ಸುಳ್ಯ: ತನ್ನ ವಾರ್ಡ್ ನ ಪ್ರತಿ ಮನೆಗೂ ಲಡ್ಡು ಹಂಚಿ ಗೆಲುವಿನ ಸಿಹಿ ಸಂಭ್ರಮವನ್ನು ಹಂಚಿದ್ದಾರೆ ನ.ಪಂ.ಚುನಾವಣೆಯಲ್ಲಿ 17ನೇ ವಾರ್ಡ್ ಬೋರುಗುಡ್ಡೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿ ಜಯಶಾಲಿಯಾದ ಕೆ.ಎಸ್.ಉಮ್ಮರ್.
ಶುಕ್ರವಾರ ತನ್ನ ಬೆಂಬಲಿಗರೊಂದಿಗೆ ವಾರ್ಡ್ ನ ಎಲ್ಲಾ ಮನೆಗಳಿಗೂ ಭೇಟಿ ನೀಡಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಉಮ್ಮರ್ ಮನೆ ಮಂದಿಗೆ ಸಿಹಿ ತಿಂಡಿ ನೀಡಿದರು. ಕೆಲವು ಮನೆಗಳಲ್ಲಿ ನೂತನ ಸದಸ್ಯರನ್ನು ಜನತೆ ಹೂ ಹಾರ ಹಾಕಿ ಸ್ವಾಗತಿಸಿದರು. ವಾರ್ಡ್ ನ ಅಭಿವೃದ್ಧಿಗೆ ಉತ್ತಮ ಕೆಲಸ ಮಾಡುವಂತೆ ಹಿರಿಯರು ಆಶಯ ವ್ಯಕ್ತಪಡಿಸಿದರು.
ನ.ಪಂ.ಚುನಾವಣೆಯಲ್ಲಿ ಅತ್ಯಂತ ಪೈಪೋಟಿ ನಡೆದ ಬೋರುಗುಡ್ಡೆ ವಾರ್ಡ್ ನಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿ ಉಮ್ಮರ್ ಜಯಗಳಿಸಿದ್ದರು. ಕಳೆದ ಬಾರಿ ಎಸ್.ಡಿ.ಪಿ.ಐ ಸದಸ್ಯನಾಗಿದ್ದ ಉಮ್ಮರ್ ಈ ಬಾರಿ ಪಕ್ಷದಿಂದ ದೂರ ಸರಿದು ಪಕ್ಷೇತರನಾಗಿ ಸ್ಪರ್ಧಿಸಿದ್ದರು.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…