ಸಿಗೆ ಉಪದಿಷ್ಟವಾದದ್ದು. ಹಾಗೆ ಸರ್ವಾಂಗೀಣವಾಗಿ ಉತ್ಸಾಹ ತುಂಬಿದಾವಾಗ, ಮನುಷ್ಯರು ಪೂರ್ಣಾನಂದವನ್ನು ಅನುಭವಿಸುತ್ತಾರೆ. ಸತ್, ಚಿತ್, ಆನಂದಾತ್ಮಕವಾದಂತಹ ನಿಗೂಢ ರಹಸ್ಯವನ್ನು ಅವರು ಅನುಭವಿಸಬೇಕಾಗಿದ್ದರೆ ಈ ‘ಶಾರದಾ’ಳನ್ನು ಪೂಜಿಸಬೇಕಾಗುತ್ತದೆ. ಇವಳ ಅನುಗ್ರಹ ಬೇಕಾಗುತ್ತದೆ…”

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

7 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

7 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago